AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?

ತುಮಕೂರಿನಲ್ಲಿ ಯುವಕನೊಬ್ಬ, ವ್ಯಕ್ತಿಯೊಬ್ಬನ ಅಕ್ರಮ ಸಂಬಂಧವನ್ನು ಆತನ ಪತ್ನಿಗೆ ತಿಳಿಸಿದ್ದಾನೆ. ಬಳಿಕ ನಡೆದ ಬೆಳವಣಿಗೆಗೆ ಹೆದರಿ ಯುವಕ ಪ್ರಾಣಕಳೆದುಕೊಂಡಿದ್ದಾನೆ. ಸಾಯುವ ಮುನ್ನ ಸೆಲ್ಫಿ ವಿಡಿಯೋ ಮಾಡಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಬಹಿರಂಗಪಡಿಸಿದ್ದಾನೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಏನಿದು ಕಾಮಪುರಾಣ ಪ್ರಕರಣ? ಎನ್ನುವ ವಿವರ ಇಲ್ಲಿದೆ.

ಅನೈತಿಕ ಸಂಬಂಧ ಗುಟ್ಟು ರಟ್ಟು: ಒಂದೇ ಅವಾಜ್​​​ಗೆ ಯುವಕ ದುರಂತ ಸಾವು, ಆಗಿದ್ದೇನು?
ಚೇತನ್, ಮೃತ ಯುವಕ
ಜಗದೀಶ ಬಿ.
| Edited By: |

Updated on: Feb 24, 2026 | 9:33 PM

Share

ತುಮಕೂರು (ಫೆಬ್ರವರಿ .24): ವ್ಯಕ್ತಿಯೋರ್ವನ ಅಕ್ರಮ ಸಂಬಂಧದ (extramarital affair) ವಿಚಾರವನ್ನು ಆತನ ಹೆಂಡತಿಗೆ ತಿಳಿಸಿ ನ್ಯಾಯ ಕೊಡಿಸಲು ಹೋದ ಯುವಕನೊಬ್ಬ ದುರಂತ ಸಾವು ಕಂಡಿರುವ ದಾರುಣ ಘಟನೆ ತುಮಕೂರು (Tumakuru) ತಾಲೂಕಿನ ರಾಮೇನಹಳ್ಳಿಯಲ್ಲಿ ನಡೆದಿದೆ. ಹೌದು…ಚೇತನ್ ಎನ್ನುವ ಯುವಕ ನಾಗರಾಜ್ ಎನ್ನುವಾತನ ಮಹಿಳೆಯೊಂದಿಗಿನ ಅಕ್ರಮ ಸಂಬಂಧವನ್ನು ಆತನ ಹೆಂಡ್ತಿಗೆ ತಿಳಿಸಿದ್ದು, ಈ ವಿಚಾರವಾಗಿ ನಾಗರಾಜ್, ಚೇತನ್​​​ ಜತೆ ಗಲಾಟೆ ಮಾಡಿದ್ದಾನೆ. ಅಲ್ಲದೇ ಬೆದರಿಕೆ ಸಹ ಹಾಕಿದ್ದ. ಇದರಿಂದ ಮನನೊಂದ ಚೇತನ್​, ತನ್ನ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿ ತನ್ನ ಸಾವಿಗೆ ನಾಗರಾಜ್ ಎಂದು ಹೇಳಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅಕ್ರಮ ಸಂಬಂಧದ ಬಗ್ಗೆ ಆತನ ಪತ್ನಿ ಸುಮಾಗೆ ಮಾಹಿತಿ ನೀಡಿದ್ದ. ಕಟ್ಟೆ ನಾಗರಾಜು ಮತ್ತೋರ್ವ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವಿಚಾರವನ್ನು ಚೇತನ್, ಸುಮಾಗೆ ತಿಳಿಸಿದ್ದರಿಂದ, ದಂಪತಿಗಳ ನಡುವೆ ಮನೆಯಲ್ಲಿ ದೊಡ್ಡ ಗಲಾಟೆ ನಡೆದಿತ್ತು. ಈ ವೇಳೆ ಸುಮಾ, ಚೇತನ್ ತನಗೆ ಈ ವಿಚಾರ ತಿಳಿಸಿದ್ದಾಗಿ ಗಂಡನಿಗೆ ಹೇಳಿದ್ದಾಳೆ. ಇದರಿಂದ ಆಕ್ರೋಶಗೊಂಡ ನಾಗರಾಜ್, ಚೇತನ್ ಮೇಲೆ ಜಗಳ ಮಾಡಿದ್ದಾನೆ. ಅಲ್ಲದೇ ಪ್ರಾಣ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಇದರಿಂದ ಹೆದರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೂ ಮುನ್ನ ತನ್ನ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿರುವ ಚೇತನ್, ತನ್ನ ಸಾವಿಗೆ ಕಟ್ಟೆ ನಾಗರಾಜು ಎಂದು ಹೇಳಿದ್ದಾನೆ.

ಇದನ್ನೂ ಓದಿ: ಸಾಕು ಮಗ-ತಂಗಿಯಿಂದಲೇ ಮಹಿಳೆಯ ಹತ್ಯೆ: ಓರ್ವ ವ್ಯಕ್ತಿಯಿಂದ ಬಯಲಾಯ್ತು ಕೊಲೆ ರಹಸ್ಯ

ಮೊದಲು ಹೆಬ್ಬೂರು ಠಾಣೆ ಪೊಲೀಸರು ಆತ್ಮಹತ್ಯೆ ಎಂದು ದೂರು ದಾಖಲಿಸಿಕೊಂಡಿದ್ದರು. ಆದ್ರೆ, ಚೇತನ್​​ ಮೊಬೈಲ್ ನಲ್ಲಿದ್ದ ವಿಡಿಯೋ ನೋಡಿದ ತಂದೆ ಕೂಡಲೇ ಹೆಬ್ಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಎಫ್​​​ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ಚೇತನ್​​ ವಿಡಿಯೋನಲ್ಲಿ ಹೇಳಿದ್ದ ನಾಗರಾಜನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!