AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬಾಡಿಗೆ ಕೇಳಿದ್ದಕ್ಕೆ ಥಳಿತ ಪ್ರಕರಣ, ನ್ಯಾಯಕ್ಕಾಗಿ ಗೃಹಸಚಿವರ ಬಳಿ ಅಂಗಲಾಚಿದ ಮಹಿಳೆ

ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಪ್ರಕರಣ ತುಮಕೂರಿನಲ್ಲಿ ನಡೆದಿತ್ತು. ಘಟನೆ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದರೂ ಪೊಲೀಸರು ಆರೋಪಿಯನ್ನು ಇದುವರೆಗೆ ಬಂಧಿಸಿಲ್ಲ. ಹೀಗಾಗಿ ನೊಂದ ಮಹಿಳೆ ನ್ಯಾಯ ಕೊಡಿಸುವಂತೆ ಗೃಹಸಚಿವ ಪರಮೇಶ್ವರ ಅವರ ಬಳಿ ಕೈ ಮುಗಿದು ಅಂಗಲಾಚಿದ್ದಾರೆ.

ತುಮಕೂರು: ಬಾಡಿಗೆ ಕೇಳಿದ್ದಕ್ಕೆ ಥಳಿತ ಪ್ರಕರಣ, ನ್ಯಾಯಕ್ಕಾಗಿ ಗೃಹಸಚಿವರ ಬಳಿ ಅಂಗಲಾಚಿದ ಮಹಿಳೆ
ನ್ಯಾಯಕ್ಕಾಗಿ ಗೃಹಸಚಿವ ಜಿ. ಪರಮೇಶ್ವರ ಬಳಿ ಕೈ ಮುಗಿದು ಅಂಗಲಾಚಿದ ಮಹಿಳೆ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Oct 03, 2023 | 10:38 AM

Share

ತುಮಕೂರು, ಅ.3: ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಥಳಿಸಿದ ಪ್ರಕರಣ ಸಂಬಂಧ ನ್ಯಾಯ ಕೊಡಿಸುವಂತೆ ಮಹಿಳೆಯೊಬ್ಬರು ಗೃಹಸಚಿವ ಪರಮೇಶ್ವರ (Dr.G.Parameshwara) ಅವರ ಬಳಿ ಕೈ ಮುಗಿದು ಅಂಗಲಾಚಿದ್ದಾರೆ. ದೂರು ದಾಖಲಾಗಿ ನಾಲ್ಕು ದಿನ ಕಳೆದರೂ ಆರೋಪಿ ಲಿಂಗರಾಜುನನ್ನ ಬಂಧಿಸದ ಕಾರಣ ಮನನೊಂದ ಹಲ್ಲೆಗೊಳಗಾದ ಮಹಿಳೆಯ ಸಹೋದರಿ ಖುದ್ದು ಗೃಹ ಸಚಿವರನ್ನೇ ಭೇಟಿಯಾಗಿ ನ್ಯಾಯ ಕೊಡಿಸುವಂತೆ ಅಳಲು ತೊಡಿಕೊಂಡಿದ್ದಾರೆ.

ತಿಪಟೂರು ಪಟ್ಟಣದಲ್ಲಿ ಶಾಹಿನ್ ತಾಜ್ ಅವರಿಗೆ ಸೇರಿದ ಕಟ್ಟಡದಲ್ಲಿ ತಿಪಟೂರು ತಾಲೂಕಿನ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು ಬಾಡಿಗೆಗೆ ನೆಲೆಸಿದ್ದರು. ಆದರೆ ಕಳೆದ ಎರಡೂವರೆ ವರ್ಷಗಳಿಂದ ಬಾಡಿಗೆ ಕೊಡದೆ ಸತಾಯಿಸುತ್ತಿದ್ದನು. ಹೀಗಾಗಿ ಬಾಡಿಗೆ ನೀಡುವಂತೆ ಕೇಳಲು ಹೋದ ಶಾಹಿನ್ ತಾಜ್, ಗುಜರ್ ಬಾನು ಅವರ ಮೇಲೆ ಲಿಂಗರಾಜು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಇದೇನು ಹೊಸದಾಗಿ ನಡೆಯುತ್ತಿದ್ಯಾ? ಗೃಹ ಸಚಿವ ಪರಮೇಶ್ವರ್‌ ಉಡಾಫೆ ಮಾತು

ಹಲ್ಲೆಗೊಳಗಾದ ಮಹಿಳೆಯು ತಿಪಟೂರು ಪೊಲೀಸ್ ಠಾಣೆಗೆ ತೆರಳಿ ಲಿಂಗರಾಜು ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಸೆ. 27 ರಂದು ನಡೆದ ಘಟನೆ ಇದಾಗಿದ್ದು, ಗಲಾಟೆ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!