AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಗಂಡ

ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಂಡತಿಯ ಕಾಲು ಕತ್ತರಿಸಿದ್ದೇನೆ, ಆಸ್ಪತ್ರೆಗೆ ಸೇರಿಸಬೇಕು ಅಂತ ಬಾಬು ಹೇಳಿಕೊಂಡಿದ್ದಾನೆ. ಸದ್ಯ ಆರೋಪಿ ತುಮಕೂರು ನಗರ ಪೊಲೀಸರ ವಶದಲ್ಲಿದ್ದು, ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿ ಕಾಲು ಕತ್ತರಿಸಿ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡ ಗಂಡ
ಗಾಯಗೊಂಡಿರುವ ಮಹಿಳೆ
TV9 Web
| Edited By: |

Updated on:Mar 16, 2022 | 12:03 PM

Share

ತುಮಕೂರು: ತುಮಕೂರಿನ ಅಶೋಕ ಲಾಡ್ಜ್ ಅಂಡ್ ಹೋಟೆಲ್​ನಲ್ಲಿ ಹೆಂಡತಿಯ (Wife) ಕಾಲು (Leg) ಕತ್ತರಿಸಿದ ಗಂಡ, ತಾನೂ ಹೊಟ್ಟೆಗೆ ಚೂರಿ ಹಾಕಿಕೊಂಡಿದ್ದಾನೆ. ಘಟನೆಯಲ್ಲಿ ಮಧುಗಿರಿ ಮೂಲದ ಅನಿತಾ ಎಂಬ ಮಹಿಳೆ ಗಾಯಗೊಂಡಿದ್ದು, ಪತಿ ಬಾಬುನನ್ನು (34) ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ವರ್ಷದ ಹಿಂದೆ ಬಾಬು ಅನಿತಾಳನ್ನು ಮದುವೆಯಾಗಿದ್ದ. ಬೆಳಗ್ಗೆ 6 ಗಂಟೆ ಹೊತ್ತಿಗೆ ಅಶೋಕ ಲಾಡ್ಜ್​ಗೆ ದಂಪತಿ ಬಂದಿತ್ತು. ಬ್ಯಾಗ್​ನಲ್ಲಿ ಬಾಬು ಮಚ್ಚು ತೆಗೆದುಕೊಂಡು ಬಂದಿದ್ದ. ಹೆಂಡತಿಯನ್ನು ಕೊಲೆ ಮಾಡುವ ಉದ್ದೇಶದಿಂದಲ್ಲೇ ಹೆಂಡತಿಯನ್ನು ಲಾಡ್ಜ್​ಗೆ ಕರೆದುಕೊಂಡು ಬಂದಿದ್ದ.

ಗಾಯಗೊಂಡ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಂಡತಿಯ ಕಾಲು ಕತ್ತರಿಸಿದ್ದೇನೆ, ಆಸ್ಪತ್ರೆಗೆ ಸೇರಿಸಬೇಕು ಅಂತ ಬಾಬು ಹೇಳಿಕೊಂಡಿದ್ದಾನೆ. ಸದ್ಯ ಆರೋಪಿ ತುಮಕೂರು ನಗರ ಪೊಲೀಸರ ವಶದಲ್ಲಿದ್ದು, ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗೆಳೆಯನನ್ನೇ ಕೊಂದು ಹೂತು ಹಾಕಿದ್ದ ಕೇಸ್ ಬಯಲು: ತಂಗಿಯನ್ನು ಪ್ರೀತಿಸಿದ್ದಕ್ಕೆ ಗೆಳೆಯನನ್ನೇ ಕೊಂದು ಹೂತು ಹಾಕಿದ್ದ ಪ್ರಕರಣ ಬಯಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ಅನಿಲ್ ರಾಜ್(22) ಕೊಲೆಯಾದ ಯುವಕ. ಈತ ಗೆಳೆಯ ಪ್ರಸಾದ್ ತಂಗಿಯನ್ನ ಪ್ರೀತಿಸುವಂತೆ ಪೀಡಿಸುತ್ತಿದ್ದ. ಪ್ರೀತಿ ವಿಚಾರವಾಗಿ ಗೆಳೆಯರ ಕುಟುಂಬದ ನಡುವೆ ಗಲಾಟೆ ನಡೆದಿತ್ತು. ಗಲಾಟೆ ಬಳಿಕವು ಗೆಳೆಯರು ಒಟ್ಟಿಗೇ ಓಡಾಡಿಕೊಂಡಿದ್ದರು.  ಮಾ.14ರಂದು ಮತ್ತೊಬ್ಬ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಮನೆ ಬಳಿ ಬಂದಾಗ ಅನಿಲ್ ಕೊಲೆ ನಡೆದಿದೆ.

ಅನಿಲ್ ಕೊಲೆ ಮಾಡಿ ಪ್ರಸಾದ್ ಮನೆ ಸಮೀಪದ ಹೊಂಡದಲ್ಲಿ ಮೃತದೇಹವನ್ನು ಹೂತುಹಾಕಿದ್ದ. ಪ್ರಕರಣ ಸಂಬಂಧ ಗೆಳೆಯ ಪ್ರಸಾದ್, ಪ್ರಸಾದ್​ನ ತಂಗಿ, ತಾಯಿ ಜಯಲಕ್ಷ್ಮಿ, ಸಹೋದರ ಮೋಹನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಅಪರಿಚಿತ ಯುವಕನ ಶವ ಪತ್ತೆ: ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ನಗರ ಬಳಿ ರಕ್ತದ ಮಡುವಿನಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಹರಿಹರದ ಮಹಾತ್ಮಾ ಗಾಂಧಿ ಕಾಂಪ್ಲೆಕ್ಸ್‌ನ ಮಳಿಗೆ ಎದುರು‌ ಶವ ಪತ್ತೆಯಾಗಿದೆ. ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಡಿವೈಎಸ್​ಪಿ ಬಸವರಾಜ, ಸಿಪಿಐ ಸತೀಶ್, ಪಿಎಸೈ ಸುನಿಲ್ ತೇಲಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ

ಸೋತಿದ್ದು ದೇವರ ಇಚ್ಛೆ ಎಂದಿದ್ದ ನವಜೋತ್​ ಸಿಂಗ್​ ಸಿಧು; ಪಂಜಾಬ್​ ಅಧ್ಯಕ್ಷನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ

Crime News: ಎರಡು ಪ್ರತ್ಯೇಕ ಅಪಘಾತ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ

Published On - 11:51 am, Wed, 16 March 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ