AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀಗರೂಟ ಸೇವಿಸಿದ್ದ 24 ಜನರು ವಾಂತಿ, ಭೇದಿಯಿಂದ ಅಸ್ವಸ್ಥ; ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹೇಳಿದ್ದಿಷ್ಟು

ಬೀಗರ ಊಟ ಮಾಡಿ ವಾಪಸ್‌ ತೆರಳಿದ ನಾಗೇನಹಳ್ಳಿ ತಾಂಡಾದ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. 24 ಮಂದಿಗೆ ಕಾರ್ಯಕ್ರಮ ನಡೆದ ದಿನದಿಂದ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ. ಕಳ್ಳಬಟ್ಟಿ ಸೇವನೆಯಿಂದಲೇ ಹೀಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೀಗರೂಟ ಸೇವಿಸಿದ್ದ 24 ಜನರು ವಾಂತಿ, ಭೇದಿಯಿಂದ ಅಸ್ವಸ್ಥ; ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳು ಹೇಳಿದ್ದಿಷ್ಟು
ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 21, 2024 | 8:09 AM

Share

ತುಮಕೂರು, ಆಗಸ್ಟ್​.21: ಬೀಗರೂಟ ಸೇವಿಸಿದ್ದ 24 ಜನರು ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ತುಮಕೂರು (Tumkur) ಜಿಲ್ಲೆ ಪಾವಗಡ ತಾಲೂಕಿನ ಶ್ರೀರಂಗಪುರ ತಾಂಡಾದಲ್ಲಿ ನಡೆದಿದೆ. ಕಳ್ಳಬಟ್ಟಿ ಸೇವಿಸಿ ಈ ರೀತಿ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಅಸ್ವಸ್ಥಗೊಂಡವರು ಸ್ಥಳೀಯ ಆಸ್ಪತ್ರೆ ಹಾಗೂ ಬೆಂಗಳೂರು, ಪಾವಗಡ, ಹಿಂದೂಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಗಸ್ಟ್ 14 ಮತ್ತು 15ರಂದು ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ಮದುವೆ ನಡೆದಿತ್ತು. ಮರು ದಿನ ಆಗಸ್ಟ್ 16ರಂದು ಶ್ರೀರಂಗಪುರ ತಾಂಡಾದಲ್ಲಿ ಬೀಗರ ಊಟ ಆಯೋಜಿಸಲಾಗಿತ್ತು. ಊಟ ಮಾಡಿ ವಾಪಸ್‌ ತೆರಳಿದ ನಾಗೇನಹಳ್ಳಿ ತಾಂಡಾದ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. 24 ಮಂದಿಗೆ ಕಾರ್ಯಕ್ರಮ ನಡೆದ ದಿನದಿಂದ ವಾಂತಿ, ಭೇದಿಯಾಗಿ ಅಸ್ವಸ್ಥರಾಗಿದ್ದಾರೆ. ಕಳ್ಳಬಟ್ಟಿ ಸೇವನೆಯಿಂದಲೇ ಹೀಗಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಅಸ್ವಸ್ಥಗೊಂಡವರು ಹೊಟ್ಟೆ ನೋವು, ಭೇದಿಯಾಗಿ ಶುಕ್ರವಾರ ರಾತ್ರಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರು, ಪಾವಗಡ, ಹಿಂದೂಪುರದಲ್ಲಿ ತಲಾ ಒಬ್ಬರಂತೆ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಗೇನಹಳ್ಳಿ ತಾಂಡಾಗೆ ಉಪವಿಭಾಗಧಿಕಾರಿ ತಹಶೀಲ್ದಾರ್, ಇಓ‌,‌ ಟಿಹೆಚ್​ಒ‌‌ ಸೇರಿದಂತೆ ಹಲವು‌ ಅಧಿಕಾರಿಗಳ ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದದೆ. ಸದ್ಯ ಕಾರ್ಯಕ್ರಮದಲ್ಲಿ ನೀಡಿದ ನೀರು, ಊಟದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ತಾಯತ ಕಟ್ಟುವ ವಿಚಾರಕ್ಕೆ ಮಸೀದಿಯಲ್ಲಿ ಹೊಡಿಬಡಿ

ತಾಯತ ಕಟ್ಟುವ ವಿಚಾರಕ್ಕೆ ಮಸೀದಿಯಲ್ಲಿ ಮಾರಾಮಾರಿ ನಡೆದಿದೆ. ನೆಲಮಂಗಲ ತಾಲೂಕಿನ ಆಗಲಗುಪ್ಪೆಯಲ್ಲಿ ಘಟನೆ ನಡೆದಿದೆ. ಮಸೀದಿಯಲ್ಲಿ 2 ಕುಟುಂಬಗಳು ಹೊಡೆದಾಡಿಕೊಂಡಿವೆ. ಒಂದೂವರೆ ವರ್ಷದ ಮಗು ಹಾಗೂ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಮಹಿಳೆ, ಮಗು ಮೇಲೆ ಶಫೀಕ್, ಶಾವೀಸ್ & ಆಯಿಶಾ ಅಟ್ಯಾಕ್ ಮಾಡಿದ್ದು ನಮ್ಮ ಬಳಿಯೇ ತಾಯತ ಕಟ್ಟಿಸಿಕೊಳ್ಳಬೇಕೆಂದು ಹಲ್ಲೆ ನಡೆಸಿದ್ದಾರೆ. ದಾಬಸ್​ಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:08 am, Wed, 21 August 24

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ