AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು, 40 ಸಾವಿರ ದಂಡ

ವಿಚಾರಣೆ ನಡೆಸಿದ ತುಮಕೂರು ಪೋಕ್ಸೋ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ನ್ಯಾಯಾಧೀಶ ಕೃಷ್ಣಯ್ಯ ಅವರು ಆದೇಶ ನೀಡಿದ್ದು, ಸರ್ಕಾರಿ ವಕೀಲೆ ಬಿವಿ ಗಾಯತ್ರಿ ರಾಜು ವಾದ ಮಂಡಿಸಿದ್ದರು.

15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ 10 ವರ್ಷ ಜೈಲು, 40 ಸಾವಿರ ದಂಡ
ಜೈಲು (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Nov 13, 2021 | 12:02 PM

Share

ತುಮಕೂರು: 15 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ ಅಪರಾಧಿಗೆ ಕೋರ್ಟ್ 10 ವರ್ಷ ಜೈಲು ಹಾಗೂ 40 ಸಾವಿರ ದಂಡ ಹಾಕಿದೆ. ತುಮಕೂರಿನ ಪೋಕ್ಸೋ ನ್ಯಾಯಾಲಯವು ಆದೇಶ ನೀಡಿದ್ದು, ಅತ್ಯಾಚಾರ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿದೆ. 2019ರಲ್ಲಿ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 28 ವರ್ಷದ ಮಂಜುನಾಥ್ ಎಂಬುವವನು 15 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರ ಮಾಡಿದ್ದ. ಈ ಬಗ್ಗೆ ಪೋಕ್ಸೋ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ ತುಮಕೂರು ಪೋಕ್ಸೋ ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದೆ. ನ್ಯಾಯಾಧೀಶ ಕೃಷ್ಣಯ್ಯ ಅವರು ಆದೇಶ ನೀಡಿದ್ದು, ಸರ್ಕಾರಿ ವಕೀಲೆ ಬಿವಿ ಗಾಯತ್ರಿ ರಾಜು ವಾದ ಮಂಡಿಸಿದ್ದರು. ಸದ್ಯ ಅತ್ಯಾಚಾರ ಆರೋಪಿಗೆ ಹತ್ತು ವರ್ಷ ಜೈಲು ಹಾಗೂ 40 ಸಾವಿರ ರೂ. ದಂಡ ವಿಧಿಸಿದೆ. ಈ ಮೂಲಕ ನೊಂದ ಹೆಣ್ಣು ಮಗಳಿಗೆ ನ್ಯಾಯ ಸಿಕ್ಕಂತಾಗಿದೆ.

ಅಪರಾಧಿ ಗ್ರಾಮದಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ. ಗ್ರಾಮದ 15 ವರ್ಷದ ಬಾಲಕಿಯನ್ನ ಯಾರು ಇಲ್ಲದ ಸಮಯದಲ್ಲಿ ಅಪಹರಿಸಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನ ಅಪಹರಿಸಿ ಗ್ರಾಮದ ಹೊರವಲಯಕ್ಕೆ ತಂದು ಕೃತ್ಯ ಎಸಗಿದ್ದ. ಅಲ್ಲದೇ ಈ ಬಗ್ಗೆ ಮನೆಯಲ್ಲಿ ಅಥವಾ ಯಾರಿಗಾದರೂ ತಿಳಿಸಿದರೇ ಕೊಲೆ ಮಾಡುವ ಬೆದರಿಕೆ ಹಾಕಿದ್ದನಂತೆ. ಮನೆಯಲ್ಲಿ ಅನುಮಾನ ಬಂದು ಪೋಷಕರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿತ್ತು. ಬಳಿಕ ಪೋಷಕರು ನೀಡಿದ ದೂರು ದಾಖಲಾಗಿ ವಿಚಾರಣೆ ನಡೆಯುತ್ತಿತ್ತು. ಸದ್ಯ ತುಮಕೂರಿನ ಪೋಕ್ಸೋ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯ; ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ವಾಷಿಂಗ್ ಮಷೀನ್‌ ಸುಟ್ಟು ಭಸ್ಮ

ರೈತರಿಗೆ ಮೋಸ ಮಾಡಿದ್ದ ಆರೋಪಿಗಳಿಂದ ಹಣ ವಸೂಲಿ; ಪೊಲೀಸರ ಕಾರ್ಯಕ್ಕೆ ಮೆಚ್ಚಿ 1 ಲಕ್ಷ ರೂ. ಬಹುಮಾನ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!