AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್‌ ಓದಲು ಕಷ್ಟವಾಗುತ್ತಿದೆ ಎಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು

ಇಂಗ್ಲಿಷ್ ಓದಲು ಕಷ್ಟವಾಗುತ್ತೆ ಶಾಲೆಗೆ ಹೋಗಲ್ಲ ಎಂದು ಬಾಲಕ ಹಠ ಮಾಡಿದ್ದ. ಶಾಲೆಗೆ ಹೋಗುವಂತೆ ಪೋಷಕರು ತಿಳಿಸಿದ್ದು, ಹೋಗುವುದಿಲ್ಲ ಎಂದು ಬಾಲಕ ಹೇಳಿದ್ದಾನೆ. ಈ ನಡುವೆ ಮನೆಯಲ್ಲಿ ಬಾಲಕ ಕುಸಿದು ಬಿದಿದ್ದಾನೆ.

ಇಂಗ್ಲಿಷ್‌ ಓದಲು ಕಷ್ಟವಾಗುತ್ತಿದೆ ಎಂದು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ: ಪ್ರಾಣಾಪಾಯದಿಂದ ಪಾರು
ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ
TV9 Web
| Edited By: |

Updated on: May 26, 2022 | 8:39 AM

Share

ತುಮಕೂರು: ಇಂಗ್ಲಿಷ್‌ ಓದಲು ಕಷ್ಟವಾಗುತ್ತೆ ಎಂದು 7ನೇ ತರಗತಿ ವಿದ್ಯಾರ್ಥಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ತಾಲೂಕಿನ ಊರ್ಡಿಗೆರೆಯಲ್ಲಿ ನಡೆದಿದೆ. ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಇಂಗ್ಲಿಷ್ ಓದಲು ಕಷ್ಟವಾಗುತ್ತೆ ಶಾಲೆಗೆ ಹೋಗಲ್ಲ ಎಂದು ಬಾಲಕ ಹಠ ಮಾಡಿದ್ದ. ಶಾಲೆಗೆ ಹೋಗುವಂತೆ ಪೋಷಕರು ತಿಳಿಸಿದ್ದು, ಹೋಗುವುದಿಲ್ಲ ಎಂದು ಬಾಲಕ ಹೇಳಿದ್ದಾನೆ. ಈ ನಡುವೆ ಮನೆಯಲ್ಲಿ ಬಾಲಕ ಕುಸಿದು ಬಿದಿದ್ದು, ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಿದ್ದು, ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: ಮುಷ್ಕರಕ್ಕೆ ಮುಂದಾದ ಸ್ಟೇಷನ್ ಮಾಸ್ಟರ್​ಗಳು: ರೈಲು ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಬಾಲಕ ತುಮಕೂರು ನಗರದ ಕೋತಿ ತೋಪು ಮೂಲದ ಸೋಮಶೇಖರ್, ಜಯಮ್ಮ ದಂಪತಿಯ ಮಗ. ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದಾರೆ. ಕೂಲಿ ಕೆಲಸ ನಿಮಿತ್ತ ಊರ್ಡಿಗೆರೆ ಗ್ರಾಮಕ್ಕೆ ಕುಟುಂಬ ವಲಸೆ ಬಂದಿದೆ. ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದ ಬಾಲಕ, 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಸರ್ಪಡೆಗೊಂಡಿದ್ದ. ಕಳೆದ 16ನೇ ತಾರೀಕಿನಿಂದ ಶಾಲೆ ಶುರುವಾಗಿತ್ತು. ಒಂದೇರಡು ದಿನ ಬಾಲಕ ಶಾಲೆಗೆ ಹೋಗಿದ್ದ. ಬಳಿಕ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿದ್ದ. ಶಾಲೆಗೆ ಹೋಗುವಂತೆ ಪೋಷಕರು ಬಾಲಕನಿಗೆ ಒತ್ತಾಯಿಸಿದ್ದರು. ಆದರೂ  ಶಾಲೆಗೆ ಹೋಗಿರಲಿಲ್ಲ. ಸದ್ಯ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ರಾಜ್ಯ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್