AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ

ತುಮಕೂರಿನಲ್ಲೊಂದು ಮನಕಲಕುವ ಘಟನೆ ನಡೆದಿದೆ. ಏನು ಅರಿಯದ ಎರಡು ವರ್ಷದ ಮಗುವಿನೊಂದಿಗೆ ತಾಯಿ ಒಂದೇ ಕುಣಿಕೆಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅದೃಷ್ಟವಶಾತ್ ಇನ್ನಿಳಿದ ಎರಡು ಮಕ್ಕಳು ಸಾವಿನ ಮನೆಗೆಯಿಂದ ಪಾರಾಗಿವೆ. ತಾಯಿ ಮಗು ಕುಣಿಕೆಯಲ್ಲಿ ನೇತಾಡುವ ದೃಶ್ಯ ನೋಡಿದರೆ ಕರುಳು ಹಿಂಡುವಂತಿದೆ. ಅಷ್ಟಕ್ಕೂ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ಯಾಕೆ? ಇನ್ನಿರಡು ಮಕ್ಕಳು ಸಾವಿನ ದವಡೆಯಿಂದ ಪಾರಾಗಿದ್ಹೇಗೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಮನಕಲಕುವ ಘಟನೆ: 2 ವರ್ಷದ ಮಗುವಿಗೆ ನೇಣು ಹಾಕಿ ತಾಯಿ ಸಹ ಆತ್ಮಹತ್ಯೆ
ಪ್ರಾತಿನಿಧಿಕ ಚಿತ್ರImage Credit source: deccanchronicle
Jagadisha B
| Edited By: |

Updated on: Mar 10, 2026 | 10:25 PM

Share

ತುಮಕೂರು, (ಮಾರ್ಚ್ 10): ಎರಡು ವರ್ಷದ ಮಗುವಿನ ಜೊತೆ ತಾಯಿ ಒಂದೇ ಕುಣಿಕೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ತುಮಕೂರು (Tumakuru) ಜಿಲ್ಲೆ ಗುಬ್ಬಿ ತಾಲ್ಲೂಕಿನ ಹಾಗಲವಾಡಿಯಲ್ಲಿ ನಡೆದಿದೆ, ಗಂಗಾಮಣಿ(30), ಪ್ರೇಕ್ಷಾ (2) ಮೃತರು. ಗಂಗಾಮಣಿ ತನ್ನೊಟ್ಟಿಗೆ ಏನು ಅರಿಯದ 2 ವರ್ಷದ ಮಗುವಿನ ಕುತ್ತಿಗೆಗೆ ಕುಣಿಕೆ ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಗರ್ಭಕೋಶದ ಸಮಸ್ಯೆಯಿಂದ ಮನನೊಂದು ಮಹಿಳೆ ಈ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಇನ್ನೆರಡು ಮಕ್ಕಳು ಸಾವಿನ ಮನೆಯಿಂದ ಪಾರಾಗಿವೆ.

ಎಂಟು ವರ್ಷದ ಹಿಂದೆ ಯತೀಶ್ ಎಂಬಾತನ ಜೊತೆ ಗಂಗಾಮಣಿ ವಿವಾಹವಾಗಿದ್ದು, ದಂಪತಿಗೆ ಮೂರು ಮಕ್ಕಳು. ವೃತ್ತಿಯಲ್ಲಿ ಕ್ಯಾಂಟರ್ ಡ್ರೈವರ್ ಆಗಿರುವ ಯತೀಶ್, ಎಂದಿನಿಂತೆ ಇಂದು(ಮಾರ್ಚ್ 10) ಕೆಲಸಕ್ಕೆ ತೆರಳಿದ್ದಾರೆ. ಇನ್ನು ಇಬ್ಬರು ಮಕ್ಕಳು  ವಿನಯ್ (7) ಹಾಗೂ ರಕ್ಷಿತಾ (5) ಶಾಲೆಗೆ ಹೋಗಿದ್ದಾರೆ. ಆಗ ಮನೆಯಲ್ಲಿ ಯಾರು ಇಲ್ಲದ ವೇಳೆ ಗಂಗಾಮಣಿ ತನ್ನ ಎರಡು ವರ್ಷದ ಪ್ರೇಕ್ಷಾ ಜೊತೆ ನೇಣಿಗೆ ಶರಣಾಗಿದ್ದಾಳೆ.

ಇನ್ನು ಮಕ್ಕಳು ಶಾಲೆಯಿಂದ ಮನೆಗೆ ಬಂದಿದ್ದಾರೆ. ಆದ್ರೆ, ಮನೆ ಒಳಗಿನಿಂದ ಲಾಕ್ ಆಗಿದ್ದು, ಇದನ್ನು ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾರೆ. ಬಳಿಕ ಪಕ್ಕದ ಮನೆಯವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ
LPG ಕೊರತೆ: 3 ಸ್ಟಾರ್ ಹೋಟೆಲ್​​ನಲ್ಲಿ ಅಡುಗೆ ಮಾಡಲು ಸೌದೆ ತಂದ ಸಿಬ್ಬಂದಿ