AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಬಾಡಿಗೆ ಕೇಳಿದ್ದಕ್ಕೆ ಥಳಿತ ಪ್ರಕರಣ, ನ್ಯಾಯಕ್ಕಾಗಿ ಗೃಹಸಚಿವರ ಬಳಿ ಅಂಗಲಾಚಿದ ಮಹಿಳೆ

ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ಮಾಡಿರುವ ಪ್ರಕರಣ ತುಮಕೂರಿನಲ್ಲಿ ನಡೆದಿತ್ತು. ಘಟನೆ ಸಂಬಂಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದರೂ ಪೊಲೀಸರು ಆರೋಪಿಯನ್ನು ಇದುವರೆಗೆ ಬಂಧಿಸಿಲ್ಲ. ಹೀಗಾಗಿ ನೊಂದ ಮಹಿಳೆ ನ್ಯಾಯ ಕೊಡಿಸುವಂತೆ ಗೃಹಸಚಿವ ಪರಮೇಶ್ವರ ಅವರ ಬಳಿ ಕೈ ಮುಗಿದು ಅಂಗಲಾಚಿದ್ದಾರೆ.

ತುಮಕೂರು: ಬಾಡಿಗೆ ಕೇಳಿದ್ದಕ್ಕೆ ಥಳಿತ ಪ್ರಕರಣ, ನ್ಯಾಯಕ್ಕಾಗಿ ಗೃಹಸಚಿವರ ಬಳಿ ಅಂಗಲಾಚಿದ ಮಹಿಳೆ
ನ್ಯಾಯಕ್ಕಾಗಿ ಗೃಹಸಚಿವ ಜಿ. ಪರಮೇಶ್ವರ ಬಳಿ ಕೈ ಮುಗಿದು ಅಂಗಲಾಚಿದ ಮಹಿಳೆ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Oct 03, 2023 | 10:38 AM

Share

ತುಮಕೂರು, ಅ.3: ಕಟ್ಟಡದ ಬಾಡಿಗೆ ಕೇಳಿದ್ದಕ್ಕೆ ಥಳಿಸಿದ ಪ್ರಕರಣ ಸಂಬಂಧ ನ್ಯಾಯ ಕೊಡಿಸುವಂತೆ ಮಹಿಳೆಯೊಬ್ಬರು ಗೃಹಸಚಿವ ಪರಮೇಶ್ವರ (Dr.G.Parameshwara) ಅವರ ಬಳಿ ಕೈ ಮುಗಿದು ಅಂಗಲಾಚಿದ್ದಾರೆ. ದೂರು ದಾಖಲಾಗಿ ನಾಲ್ಕು ದಿನ ಕಳೆದರೂ ಆರೋಪಿ ಲಿಂಗರಾಜುನನ್ನ ಬಂಧಿಸದ ಕಾರಣ ಮನನೊಂದ ಹಲ್ಲೆಗೊಳಗಾದ ಮಹಿಳೆಯ ಸಹೋದರಿ ಖುದ್ದು ಗೃಹ ಸಚಿವರನ್ನೇ ಭೇಟಿಯಾಗಿ ನ್ಯಾಯ ಕೊಡಿಸುವಂತೆ ಅಳಲು ತೊಡಿಕೊಂಡಿದ್ದಾರೆ.

ತಿಪಟೂರು ಪಟ್ಟಣದಲ್ಲಿ ಶಾಹಿನ್ ತಾಜ್ ಅವರಿಗೆ ಸೇರಿದ ಕಟ್ಟಡದಲ್ಲಿ ತಿಪಟೂರು ತಾಲೂಕಿನ ಕನಕ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು ಬಾಡಿಗೆಗೆ ನೆಲೆಸಿದ್ದರು. ಆದರೆ ಕಳೆದ ಎರಡೂವರೆ ವರ್ಷಗಳಿಂದ ಬಾಡಿಗೆ ಕೊಡದೆ ಸತಾಯಿಸುತ್ತಿದ್ದನು. ಹೀಗಾಗಿ ಬಾಡಿಗೆ ನೀಡುವಂತೆ ಕೇಳಲು ಹೋದ ಶಾಹಿನ್ ತಾಜ್, ಗುಜರ್ ಬಾನು ಅವರ ಮೇಲೆ ಲಿಂಗರಾಜು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನು.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಇದೇನು ಹೊಸದಾಗಿ ನಡೆಯುತ್ತಿದ್ಯಾ? ಗೃಹ ಸಚಿವ ಪರಮೇಶ್ವರ್‌ ಉಡಾಫೆ ಮಾತು

ಹಲ್ಲೆಗೊಳಗಾದ ಮಹಿಳೆಯು ತಿಪಟೂರು ಪೊಲೀಸ್ ಠಾಣೆಗೆ ತೆರಳಿ ಲಿಂಗರಾಜು ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಸೆ. 27 ರಂದು ನಡೆದ ಘಟನೆ ಇದಾಗಿದ್ದು, ಗಲಾಟೆ ದೃಶ್ಯ ಮೊಬೈಲ್​ನಲ್ಲಿ ಸೆರೆಹಿಡಿಯಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!