AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದ ಕೆಲವೇ ನಿಮಿಷಗಳಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತಂಡದಲ್ಲಿದ್ದ ಬಾಲಕನೊಬ್ಬ ಓಡಿದ ಕೆಲವೇ ನಿಮಿಷಗಳಲ್ಲಿ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದ ಕೆಲವೇ ನಿಮಿಷಗಳಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ
ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದು ಕೆಲವೇ ನಿಮಿಷಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ ಭೀಮಾಶಂಕರ್ (ಎಡಚಿತ್ರ) ಮತ್ತು ರಿಲೇ ಸಾಂದರ್ಭಿಕ ಚಿತ್ರ
Rakesh Nayak Manchi
|

Updated on: Aug 05, 2023 | 3:27 PM

Share

ತುಮಕೂರು, ಆಗಸ್ಟ್ 5: ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಅನುದಾನಿತ ಪ್ರೌಢಶಾಲಾ ತಂಡದಲ್ಲಿ ಭಾಗಿಯಾಗಿದ್ದ 15 ವರ್ಷದ ಬಾಲಕನೊಬ್ಬ ಕೆಲವೇ ನಿಮಿಷಗಳಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ (Heart Attack) ಮೃತಪಟ್ಟ ಘಟನೆ ತುಮಕೂರು (Tumkur) ತಾಲೂಕಿನ ಚಿಕ್ಕತೋಟುಕೆರೆಯಲ್ಲಿ ಗುರುವಾರ (ಆಗಸ್ಟ್ 3) ನಡೆದಿದೆ.

ಬೆಳಧಾರ ಗ್ರಾಮೀಣ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಭೀಮಾಶಂಕರ್ 12 ಸದಸ್ಯರ ರಿಲೇ ತಂಡದ ಸದಸ್ಯನಾಗಿದ್ದ. ಘಟನೆ ಬಗ್ಗೆ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡಿದ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜು, “ಗುರುವಾರ ಸಂಜೆ 5.45 ಕ್ಕೆ ಮುಕ್ತಾಯಗೊಂಡ ರಿಲೇಯಲ್ಲಿ ನಮ್ಮ ತಂಡವು ಎರಡನೇ ಸ್ಥಾನವನ್ನು ಗಳಿಸಿದೆ. ಆರಂಭದಲ್ಲಿ ಭೀಮಾಶಂಕರ್ ತಮ್ಮ ತಂಡಕ್ಕೆ ಮುನ್ನಡೆ ಒದಗಿಸಿದ್ದ. ಆದರೆ ನಂತರ ಓಡಿಹೋದ ಇತರರು ಮುನ್ನಡೆ ಮುಂದುವರಿಸುವಲ್ಲಿ ವಿಫಲರಾದರು. ಹೀಗಾಗಿ ಮೊದಲ ಸ್ಥಾನ ಪಡೆಯಲು ಸಾಧ್ಯವಾಗದ ಹಿನ್ನೆಲೆ ಭೀಮಾಶಂಕರ್ ಅಸಮಾಧಾನಗೊಂಡಿದ್ದ ಎಂದರು.

ಇದನ್ನೂ ಓದಿ: ತುಮಕೂರು: ಮೂಢನಂಬಿಕೆಗೆ ಹಸುಗೂಸು ಬಲಿ ಪ್ರಕರಣ; ಸಾವಿಗೆ ಸತ್ಯಾಂಶ ತಿಳಿಯಲು ಹೂತ್ತಿದ್ದ ಮೃತದೇಹ ಹೊರತೆಗೆದ ಪೊಲೀಸ್ರು

ಓಟದ ನಂತರ, ಶಿಕ್ಷಕರು ವಾಪಸ್ ಗ್ರಾಮಕ್ಕೆ ಮರಳಲು ವಾಹನವನ್ನು ಹತ್ತುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು. ಆದರೆ ಸಂಜೆ 6 ಗಂಟೆ ಸುಮಾರಿಗೆ ಭೀಮಾಶಂಕರ್ ಕುಸಿದುಬಿದ್ದಿದ್ದಾನೆ. ಕೂಡಲೇ ಆತನನ್ನು ಶ್ರೀದೇವಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ವೈದ್ಯರು ಭೀಮಾಶಂಕರ್ ಮೃತಪಟ್ಟಿರುವುದಾಗಿ ಘೋಷಿಸಿದರು. ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾಗಿ ನಾಗರಾಜು ಹೇಳಿದರು.

ಭೀಮಾಶಂಕರ್ ಅವರ ತಂದೆ ಬಸವರಾಜು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಾಗನೂರು ಗ್ರಾಮದವರಾಗಿದ್ದು, ಕೆಂಚಯ್ಯನಪಾಳ್ಯದ ಇಟ್ಟಿಗೆ ಗೂಡುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಘಟನೆ ಸಂಬಂಧ ಭೀಮಾಶಂಕರ್ ತಂದೆ ಕೋರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಬಾಲಕನ ಶವವನ್ನು ಪೋಷಕರಿಗೆ ಹಸ್ತಾಂತರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​