AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಕೋನಹಳ್ಳಿ ಡ್ಯಾಂನಲ್ಲಿ ಘೋರ ದುರಂತ: ಕೊಚ್ಚಿ ಹೋದ ಒಂದೇ ಕುಟುಂಬದ 7 ಜನ

ತುಮಕೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿಗೆ ಇಳಿದಿದ್ದ ಒಂದೇ ಕುಟುಂಬದ 7 ಜನರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಈಗಾಗಲೇ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಒಬ್ಬರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ ನಾಲ್ವರು ಕಣ್ಮರೆಯಾಗಿದ್ದು, ಶೋಧ ಕಾರ್ಯ ನಡೆದಿದೆ. ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಾರ್ಕೋನಹಳ್ಳಿ ಡ್ಯಾಂನಲ್ಲಿ ಘೋರ ದುರಂತ: ಕೊಚ್ಚಿ ಹೋದ ಒಂದೇ ಕುಟುಂಬದ 7 ಜನ
Markonahalli Dam
Jagadisha B
| Edited By: |

Updated on:Oct 07, 2025 | 7:50 PM

Share

ತುಮಕೂರು, (ಅಕ್ಟೋಬರ್ 07): ಮಾರ್ಕೋನಹಳ್ಳಿ ಡ್ಯಾಂ ( markonahalli dam) ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಏಳು ಜನರು ಕೊಚ್ಚಿಕೊಂಡು ಹೋಗಿದ್ದು, ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದೆ.  ತುಮಕೂರು (tumakuru) ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿಗಿಳಿದ್ದ ಒಂದೇ ಕುಟುಂಬದ 7 ಜನರಲ್ಲಿ ಈಗಾಗಲೇ ಇಬ್ಬರ ಮೃತದೇಹ ಸಿಕ್ಕಿದ್ದು, ಮತ್ತೋಬ್ಬರನ್ನು ರಕ್ಷಣೆ ಮಾಡಲಾಗಿದೆ. ಆದರೆ ಇನ್ನು ನಾಲ್ವರು ಏನಾಗಿದ್ದಾರೆ ಎಂದು ಗೊತ್ತಿಲ್ಲ. ಜಲಾಶಯದಲ್ಲಿ ಮುಳುಗಿ ಸಾಜಿಯಾ, ಅರ್ಬಿನ್ ಸಾವನ್ನಪ್ಪಿದ್ದಾರೆ. ಇನ್ನು ಕಣ್ಮರೆಯಾಗಿರುವ ತಬಾಸುಮ್, ಶಬಾನ, ಮಿಫ್ರಾ, ಮಹಿಬ್​ ಗಾಗಿ ಶೋಧ ಕಾರ್ಯ ನಡೆದಿದೆ.

ಸಾಜಿಯಾ, ಅರ್ಬಿನ್ ಮೃತರು. ತಬಾಸುಮ್ (45), ಶಬಾನ (44), ಮಿಫ್ರಾ (4) ಹಾಗೂ ಮಹಿಬ್ (1) ಕಣ್ಮರೆಯಾದವರು. ಇನ್ನು ನವಾಜ್‌ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇವರೆಲ್ಲರೂ ತುಮಕೂರು ನಗರದ ಬಿ.ಜಿ.ಪಾಳ್ಯದ ನಿವಾಸಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಕಾಂತಾರ ನೋಡಲು ಹೋಗಿದ್ದ ಇಬ್ಬರು ನೀರುಪಾಲು: ಕರ್ನಾಟಕದಲ್ಲಿ ಪ್ರತ್ಯೇಕ ದುರಂತಗಳಲ್ಲಿ 6 ಮಂದಿ ಜಲಸಮಾಧಿ

ಕುಣಿಗಲ್‌ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಊಟ ಮುಗಿಸಿಕೊಂಡು ಜಲಾಶಯಕ್ಕೆ ಹೋಗಿದ್ದರು. ಹಿನ್ನೀರಿನ ಕಾಲುವೆಗೆ ಇಳಿಯುತ್ತಿದ್ದಂತೆಯೇ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಸದ್ಯ ಈ ಸಂಬಂಧ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹುಲಿಯೂರುದುರ್ಗ ಪೊಲೀಸರು ಹಾಗೂ ಅಮೃತೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿ ನಾಪತ್ತೆ ಆಗಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:44 pm, Tue, 7 October 25

ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು