AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ

ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ ಮಾಡುತ್ತಿದ್ದ ಕತರ್ನಾಕ್ ಗ್ಯಾಂಗ್​ನ್ನು ಜಿಲ್ಲೆಯ ಕಿತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ.

tumakur news: ಹಣ ಡಬ್ಲಿಂಗ್ ಆಸೆ ತೋರಿಸಿ ಮಹಿಳೆಯಿಂದ 9.60 ಲಕ್ಷ ರೂ. ವಂಚನೆ: ಐದು ಜನರ ಬಂಧನ
ಬಂಧಿತರಿಂದ 5.58 ಲಕ್ಷ ವಶ, ಮಹಿಳೆಗೆ ವಾಪಸ್.
TV9 Web
| Edited By: |

Updated on: Aug 28, 2022 | 11:03 AM

Share

ತುಮಕೂರು: ಮಹಿಳೆಗೆ ಹಣ ಡಬ್ಲಿಂಗ್ ಆಸೆ ತೋರಿಸಿ, 9.60 ಲಕ್ಷ ರೂ ವಂಚಿಸಿದ್ದ ಐದು ಜನ ಖದೀಮರ ತಂಡವನ್ನು ಜಿಲ್ಲೆಯ ಗುಬ್ಬಿ ಪೊಲೀಸರು ಬಂಧಿಸಿದ್ದಾರೆ. ತುರುವೇಕೆರೆ ತಾಲೂಕಿನ ಸಂಪಿಗೆ ಹೊಸಹಳ್ಳಿ ನಿವಾಸಿ ಮುತ್ತುರಾಜ್, ಬಾಣಸಂದ್ರ ಮೂಲದ ಪುನೀತ್, ತಿಪಟೂರು ನಿವಾಸಿ ವಸಂತಕುಮಾರ್, ಮಹೇಶ್ ಹಾಗೂ ಗಂಗಾಧರ ಬಂಧಿತ ಆರೋಪಿಗಳು. ಬೆಂಗಳೂರು ನಿವಾಸಿ ವಿಜಯಲಕ್ಷ್ಮಿ ವಂಚನೆಗೆ ಒಳಗಾದ ಮಹಿಳೆ. 100 ರೂ ಮುಖಬೆಲೆಯ ಹಳೆ ನೋಟುಗಳನ್ನು ಎರಡು ಪಟ್ಟು ನೀಡುವ ಆಸೆ ಹುಟ್ಟಿಸಿ ಮಹಿಳೆಗೆ ವಂಚಿಸಿದ್ದರು. ಬಂಧಿತರಿಂದ 5.58 ಲಕ್ಷ ವಶಕ್ಕೆ ಪಡೆದಿದ್ದು, ಮಹಿಳೆಗೆ ವಾಪಸ್ ನೀಡಲಾಗಿದೆ. ಜಿಲ್ಲೆಯ ಗುಬ್ಬಿ ತಾಲೂಕಿನ ನಲ್ಲಿಗೆರೆ ಬಳಿ ಮಹಿಳೆಯಿಂದ ಹಣ ಪಡೆದು ಆರೋಪಿಗಳು ಪರಾರಿಯಾಗಿದ್ದರು.

ಡಬ್ಲಿಂಗ್ ಹಣ ಇದೆ ಎಂದು ಬೀಗ ಹಾಕಿದ್ದ ಕಪ್ಪು ಬಣ್ಣದ ಬ್ಯಾಗ್ ನೀಡಿ, ಇಲ್ಲಿ ಎಣಿಕೆ ಬೇಡ ಮನೆಗೆ ಹೋಗಿ ನೋಡಿಕೊಳ್ಳಿ ಎಂದು ಹೋಗಿದ್ದರು. ಮಹಿಳೆ ಬ್ಯಾಗ್ ಹರಿದು ನೋಡಿದಾಗ ಕಾಗದದ ಕಂತೆ ಕಂಡು ಶಾಕ್ ಆಗಿದ್ದಾರೆ. ಕೂಡಲೇ ಗುಬ್ಬಿ ಪೊಲೀಸ್ ಠಾಣೆಗೆ ವಿಜಯಲಕ್ಷ್ಮಿ ದೂರು ನೀಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Leopard: 24ನೇ ದಿನಕ್ಕೆ ಕಾಲಿಟ್ಟ ಚಿರತೆ ಸೆರೆ ಕಾರ್ಯಾಚರಣೆ: ದೂರವಾಗದ ಬೆಳಗಾವಿ ಜನರ ಆತಂಕ

ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ: ಬಂಧನ

ಬೆಳಗಾವಿ: ಪೊಲೀಸರು, ಪತ್ರಕರ್ತರ ಹೆಸರಿನಲ್ಲಿ ಹೆದರಿಸಿ ವಸೂಲಿ ಮಾಡುತ್ತಿದ್ದ ಕತರ್ನಾಕ್ ಗ್ಯಾಂಗ್​ನ್ನು ಜಿಲ್ಲೆಯ ಕಿತ್ತೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿ ಬಂಧಿಸಿದ್ದಾರೆ. ಸೆಹಲ್ ಅಹ್ಮದ್ ತರಸಗಾರ(41), ನಯೀಮ್ ಮುಲ್ಲಾ(30), ಸರ್ವೇಶ್ ತುಡವೇಕರ(38), ಬಸವರಾಜ ಪಾಟೀಲ್(32), ಜಾಕೀರಹುಸೇನ್ ಮನಿಯಾರ(42) ಬಂಧಿತರು. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕೋಳಿ ಮೊಟ್ಟೆ ಸಾಗಿಸುತ್ತಿದ್ದ ಲಾರಿ ಅಡ್ಡಗಟ್ಟಿ ವಸೂಲಿ ಮಾಡಲಾಗಿದೆ. ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದೀಯಾ ಅಂತಾ 4ಲಕ್ಷ 79ಸಾವಿರ ಹಣ ವಸೂಲಿ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ನಂತರ ಕಿತ್ತೂರು ಠಾಣೆಗೆ ಹೋಗಿ ವಿಚಾರಿಸಿದ್ದ ಲಾರಿ ಡ್ರೈವರ್ ಅತಾವುಲ್ಲಾ‌‌, ಈ ವೇಳೆ ನಕಲಿ ಗ್ಯಾಂಗ್ ಅನ್ನೋದು ಗೊತ್ತಾಗಿ ದೂರು ದಾಖಲು ಮಾಡಲಾಗಿದೆ. ಆರೋಪಿಗಳಿಂದ 70 ಸಾವಿರ ಹಣ, ಕೃತ್ಯಕ್ಕೆ ಬಳಸಿದ್ದ ಕಾರು, ಎರಡು ಬೈಕ್ ಹಾಗೂ ನಕಲಿ ಗುರುತಿನ ಚೀಟಿ ಜಪ್ತಿ‌ ಮಾಡಲಾಗಿದೆ. ಇನ್ನೂ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು‌.

ಬೆಳೆಗಳ ಮಧ್ಯೆ ಗಾಂಜಾ ಬೆಳೆ

ಬೀದರ್: ಔರಾದ್ ತಾಲೂಕಿನ ಚಿಂತಾಕಿ ಬಳಿ ಅಕ್ರಮವಾಗಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಕೀಶನ್‌ ತಾಂಡಾದ ನಿವಾಸಿ ಪುಂಡಲೀಕ ಎನ್ನುವವನನ್ನು ಬಂಧನ ಮಾಡಲಾಗಿದೆ. ಜಮೀನಿನಲ್ಲಿ ಬೆಳೆಗಳ ನಡುವೆ 15 ಕೆಜಿಯಷ್ಟು ‌ಗಾಂಜಾ ಬೆಳೆದಿದ್ದ ಆರೋಪಿ ಪುಂಡಲೀಕ, ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​