AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ, ಆಡಿಯೋ ಮೆಸೇಜ್​ನಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟ

ಪತ್ನಿಯ ಕಾಟಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. ಇನ್ನು ಆತ್ಮಹತ್ಯೆಗೂ ಮುನ್ನ ಮಂಜುನಾಥ್​ ತನ್ನ ಸಹೋದರನಿಗೆ ಆಡಿಯೋ ಮೆಸೇಜ್​ ಕಳುಹಿಸಿದ್ದು, ಆಡಿಯೋದಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟಿದ್ದಾರೆ.

ಪತ್ನಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ, ಆಡಿಯೋ ಮೆಸೇಜ್​ನಲ್ಲಿ ಹೆಂಡ್ತಿಯ ಕರಾಳ ಮುಖ ಬಿಚ್ಚಿಟ್ಟ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Sep 14, 2023 | 1:45 PM

Share

ತುಮಕೂರು, (ಸೆಪ್ಟೆಂಬರ್ 14): ಪತ್ನಿಯ(Wife) ಕಾಟಕ್ಕೆ ಬೇಸತ್ತು ಪತಿ(Husband) ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರು (Tumakuru) ಜಿಲ್ಲೆ ಕೆ.ಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. ಮಂಜುನಾಥ್ (38) ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಮೃತ ದುರ್ದೈವಿ. ಬೆಂಗಳೂರಿನ ಬಿಎಂಆರ್ ಸಿಎಲ್ ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಂಜುನಾಥ್, ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರೀಯಾಂಕಳನ್ನ ಮದುವೆಯಾಗಿದ್ದ. ಬಳಿಕ ದಂಪತಿ ಬೆಂಗಳೂರಿನಲ್ಲಿ ವಾಸವಿತ್ತು. ಆದ್ರೆ, ಹೊಂದಾಣಿಕೆ ಇಲ್ಲದೇ ಪದೇ ಪದೇ ಗಂಡ ಹೆಂಡತಿ ನಡುವೆ ಗಲಾಟೆ ನಡೆಯುತ್ತಿತ್ತು. ನೀನು ಹಳ್ಳಿ ಗುಗ್ಗು ನಿನ್ನನ್ನ ಮದುವೆಯಾಗಲು ನನಗೆ ಇಷ್ಟ ಇರಲಿಲ್ಲ ಎಂದು ಪ್ರೀಯಾಂಕ, ಪತಿ ಮಂಜುನಾಥನಿಗೆ ಪದೇ ಪದೇ ಕಿಚಾಯಿಸುತ್ತಿದ್ದಳಂತೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಪದೇ ಪದೇ ಗಲಾಟೆ ನಡೆಯುತ್ತಿತ್ತು. ಕೊನೆಗೆ ಇದೀಗ ಮಂಜುನಾಥ್ ಪತ್ನಿಯ ಕಿರುಕುಳಕ್ಕೆ ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕೋಲಾರ: ಕೊಳೆತ ಸ್ಥಿತಿಯಲ್ಲಿ ತಂದೆ ಮಗನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಆತ್ಮಹತ್ಯೆಯ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೇಸೆಜ್ ಕಳುಹಿಸಿದ್ದು, ನನಗೆ ಅವಳ ಜೊತೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಆ ಮನೆ ಹಾಳಿಯಿಂದ ನಾನು ಸಾಯುತ್ತಿದ್ದೇನೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ ಎಂದು ಆಡಿಯೋ ಮೇಸೆಜ್ ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಪತ್ನಿ ಪ್ರೀಯಾಂಕಳ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು,ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!