AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು

ಸ್ನೇಹಿತನ ಜೊತೆ ಪತ್ನಿ ಪರಾರಿಯಾದ ದುರಂತವನ್ನು ಸಹಿಸಲಾಗದೇ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 12 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ. ಆದ್ರೆ, ಈಗ ಹೆಂಡ್ತಿ ಸ್ನೇಹಿತನ ಜೊತೆ ಪರಾರಿಯಾಗಿದ್ದಾಳೆ. ಎರಡು ಮಕ್ಕಳಿದ್ದರೂ ಸಹ ಪತ್ನಿ ಬೇರೊಬ್ಬನ ಜತೆ ಓಡಿ ಹೋಗಿದ್ದರಿಂದ ಮನನೊಂದ ಪತಿ ಸೆಲ್ಫಿ ವಿಡಿಯೋ ಮಾಡಿ ಸಾವಿಗೆ ಶರಣಾಗಿದ್ದಾನೆ. ಸೆಲ್ಫಿ ವಿಡಿಯೋನಲ್ಲಿದೆ? ಈ ಘಟನೆ ನಡೆದಿದ್ದು ಎಲ್ಲಿ ಎನ್ನುವ ವಿವರ ಇಲ್ಲಿದೆ.

ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು
ರಂಜಿತಾ-ಭರತ್, ನಾಗೇಶ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Feb 18, 2025 | 7:25 PM

Share

ತುಮಕೂರು (ಫೆಬ್ರವರಿ.18): ಪತ್ನಿ ಸ್ನೇಹಿತನ ಜೊತೆ ಪರಾರಿಯಾಗಿರುವುದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ನಡೆದಿದೆ. ನಾಗೇಶ್ (35) ಮೃತ ವ್ಯಕ್ತಿ. ನಾಗೇಶ್ ಕಳೆದ 12 ವರ್ಷಗಳಿಂದ ರಂಜಿತಾಳನ್ನು ಪ್ರೀತಿಸಿ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದರೂ ಸಹ ರಂಜಿತಾ ಈಗ ಪ್ರೀತಿಸಿ ಮದುವೆಯಾದ ಗಂಡನನ್ನು ಬಿಟ್ಟು ಬೇರೊಬ್ಬನ ಜೊತೆ ಮನೆಬಿಟ್ಟು ಪರಾರಿಯಾಗಿದ್ದಾಳೆ. ಇದರಿಂದ ಮನನೊಂದು ನಾಗೇಶ್, ನನ್ನ ಸಾವಿಗೆ ಪತ್ನಿ ರಂಜಿತಾ, ಸ್ನೇಹಿತ ಭರತ್ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾಗಿದ್ದಾನೆ.

ನಾಗೇಶ್‌ ಸ್ನೇಹಿತ ಭರತನಿಗೆ ರಂಜಿತಾ ಪರಿಚವಾಗಿದ್ದು, ಬಳಿಕ ಅದು ಇಬ್ಬರ ಮಧ್ಯ ಪ್ರೇಮಾಂಕುರವಾಗಿದೆ. ಬಳಿಕ ರಂಜಿತಾ ಭರತನ ಜೊತೆ ಅನೈತಕ ಸಂಬಂಧ ಇಟ್ಟುಕೊಂಡಿದ್ದಳು. ಆದ್ರೆ, ಇದೀಗ ಇಬ್ಬರು ಮಕ್ಕಳನ್ನು ಬಿಟ್ಟು ಭರತ್‌ ಜೊತೆ ಪರಾರಿಯಾಗಿದ್ದಾಳೆ. ಈ ಘಟನೆದಿಂದ ಮನನೊಂದ ನಾಗೇಶ್, ಮನನೊಂದಿದ್ದಾರೆ. ಅಲ್ಲದೇ ಹೆಂಡ್ತಿ ಹೀಗೆ ಬೇರೊಬ್ಬರನ ಜೊತೆ ಓಡಿಹೋಗಿದ್ದಾಳೆಂಬ ಮರ್ಯಾದೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಪರಸ್ತ್ರಿಯೊಂದಿಗೆ ಪತಿ ಲವ್ವಿಡವ್ವಿ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಇನ್ನು ಆತ್ಮಹತ್ಯೆಗೆ ಮುನ್ನ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. “ನನ್ನ ಸಾವಿಗೆ ಪತ್ನಿ ರಂಜಿತಾ ಹಾಗೂ ಸ್ನೇಹಿತ ಭರತ್ ಕಾರಣ. ನನಗೆ ನ್ಯಾಯ ಕೊಡಿಸಬೇಕು ಎಂದು ವಿಡಿಯೋನಲ್ಲಿ ಹೇಳಿಕೊಂಡಿದ್ದಾನೆ. ಇನ್ನು ಈ ವಿಡಿಯೋ ನೋಡಿದ ಹಲವು ಸ್ನೇಹಿತರು ಮನೆಯತ್ತ ಬರುವ ವೇಳೆಗೆ ನಾಗೇಶ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.

ಘಟನಾ ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿ ಬೇರೊಬ್ಬನ ಜತೆ ಓಡಿಹೋಗಿದ್ದರೆ, ಇತ್ತ ತಂದೆ ಸಾವಿನ ಮನೆ ಸೇರಿದ್ದರಿಂದ ಎರಡು ಮಕ್ಕಳು ಅನಾಥವಾಗಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:46 pm, Tue, 18 February 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ