AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು

ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ.

ತುಮಕೂರು ಯುವ ಕಾಂಗ್ರೆಸ್ ಘಟಕದಿಂದ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲು
ತುಮಕೂರು ಎಎಸ್‌ಪಿ ಉದೇಶ್‌ಗೆ ಯುವ ಕಾಂಗ್ರೆಸ್ ಘಟಕ ದೂರು ನೀಡಿದೆ
TV9 Web
| Edited By: |

Updated on: Apr 08, 2022 | 9:21 AM

Share

ತುಮಕೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರ ವಿರುದ್ಧ ತುಮಕೂರು ಯುವ ಕಾಂಗ್ರೆಸ್ (Congress) ಘಟಕದಿಂದ ದೂರು ದಾಖಲಾಗಿದೆ. ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆಮಠ್ ನೇತೃತ್ವದಲ್ಲಿ ತುಮಕೂರು ಎಎಸ್ಪಿ ಉದೇಶ್ಗೆ ದೂರು ಸಲ್ಲಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಜಾತಿಗಳ ಮಧ್ಯೆ ಕೋಮುಗಲಭೆ ಸೃಷ್ಟಿ ಮಾಡುವ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.

ವಿವಾದಕ್ಕೆ ಕಾರಣವಾದ ಸಚಿವರ ಹೇಳಿಕೆ ಏನು?: ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡುವಾಗ ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಹಳಷ್ಟು ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಸಚಿವರ ವಿರುದ್ಧ ಹಲವರು ಗರಂ ಆಗಿದ್ದಾರೆ.

ಹೇಳಿಕೆ ತಪ್ಪಾಗಿದೆ ಎಂದ ಆರಗ: ತಕ್ಷಣದ ಮಾಹಿತಿ ಆಧರಿಸಿ ನಾನು ಹೇಳಿಕೆ ನೀಡಿದ್ದೆ. ನಾನು ನೀಡಿರುವ ಹೇಳಿಕೆ ತಪ್ಪಾಗಿದೆ. ಪೊಲೀಸರು ವಿಸ್ತೃತವಾದ ಮಾಹಿತಿ ನೀಡಿದ್ದಾರೆ. ಬೈಕ್ ಡಿಕ್ಕಿಯಾಗಿ ಗಲಾಟೆಯಾಗಿ ಚಂದ್ರುಗೆ ಚೂರಿ ಇರಿತ ಆಗಿದೆ. ಆಸ್ಪತ್ರೆಗೆ ಹೋಗುವಷ್ಟರಲ್ಲಿ ರಕ್ತಸ್ರಾವವಾಗಿ ಚಂದ್ರು ಸಾವನ್ನಪ್ಪಿದ್ದಾರೆ. ಈ ಹಿಂದೆ ನಾನು ನೀಡಿದ್ದ ಹೇಳಿಕೆ ತಪ್ಪಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು. ಮೂಲಗಳ ಮಾಹಿತಿ ಆಧಾರವಾಗಿ ನಾನು ಹೇಳಿಕೆ ನೀಡಿದ್ದೆ. ನಾನು ಈ ಹಿಂದೆ ಹೇಳಿದಂತೆ ಯಾವುದೇ ಘಟನೆ ನಡೆದಿಲ್ಲ. ಉರ್ದು ಮಾತನಾಡದಿದ್ದಕ್ಕೆ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದೆ. ನನ್ನ ಹೇಳಿಕೆ ತಪ್ಪಾಗಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದರು.

ಇದನ್ನೂ ಓದಿ: PBKS vs GT: ಐಪಿಎಲ್​​ನಲ್ಲಿಂದು ಮಯಾಂಕ್ vs ಹಾರ್ದಿಕ್: ಗೆಲುವಿನ ಓಟ ಮುಂದುವರೆಸುತ್ತಾ ಗುಜರಾತ್?

ಕೃಷಿ ಆದಾಯ 10 ಲಕ್ಷ ಮೀರಿದರೆ ಕಟ್ಟುನಿಟ್ಟಿನ ಪರಿಶೀಲನೆ: ತೆರಿಗೆ ನಿಯಮ ಬಿಗಿಗೊಳಿಸಲು ಮುಂದಾದ ಸರ್ಕಾರ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು