AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳ ಬಗೆಹರಿಸಲು ಬಂದ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿ:ಸಿನಿಮೀಯ ರೀತಿಯಲ್ಲಿ ಹಿಡಿದ ಖಾಕಿ

ಎಲ್ಲಾದರೂ ಗಲಾಟೆ, ಜಗಳ ಸೇರಿದಂತೆ ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದರೆ 112ಕ್ಕೆ ಕರೆ ಮಾಡಿದರೆ ಸಾಕು ಪೊಲೀಸರು ಸ್ಥಳಕ್ಕೆ ಬರುತ್ತಾರೆ. ಅದರಂತೆ 122 ವಾಹನದ ಪೊಲೀಸರು ಕರೆಯ ಮೇರೆಗೆ ತುಮಕೂರು ಜಿಲ್ಲೆಯಲ್ಲಿ ಸಹೋದರರ ಜಗಳ ವಿಚಾರಿಸಲು ಬಂದಿದ್ದಾರೆ. ಆದ್ರೆ, ಅದರಲ್ಲೊಬ್ಬ ಕಿಡಿಗೇಡಿ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ.

ಜಗಳ ಬಗೆಹರಿಸಲು ಬಂದ ಪೊಲೀಸರ 122 ವಾಹನವನ್ನೇ ಚಲಾಯಿಸಿಕೊಂಡು ಪರಾರಿ:ಸಿನಿಮೀಯ ರೀತಿಯಲ್ಲಿ ಹಿಡಿದ ಖಾಕಿ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Nov 21, 2023 | 11:18 AM

Share

ತುಮಕೂರು, (ನವೆಂಬರ್ 21): ಪೊಲೀಸ್ ವಾಹನ (Police vehicle 112ಸಮೇತ ಪರಾರಿಯಾಗಲು ಯತ್ನಿಸಿದ ಕಿಡಿಗೇಡಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಹಿಡಿದಿದ್ದಾರೆ. ತುಮಕೂರು (tumakuru) ಜಿಲ್ಲೆ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನಿನ್ನೆ (ನವೆಂಬರ್ 20) ತಡರಾತ್ರಿ ನಾರಾನಹಳ್ಳಿಗೆ ಗ್ರಾಮದಲ್ಲಿ ಮುನಿಯ ಎನ್ನುವಾತ ತನ್ನ ಅಣ್ಣನ ಜೊತೆ  ಗಲಾಟೆ ಮಾಡಿದ್ದಾನೆ. ಆಗ ಮುನಿಯನ ಸಹೋದರ 112 ಸಂಖ್ಯೆಗೆ ಕರೆ ಮಾಡಿದ್ದ. ಅದರಂತೆ ಪೋಲಿಸರ 112 ವಾಹನ ಸ್ಥಳಕ್ಕೆ ಗ್ರಾಮಕ್ಕೆ ಬಂದಿದೆ. ಆ ವೇಳೆ ಮುನಿಯ  ಪೊಲೀಸರ 122​ ವಾಹನ ಚಲಾಯಿಸಿಕೊಂಡು ಪರಾರಿಯಾಗಿದ್ದಾನೆ. ಬಳಿಕ ಪೊಲೀಸರು ಸತತ 3 ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ವಾಹನದ ಜೊತೆಗೆ ಮುನಿಯನನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಾರಾನಹಳ್ಳಿಯಲ್ಲಿ ತಡರಾತ್ರಿ ಗ್ರಾಮದ ಸಹೋದರಿಬ್ಬರ ನಡುವೆ ಗಲಾಟೆ ಆಗಿದ್ದರಿಂದ 122ಕ್ಕೆ ಕರೆ ಮಾಡಲಾಗಿದೆ. ಕೂಡಲೇ ಪೋಲಿಸರು ಸ್ಥಳಕ್ಕಾಗಮಿಸಿದ್ದಾರೆ. ಈ ವೇಳೆ ಮುನಿಯ 112 ವಾಹನದ ಹಿಂಬದಿಗೆ ಕಲ್ಲಿನಿಂದ ಹೊಡೆದಿದ್ದಾನೆ. ಅದನ್ನು 112 ಚಾಲಕ ಏನಾಯ್ತು ಎಂದು ವಾಹನ ಹಿಂಬದಿಗೆ ನೋಡಲು ಹೋಗಿದ್ದಾನೆ. ಆಗ ಮುನಿಯ ವಾಹನವನ್ನು ಚಲಾಯಿಸಿಕೊಂಡು ಹೋಗಿದ್ದಾನೆ.

ಇದನ್ನೂ ಓದಿ: ಮಗಳನ್ನ ಹೊತ್ತೊಯ್ದಿದಲ್ಲದೆ 1.5 ವರ್ಷದ ಬಳಿಕ ಅತ್ತೆ ಮನೆಗೆ ಕನ್ನ ಹಾಕಿ ಚಿನ್ನಾಭರಣ ಹೊತ್ತೊಯ್ದಿದ್ದ ಅಳಿಯ ಕೊನೆಗೂ ಅರೆಸ್ಟ್

ಇದರಿಂದ ಕಂಗಾಲಾದ ಪೊಲೀಸರು ಸತತ ಮೂರು ಗಂಟೆಗಳ ಕಾಲ ಹುಡುಕಾಟ ನಡೆಸಿದ ಬಳಿಕ ತುಮಕೂರು ತಾಲೂಕಿನ ಹೆಬ್ಬೂರು ಬಳಿ 122 ವಾಹನ ಪತ್ತೆಯಾಗಿದೆ. ಬಳಿಕ ಪೊಲೀಸರು ನಿಟ್ಟುಸಿರುಬಿಟ್ಟಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುನಿಯ ಮದ್ಯ ವ್ಯಸನಿ ಎಂದು ತಿಳಿದುಬಂದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Tue, 21 November 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?