AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ

ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ ಮಾಡುತ್ತಿದ್ದ ಕತರ್ನಾಕ್ ಗ್ಯಾಂಗ್​ನ್ನು ಜಿಲ್ಲೆಯ ಕಿತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ.

tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ
ಬಂಧಿತರಿಂದ 5.58 ಲಕ್ಷ ವಶ, ಮಹಿಳೆಗೆ ವಾಪಸ್.
TV9 Web
| Edited By: |

Updated on: Aug 28, 2022 | 11:03 AM

Share

ತುಮಕೂರು: ಮಹಿಳೆಗೆ ಹಣ ಡಬ್ಲಿಂಗ್ ಆಸೆ ತೋರಿಸಿ, 9.60 ಲಕ್ಷ ರೂ ವಂಚಿಸಿದ್ದ ಐದು ಜನ ಖದೀಮರ ತಂಡವನ್ನು ಜಿಲ್ಲೆಯ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ತುರುವೇಕೆರೆ ತಾಲೂಕಿನ ಸಂಪಿಗೆ ಹೊಸಹಳ್ಳಿ ನಿವಾಸಿ ಮುತ್ತುರಾಜ್, ಬಾಣಸಂದ್ರ ಮೂಲದ ಪುನೀತ್, ತಿಪಟೂರು ನಿವಾಸಿ ವಸಂತಕುಮಾರ್, ಮಹೇಶ್ ಹಾಗೂ ಗಂಗಾಧರ ಬಂಧಿತ ಆರೋಪಿಗಳು. ಬೆಂಗಳೂರು ನಿವಾಸಿ ವಿಜಯಲಕ್ಷ್ಮಿ ವಂಚನೆಗೆ ಒಳಗಾದ ಮಹಿಳೆ. 100 ರೂ ಮುಖಬೆಲೆಯ ಹಳೆ ನೋಟುಗಳನ್ನು ಎರಡು ಪಟ್ಟು ನೀಡುವ ಆಸೆ ಹುಟ್ಟಿಸಿ ಮಹಿಳೆಗೆ ವಂಚಿಸಿದ್ದರು. ಬಂಧಿತರಿಂದ 5.58 ಲಕ್ಷ ವಶಕ್ಕೆ ಪಡೆದಿದ್ದು, ಮಹಿಳೆಗೆ ವಾಪಸ್ ನೀಡಲಾಗಿದೆ. ಜಿಲ್ಲೆಯ ಗುಬ್ಬಿ ತಾಲೂಕಿನ ನಲ್ಲಿಗೆರೆ ಬಳಿ ಮಹಿಳೆಯಿಂದ ಹಣ ಪಡೆದು ಆರೋಪಿಗಳು ಪರಾರಿಯಾಗಿದ್ದರು.

ಡಬ್ಲಿಂಗ್ ಹಣ ಇದೆ ಎಂದು ಬೀಗ ಹಾಕಿದ್ದ ಕಪ್ಪು ಬಣ್ಣದ ಬ್ಯಾಗ್ ನೀಡಿ, ಇಲ್ಲಿ ಎಣಿಕೆ ಬೇಡ ಮನೆಗೆ ಹೋಗಿ ನೋಡಿಕೊಳ್ಳಿ ಎಂದು ಹೋಗಿದ್ದರು. ಮಹಿಳೆ ಬ್ಯಾಗ್ ಹರಿದು ನೋಡಿದಾಗ ಕಾಗದದ ಕಂತೆ ಕಂಡು ಶಾಕ್ ಆಗಿದ್ದಾರೆ. ಕೂಡಲೇ ಗುಬ್ಬಿ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Leopard: 24ನೇ ದಿನಕ್ಕೆ ಕಾಲಿಟ್ಟ ಚಿರತೆ ಸೆರೆ ಕಾರ್ಯಾಚರಣೆ: ದೂರವಾಗದ ಬೆಳಗಾವಿ ಜನರ ಆತಂಕ

ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ: ಬಂಧನ

ಬೆಳಗಾವಿ: ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ ಮಾಡುತ್ತಿದ್ದ ಕತರ್ನಾಕ್ ಗ್ಯಾಂಗ್​ನ್ನು ಜಿಲ್ಲೆಯ ಕಿತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಸೆಹಲ್ ಅಹ್ಮದ್ ತರಸಗಾರ(41), ನಯೀಮ್ ಮುಲ್ಲಾ(30), ಸರ್ವೇಶ್ ತುಡವೇಕರ(38), ಬಸವರಾಜ ಪಾಟೀಲ್(32), ಜಾಕೀರಹುಸೇನ್ ಮನಿಯಾರ(42) ಬಂಧಿತರು. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕೋಳಿ ಮೊಟ್ಟೆ ಸಾಗಿಸುತ್ತಿದ್ದ ಲಾರಿ ಅಡ್ಡಗಟ್ಟಿ ವಸೂಲಿ ಮಾಡಲಾಗಿದೆ. ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದೀಯಾ ಅಂತಾ 4ಲಕ್ಷ 79ಸಾವಿರ ಹಣ ವಸೂಲಿ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ನಂತರ ಕಿತ್ತೂರು ಠಾಣೆಗೆ ಹೋಗಿ ವಿಚಾರಿಸಿದ್ದ ಲಾರಿ ಡ್ರೈವರ್ ಅತಾವುಲ್ಲಾ‌‌, ಈ ವೇಳೆ ನಕಲಿ ಗ್ಯಾಂಗ್ ಅನ್ನೋದು ಗೊತ್ತಾಗಿ ದೂರು ದಾಖಲು ಮಾಡಲಾಗಿದೆ. ಆರೋಪಿಗಳಿಂದ 70 ಸಾವಿರ ಹಣ, ಕೃತ್ಯಕ್ಕೆ ಬಳಸಿದ್ದ ಕಾರು, ಎರಡು ಬೈಕ್ ಹಾಗೂ ನಕಲಿ ಗುರುತಿನ ಚೀಟಿ ಜಪ್ತಿ‌ ಮಾಡಲಾಗಿದೆ. ಇನ್ನೂ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು‌.

ಬೆಳೆಗಳ ಮಧ್ಯೆ ಗಾಂಜಾ ಬೆಳೆ

ಬೀದರ್: ಔರಾದ್ ತಾಲೂಕಿನ ಚಿಂತಾಕಿ ಬಳಿ ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಕೀಶನ್‌ ತಾಂಡಾದ ನಿವಾಸಿ ಪುಂಡಲೀಕ ಎನ್ನುವವನನ್ನು ಬಂಧನ ಮಾಡಲಾಗಿದೆ. ಜಮೀನಿನಲ್ಲಿ ಬೆಳೆಗಳ ನಡುವೆ 15 ಕೆಜಿಯಷ್ಟು ‌ಗಾಂಜಾ ಬೆಳೆದಿದ್ದ ಆರೋಪಿ ಪುಂಡಲೀಕ, ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್