AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tumakuru: ವೈಯಕ್ತಿಕ ದ್ವೇಷ; ಸ್ನೇಹಿತರೊಟ್ಟಿಗೆ ಸೇರಿ ಟೈಲ್ಸ್ ಅಂಗಡಿ ಮಾಲೀಕನನ್ನ ಕೊಲೆ ಮಾಡಿಸಿದ ಅಮ್ಮ ಮಗಳು

ತುಮಕೂರಿನಲ್ಲಿ ನಡೆದಿದ್ದ ಟೈಲ್ಸ್ ಅಂಗಡಿ ಮಾಲೀಕನ ಭೀಕರ ಕೊಲೆಯ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಸ್ನೇಹಿತರೊಟ್ಟಿಗೆ ಸೇರಿ ಅಮ್ಮ ಮಗಳೇ ಅಮಾನುಷವಾಗಿ ಕೊಲೆ ಮಾಡಿಸಿದ್ದು, ತನಿಖೆಯಲ್ಲಿ ಹೊರಬಿದ್ದಿದೆ.

Tumakuru: ವೈಯಕ್ತಿಕ ದ್ವೇಷ; ಸ್ನೇಹಿತರೊಟ್ಟಿಗೆ ಸೇರಿ ಟೈಲ್ಸ್ ಅಂಗಡಿ ಮಾಲೀಕನನ್ನ ಕೊಲೆ ಮಾಡಿಸಿದ ಅಮ್ಮ ಮಗಳು
ನಾಲ್ವರು ಆರೋಪಿಗಳು
ಕಿರಣ್ ಹನುಮಂತ್​ ಮಾದಾರ್
|

Updated on:Jun 18, 2023 | 8:12 AM

Share

ತುಮಕೂರು: ಜಿಲ್ಲೆಯ ಯಲ್ಲಾಪುರದಲ್ಲಿ ಮೇ.20 ರಂದು ನಡೆದಿದ್ದ ಟೈಲ್ಸ್ ಅಂಗಡಿ ಮಾಲೀಕನ ಭೀಕರ ಕೊಲೆಯ ಆರೋಪಿಗಳನ್ನ ಇದೀಗ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂದು ಸಂಜೆ 7.30 ರ ಸುಮಾರಿನಲ್ಲಿ ಯಲ್ಲಾಪುರದಲ್ಲಿರುವ ಅರಫಾ ಟೈಲ್ಸ್ ಅಂಗಡಿಯ ಮಾಲೀಕ ಇಸ್ಮಾಯಿಲ್ ಅಲಿಯಾಸ್ ಜಾಕೀರ್ ತನ್ನ ಅಂಗಡಿಯಲ್ಲಿರುವಾಗಲೇ ಇಬ್ಬರು ದುಶ್ಕರ್ಮಿಗಳು ಬೈಕ್​ನಲ್ಲಿ ಬಂದು, ಮಾರಕಾಸ್ತ್ರಗಳಿಂದ ಜಾಕೀರ್​ನನ್ನ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದರು. ಈ ಘಟನೆ ಬಳಿಕ ಸ್ಥಳಕ್ಕೆ ದೌಡಾಯಿಸಿದ್ದ ತುಮಕೂರು(Tumakuru) ಗ್ರಾಮಾಂತರ ಪೊಲೀಸರು ಕೇಸ್​ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದರು. ಇನ್ನು ಸ್ಥಳಕ್ಕೆ ಭೇಟಿ ನೀಡಿದ್ದ ಎಸ್ಪಿ ರಾಹುಲ್ ಕುಮಾರ್, ಪೊಲೀಸರ ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದರು. ತನಿಖೆ ಯಶಸ್ವಿಯಾಗಿ ಕೊಲೆಗೆ ಸಂಬಂಧಿಸಿದ 4 ಆರೋಪಿಗಳನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ವಿದ್ಯಾಧರ್, ರಬಿಯಾ, ಖುಬ್ರಾ, ಜೋಯೆಲ್ ಬಂಧಿತ ಆರೋಪಿಗಳು.

ಕೊಲೆಗೆ ಕಾರಣವೇನು?

ಕೊಲೆಯಾದ ಜಾಕೀರ್ ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲುವಿನಲ್ಲಿ ವಾಸವಿದ್ದು, ದೂರದ ಸಂಬಂಧಿಗಳಾದ ಖುಬ್ರಾ ಹಾಗೂ ಅಕೆಯ ಮಗಳಾದ ರಬಿಯಾ ಪರಿಚಯವಾಗಿತ್ತು. ಇವರ ಪರಿಚಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಜಾಕೀರ್, ರಬಿಯಾಗೆ ಕೆಲ ಮಾಟಮಂತ್ರದ ವಿದ್ಯೆ ಕಲಿಸಿದ್ದನಂತೆ. ಈ ಜೊತೆಗೆ ರಬಿಯಾ ಮೇಲೆ ಜಾಕೀರ್ ಮೋಹಿಸಿದ್ದನಂತೆ. ಆದರೆ, ಈ ವಿದ್ಯೆ ಕಲಿತ ಬಳಿಕ ರಬಿಯಾ ಬೇರೊಬ್ಬ ಹುಡುಗನನ್ನ ಪ್ರೇಮಿಸುತ್ತಿದ್ದಳು ಎನ್ನಲಾಗಿದೆ.

ಇದನ್ನೂ ಓದಿ:ಹಳಿಯಾಳ: ಜಮೀನು ವಿವಾದ, ಫಾರೆಸ್ಟ್ ವಾಚ್​ಮ್ಯಾನ್​ನ ಕಾಲು ಕತ್ತರಿಸಿ ಭೀಕರ ಕೊಲೆ

ಈ ವಿಚಾರ ತಿಳಿದ ಬಳಿಕ ರಬಿಯಾ ಹಾಗೂ ಖುಬ್ರಾಳ ಜೊತೆ ಜಾಕೀರ್ ಗಲಾಟೆ ಮಾಡಿಕೊಂಡಿದ್ದನಂತೆ. ನಿಮ್ಮ ಮಾಟಮಂತ್ರ ಶಕ್ತಿ ಕುಗ್ಗಿಸುವಂತೆ ಮಾಡ್ತೀನಿ ಹಾಗೂ ಎಲ್ಲರಿಗಿಂತ ಚೆನ್ನಾಗಿ ಬದುಕುತ್ತೇನೆ ಎಂದು ಜಾಕೀರ್ ಕುಬ್ರಾ ಹಾಗೂ ರಬೀಯಾಗೆ ಚಾಲೆಂಜ್ ಹಾಕಿ, ಅಲ್ಲಿಂದ ಯಲ್ಲಾಪುರಕ್ಕೆ‌ ಬಂದು ಟೈಲ್ಸ್ ಅಂಗಡಿ ಶುರುಮಾಡಿದ್ದ ಎನ್ನಲಾಗಿದೆ. ಇನ್ನು ಇದರಿಂದ ಕುಪಿತಗೊಂಡ ಖುಬ್ರಾ ಹಾಗೂ ರಬಿಯಾ ಪರಿಚಯಸ್ಥನಾದ ವಿದ್ಯಾಧರ ಹಾಗೂ ಸಂಬಂಧಿಯಾದ ಜೋಯೆಲ್ ಸಹಾಯ ಪಡೆದು ಜಾಕೀರ್​ನನ್ನ ಕೊಲೆ ಮಾಡಿಸಿದ್ದಾರೆ. ಸದ್ಯ ತುಮಕೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ ನಾಲ್ವರು ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಮಾಟಮಂತ್ರದ ಮೂಡನಂಬಿಕೆಗೆ ಬಿದ್ದ ತಾಯಿ, ಮಗಳು ಒಬ್ಬನ ಹೆಣ ಕೆಡವಿರೋದು ಮಾತ್ರ ಆತಂಕದ ವಿಚಾರವೇ ಸರಿ.

ವರದಿ: ಮಹೇಶ್ ಟಿವಿ9 ತುಮಕೂರು

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:12 am, Sun, 18 June 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!