AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳ ಬಗೆಹರಿಸಲು ಬಂದ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿ:ಸಿನಿಮೀಯ ರೀತಿಯಲ್ಲಿ ಹಿಡಿದ ಖಾಕಿ

ಎಲ್ಲಾದರೂ ಗಲಾಟೆ, ಜಗಳ ಸೇರಿದಂತೆ ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದರೆ 112ಕ್ಕೆ ಕರೆ ಮಾಡಿದರೆ ಸಾಕು ಪೊಲೀಸರು ಸ್ಥಳಕ್ಕೆ ಬರುತ್ತಾರೆ. ಅದರಂತೆ 122 ವಾಹನದ ಪೊಲೀಸರು ಕರೆಯ ಮೇರೆಗೆ ತುಮಕೂರು ಜಿಲ್ಲೆಯಲ್ಲಿ ಸಹೋದರರ ಜಗಳ ವಿಚಾರಿಸಲು ಬಂದಿದ್ದಾರೆ. ಆದ್ರೆ, ಅದರಲ್ಲೊಬ್ಬ ಕಿಡಿಗೇಡಿ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.

ಜಗಳ ಬಗೆಹರಿಸಲು ಬಂದ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿ:ಸಿನಿಮೀಯ ರೀತಿಯಲ್ಲಿ ಹಿಡಿದ ಖಾಕಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Nov 21, 2023 | 11:18 AM

Share

ತುಮಕೂರು, (ನವೆಂಬರ್ 21): ಪೊಲೀಸ್ ವಾಹನ (Police vehicle 112ಸಮೇತ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಹಿಡಿದಿದ್ದಾರೆ. ತುಮಕೂರು (tumakuru) ಜಿಲ್ಲೆ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ (ನವೆಂಬರ್ 20) ತಡರಾತ್ರಿ ನಾರಾನಹಳ್ಳಿಗೆ ಗ್ರಾಮದಲ್ಲಿ ಮುನಿಯ ಎನ್ನುವಾತ ತನ್ನ ಅಣ್ಣನ ಜೊತೆ  ಗಲಾಟೆ ಮಾಡಿದ್ದಾನೆ. ಆಗ ಮುನಿಯನ ಸಹೋದರ 112 ಸಂಖ್ಯೆಗೆ ಕರೆ ಮಾಡಿದ್ದ. ಅದರಂತೆ ಪೋಲಿಸರ 112 ವಾಹನ ಸ್ಥಳಕ್ಕೆ ಗ್ರಾಮಕ್ಕೆ ಬಂದಿದೆ. ಆ ವೇಳೆ ಮುನಿಯ  ಪೊಲೀಸರ 122​ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಸತತ 3 ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ವಾಹನದ ಜೊತೆಗೆ ಮುನಿಯನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ತಡರಾತ್ರಿ ಗ್ರಾಮದ ಸಹೋದರಿಬ್ಬರ ನಡುವೆ ಗಲಾಟೆ ಆಗಿದ್ದರಿಂದ 122ಕ್ಕೆ ಕರೆ ಮಾಡಲಾಗಿದೆ. ಕೂಡಲೇ ಪೋಲಿಸರು ಸ್ಥಳಕ್ಕಾಗಮಿಸಿದ್ದಾರೆ. ಈ ವೇಳೆ ಮುನಿಯ 112 ವಾಹನದ ಹಿಂಬದಿಗೆ ಕಲ್ಲಿನಿಂದ ಹೊಡೆದಿದ್ದಾನೆ. ಅದನ್ನು 112 ಚಾಲಕ ಏನಾಯ್ತು ಎಂದು ವಾಹನ ಹಿಂಬದಿಗೆ ನೋಡಲು ಹೋಗಿದ್ದಾನೆ. ಆಗ ಮುನಿಯ ವಾಹನವನ್ನು ಚಲಾಯಿಸಿಕೊಂಡು ಹೋಗಿದ್ದಾನೆ.

ಇದನ್ನೂ ಓದಿ: ಮಗಳನ್ನ ಹೊತ್ತೊಯ್ದಿದಲ್ಲದೆ 1.5 ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್

ಇದರಿಂದ ಕಂಗಾಲಾದ ಪೊಲೀಸರು ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದ ಬಳಿಕ ತುಮಕೂರು ತಾಲೂಕಿನ ಹೆಬ್ಬೂರು ಬಳಿ 122 ವಾಹನ ಪತ್ತೆಯಾಗಿದೆ. ಬಳಿಕ ಪೊಲೀಸರು ನಿಟ್ಟುಸಿರುಬಿಟ್ಟಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುನಿಯ ಮದ್ಯ ವ್ಯಸನಿ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Tue, 21 November 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ