AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ

ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ ಮಾಡುತ್ತಿದ್ದ ಕತರ್ನಾಕ್ ಗ್ಯಾಂಗ್​ನ್ನು ಜಿಲ್ಲೆಯ ಕಿತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ.

tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ
ಬಂಧಿತರಿಂದ 5.58 ಲಕ್ಷ ವಶ, ಮಹಿಳೆಗೆ ವಾಪಸ್.
TV9 Web
| Edited By: |

Updated on: Aug 28, 2022 | 11:03 AM

Share

ತುಮಕೂರು: ಮಹಿಳೆಗೆ ಹಣ ಡಬ್ಲಿಂಗ್ ಆಸೆ ತೋರಿಸಿ, 9.60 ಲಕ್ಷ ರೂ ವಂಚಿಸಿದ್ದ ಐದು ಜನ ಖದೀಮರ ತಂಡವನ್ನು ಜಿಲ್ಲೆಯ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ತುರುವೇಕೆರೆ ತಾಲೂಕಿನ ಸಂಪಿಗೆ ಹೊಸಹಳ್ಳಿ ನಿವಾಸಿ ಮುತ್ತುರಾಜ್, ಬಾಣಸಂದ್ರ ಮೂಲದ ಪುನೀತ್, ತಿಪಟೂರು ನಿವಾಸಿ ವಸಂತಕುಮಾರ್, ಮಹೇಶ್ ಹಾಗೂ ಗಂಗಾಧರ ಬಂಧಿತ ಆರೋಪಿಗಳು. ಬೆಂಗಳೂರು ನಿವಾಸಿ ವಿಜಯಲಕ್ಷ್ಮಿ ವಂಚನೆಗೆ ಒಳಗಾದ ಮಹಿಳೆ. 100 ರೂ ಮುಖಬೆಲೆಯ ಹಳೆ ನೋಟುಗಳನ್ನು ಎರಡು ಪಟ್ಟು ನೀಡುವ ಆಸೆ ಹುಟ್ಟಿಸಿ ಮಹಿಳೆಗೆ ವಂಚಿಸಿದ್ದರು. ಬಂಧಿತರಿಂದ 5.58 ಲಕ್ಷ ವಶಕ್ಕೆ ಪಡೆದಿದ್ದು, ಮಹಿಳೆಗೆ ವಾಪಸ್ ನೀಡಲಾಗಿದೆ. ಜಿಲ್ಲೆಯ ಗುಬ್ಬಿ ತಾಲೂಕಿನ ನಲ್ಲಿಗೆರೆ ಬಳಿ ಮಹಿಳೆಯಿಂದ ಹಣ ಪಡೆದು ಆರೋಪಿಗಳು ಪರಾರಿಯಾಗಿದ್ದರು.

ಡಬ್ಲಿಂಗ್ ಹಣ ಇದೆ ಎಂದು ಬೀಗ ಹಾಕಿದ್ದ ಕಪ್ಪು ಬಣ್ಣದ ಬ್ಯಾಗ್ ನೀಡಿ, ಇಲ್ಲಿ ಎಣಿಕೆ ಬೇಡ ಮನೆಗೆ ಹೋಗಿ ನೋಡಿಕೊಳ್ಳಿ ಎಂದು ಹೋಗಿದ್ದರು. ಮಹಿಳೆ ಬ್ಯಾಗ್ ಹರಿದು ನೋಡಿದಾಗ ಕಾಗದದ ಕಂತೆ ಕಂಡು ಶಾಕ್ ಆಗಿದ್ದಾರೆ. ಕೂಡಲೇ ಗುಬ್ಬಿ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Leopard: 24ನೇ ದಿನಕ್ಕೆ ಕಾಲಿಟ್ಟ ಚಿರತೆ ಸೆರೆ ಕಾರ್ಯಾಚರಣೆ: ದೂರವಾಗದ ಬೆಳಗಾವಿ ಜನರ ಆತಂಕ

ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ: ಬಂಧನ

ಬೆಳಗಾವಿ: ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ ಮಾಡುತ್ತಿದ್ದ ಕತರ್ನಾಕ್ ಗ್ಯಾಂಗ್​ನ್ನು ಜಿಲ್ಲೆಯ ಕಿತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಸೆಹಲ್ ಅಹ್ಮದ್ ತರಸಗಾರ(41), ನಯೀಮ್ ಮುಲ್ಲಾ(30), ಸರ್ವೇಶ್ ತುಡವೇಕರ(38), ಬಸವರಾಜ ಪಾಟೀಲ್(32), ಜಾಕೀರಹುಸೇನ್ ಮನಿಯಾರ(42) ಬಂಧಿತರು. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕೋಳಿ ಮೊಟ್ಟೆ ಸಾಗಿಸುತ್ತಿದ್ದ ಲಾರಿ ಅಡ್ಡಗಟ್ಟಿ ವಸೂಲಿ ಮಾಡಲಾಗಿದೆ. ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದೀಯಾ ಅಂತಾ 4ಲಕ್ಷ 79ಸಾವಿರ ಹಣ ವಸೂಲಿ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ನಂತರ ಕಿತ್ತೂರು ಠಾಣೆಗೆ ಹೋಗಿ ವಿಚಾರಿಸಿದ್ದ ಲಾರಿ ಡ್ರೈವರ್ ಅತಾವುಲ್ಲಾ‌‌, ಈ ವೇಳೆ ನಕಲಿ ಗ್ಯಾಂಗ್ ಅನ್ನೋದು ಗೊತ್ತಾಗಿ ದೂರು ದಾಖಲು ಮಾಡಲಾಗಿದೆ. ಆರೋಪಿಗಳಿಂದ 70 ಸಾವಿರ ಹಣ, ಕೃತ್ಯಕ್ಕೆ ಬಳಸಿದ್ದ ಕಾರು, ಎರಡು ಬೈಕ್ ಹಾಗೂ ನಕಲಿ ಗುರುತಿನ ಚೀಟಿ ಜಪ್ತಿ‌ ಮಾಡಲಾಗಿದೆ. ಇನ್ನೂ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು‌.

ಬೆಳೆಗಳ ಮಧ್ಯೆ ಗಾಂಜಾ ಬೆಳೆ

ಬೀದರ್: ಔರಾದ್ ತಾಲೂಕಿನ ಚಿಂತಾಕಿ ಬಳಿ ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಕೀಶನ್‌ ತಾಂಡಾದ ನಿವಾಸಿ ಪುಂಡಲೀಕ ಎನ್ನುವವನನ್ನು ಬಂಧನ ಮಾಡಲಾಗಿದೆ. ಜಮೀನಿನಲ್ಲಿ ಬೆಳೆಗಳ ನಡುವೆ 15 ಕೆಜಿಯಷ್ಟು ‌ಗಾಂಜಾ ಬೆಳೆದಿದ್ದ ಆರೋಪಿ ಪುಂಡಲೀಕ, ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ