AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶೋತ್ಸವ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ವ್ಯಕ್ತಿ ಸಾವು; ಸೌಂಡ್​ ಎಫೆಕ್ಟ್‌ಗೆ ಹೃದಯಾಘಾತವಾಗಿರುವ ಶಂಕೆ

ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿಯುವಾಗ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನ ಹೆಬ್ಬಾಕ ಗ್ರಾಮದಲ್ಲಿ ನಡೆದಿದೆ.

ಗಣೇಶೋತ್ಸವ ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ವ್ಯಕ್ತಿ ಸಾವು; ಸೌಂಡ್​ ಎಫೆಕ್ಟ್‌ಗೆ ಹೃದಯಾಘಾತವಾಗಿರುವ ಶಂಕೆ
ಗಣೇಶ ಮೆರವಣಿಗೆ ವೇಳೆ ವ್ಯಕ್ತಿ ಸಾವು
TV9 Web
| Edited By: |

Updated on:Sep 18, 2022 | 3:51 PM

Share

ತುಮಕೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಕುಣಿಯುವಾಗ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನ ಹೆಬ್ಬಾಕ ಗ್ರಾಮದಲ್ಲಿ ನಡೆದಿದೆ. ವಿರೂಪಾಕ್ಷ (48) ಮೃತ ದುರ್ದೈವಿ. ತಡರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸೌಂಡ್ಸ್ ಹಾಕಲಾಗಿತ್ತು. ಸೌಂಡ್​ಗೆ ಕುಣಿಯುವಾಗ ವಿರೂಪಾಕ್ಷ ಸಾವನ್ನಪ್ಪಿದ್ದಾನೆ. ಡಿಜೆ ಸೌಂಡ್ಸ್ ಎಫೆಕ್ಟ್‌ಗೆ ಹೃದಯಾಘಾತವಾಗಿರುವ ಶಂಕೆ‌ ವ್ಯಕ್ತವಾಗಿದೆ. ಬೆಳ್ಳಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.‘

ಮಾರಕಾಸ್ತ್ರ ಹಿಡಿದು ಪುಂಡಾಟ ಮಾಡಿದ್ದ ಯುವಕರ  ಬಂಧನ

ಬೆಂಗಳೂರು: ಗಣಪತಿ ವಿಸರ್ಜನೆ ವೇಳೆ ಮಾರಕಾಸ್ತ್ರ ಹಿಡಿದು ಪುಂಡಾಟವಾಡಿದ್ದ ಆರು ಜನ ಯುವಕರನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಸಿದ್ದಾರೆ. ಚಿರು, ಅಭಿ, ಯಶವಂತ,ಮನೋಜ್, ಹರೀಶ್, ಪ್ರಜ್ವಲ್ ಬಂಧಿತ ಆರೋಪಿಗಳು.

ಪುಟ್ಟೇನಹಳ್ಳಿಯ ಸಾರಕ್ಕಿ ಲೇಕ್ ಬಳಿ  ಸೆ. 14 ರಂದು ಮಾರಕಾಸ್ತ್ರ, ಬಾಟಲ್ ಹಿಡಿದು ಪುಂಡಾಟ ಮೆರದಿದ್ದರು. ಯುವಕರ ಪುಂಡಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸರು ಸುಮೋಟೊ ದೂರು ದಾಖಲಿಸಿಕೊಂಡಿದ್ದರು. ಕೇಸ್ ದಾಖಲಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೀನು ಹಿಡಿಯಲು ಹೋದವರು ನೀರುಪಾಲು: ಬೆಂಗಳೂರಿನ ನೈಸ್ ರಸ್ತೆಯ ಹೆಮ್ಮಿಗೆಪುರದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ನೀರುಪಾಲಾಗಿದ್ದಾರೆ. ನಿನ್ನೆ (ಸೆ. 17) ಸಂಜೆ ಶಿವ , ಶಂಕರ್ ಹಾಗು ಚಿರಂಜೀವಿ ಎಂಬುವರು ಕೆರೆಯಲ್ಲಿ ತೆಪ್ಪದಲ್ಲಿ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ತೆಪ್ಪ ಮಗುಚಿ ಬಿದ್ದಿದೆ.

ಆಗ ಚಿರಂಜೀವಿ ಈಜಿ ದಡ ಸೇರಿದ್ದಾನೆ. ಆದರೆ ಶಿವ ಹಾಗು ಶಂಕರ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇಂದು ಅಗ್ನಿಶಾಮಕದಳ ಸಿಬ್ಬಂಧಿಯಿಂದ ಮೃತದೇಹ ಹೊರತೆಗೆಯುವ ಕಾರ್ಯ ನಡೆಯುತ್ತಿದೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Sun, 18 September 22

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್