AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ಪೋಕ್ಸೊ ಪ್ರಕರಣ ದಾಖಲು

ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಗಣಿತ ಶಿಕ್ಷಕನ ಮೇಲೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ.

ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಶಿಕ್ಷಕನ ಮೇಲೆ ಪೋಕ್ಸೊ ಪ್ರಕರಣ ದಾಖಲು
ಪ್ರಾತಿನಿಧಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Jul 13, 2023 | 7:45 AM

Share

ತುಮಕೂರು: ವಿದ್ಯಾರ್ಥಿಗಳಿಗೆ ಅತಿಯಾದ ಹೋಮ್ ವರ್ಕ್ ಕೊಟ್ಟು ಪೂರ್ಣ ಮಾಡದಿದ್ದರೆ ಕಿರುಕುಳ ಕೊಡುತ್ತಿದ್ದ ಗಣಿತ ಶಿಕ್ಷಕ(Maths Teacher)ನ ಮೇಲೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ(Chikkanayakanahalli) ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾದ ಘಟನೆ ನಡೆದಿದೆ. ತಾಲೂಕಿನ ಗೋಡೆಕೆರೆ ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ಹೆಚ್.ಎಸ್ ರವಿ ಎಂಬಾತ ಅತಿಯಾದ ಹೋಮ್ ವರ್ಕ್ ಕೊಟ್ಟು, ವರ್ಕ್ ಪೂರ್ಣ ಮಾಡದೇ ಇದ್ದರೆ ಕಿರುಕುಳ ಕೊಡುತ್ತಿದ್ದನಂತೆ. ಈ ಹಿನ್ನಲೆ ಮಕ್ಕಳು ಪೋಷಕರ ಬಳಿ ‘ಶಿಕ್ಷಕರು ಕಿರುಕುಳ ಕೊಡುತ್ತಾರೆ ಶಾಲೆಗೆ ಹೋಗುವುದಿಲ್ಲವೆಂದು ಹೇಳಿಕೊಂಡಿದ್ದಾರೆ. ಕೂಡಲೇ ಪೋಷಕರು ಮಕ್ಕಳ ಮೇಲಿನ ದೌರ್ಜನ್ಯ ಕುರಿತು ಚಿಕ್ಕನಾಯಕನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನು ಇತ್ತೀಚೆಗಷ್ಟೇ ತುಮಕೂರು ಜಿಲ್ಲೆಯ ಕುಣಿಗಲ್​ ತಾಲೂಕಿನ ಪ್ರೌಢಶಾಲೆಯಲ್ಲಿ ಶಿಕ್ಷಕನೊಬ್ಬ ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿತ್ತು. ಬಳಿಕ ಸಂತ್ರಸ್ಥ ಸಹ ಶಿಕ್ಷಕಿ ಈ ಕುರಿತು ಆತನಿಗೆ ಎಷ್ಟೇ ಬಾರಿ ಮನವಿ ಮಾಡಿದರೂ ಆತ ಬದಲಾಗಲಿಲ್ಲ, ಈ ಕಾರಣ ಡಿಡಿಪಿಐಗೆ ದೂರು ನೀಡಿದ್ದರು. ನಂತರ ಈ ಕುರಿತು ಡಿಡಿಪಿಐ ತನಿಖೆ ನಡೆಸಿ, ಆ ಶಿಕ್ಷಕನನ್ನ ಅಮಾನತು ಮಾಡಿದ್ದರು.

ಇದನ್ನೂ ಓದಿ:ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಪ್ರಕರಣ: ಶಿಕ್ಷಕನ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಇನ್ನು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಲಿ ನಾಯಕ್ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕನನ್ನ ಬಾಡಿಗೆ ಶಿಕ್ಷಕಿ ನೇಮಿಸಿ ಮಕ್ಕಳಿಗೆ ಪಾಠ ಮಾಡಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ ಬಿಇಓ ಶಾಲೆಗೆ ಬೇಟಿ ನೀಡಿ ವಿಚಾರಣೆ ನಡೆಸಿದ್ದರು. ಇದರಲ್ಲಿ ಶಿಕ್ಷಕ ಹಣ ನೀಡಿ ಪದವಿ ಓದಿದ ಯುವತಿಯನ್ನ ಪಾಠ ಮಾಡಲು ನೇಮಿಸಿರುವುದು ಸಾಭೀತಾದ ಕಾರಣ ಶಿಕ್ಷಕ ಮಹೇಂದ್ರ ಕೊಲ್ಲೂರ್ ಎಂಬಾತನನ್ನ ಚಿತ್ತಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:45 am, Thu, 13 July 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ