AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕಾಂಗ್ರೆಸ್ ಮುಖಂಡ ಅನುಮಾನಸ್ಪದ ಸಾವು, ಪರಮೇಶ್ವರ್​ಗೆ ಮತ ಹಾಕಿದ್ದಕ್ಕೆ ಕೊಲೆ ಶಂಕೆ

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಓರ್ವ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಜಿ. ಪರಮೇಶ್ವರ್ ಅವರಿಗೆ ಮತ ನೀಡಿದ್ದಕ್ಕೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಬಳಿ ಕಾಂಗ್ರೆಸ್ ಮುಖಂಡ ದೇವರಾಜ್ (30) ಎಂಬುವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ತುಮಕೂರು: ಕಾಂಗ್ರೆಸ್ ಮುಖಂಡ ಅನುಮಾನಸ್ಪದ ಸಾವು, ಪರಮೇಶ್ವರ್​ಗೆ ಮತ ಹಾಕಿದ್ದಕ್ಕೆ ಕೊಲೆ ಶಂಕೆ
ಸಾಂದರ್ಭಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 13, 2023 | 3:13 PM

Share

ತುಮಕೂರು: ಇತ್ತೀಚಿಗೆ ರಾಜಕೀಯ (Politics) ಧ್ವೇಷಕ್ಕಾಗಿ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿವೆ. ತಮ್ಮ ನಾಯಕರು ಅಧಿಕಾರಕ್ಕೆ ಬಂದ ತಕ್ಷಣ ಬೆಂಬಲಿಗರು ಬಾಲ ಬಿಚ್ಚುತ್ತಿದ್ದು, ಏನು ಮಾಡಿದರೂ ನಡೆಯುತ್ತದೆ ಎಂಬ ಅಹಂನೊಂದಿಗೆ ವರ್ತಿಸುತ್ತಿದ್ದಾರೆ. ಇದೇರೀತಿಯಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ (G Parameshwara) ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಓರ್ವ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಜಿ. ಪರಮೇಶ್ವರ್ ಅವರಿಗೆ ಮತ ನೀಡಿದ್ದಕ್ಕೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಬಳಿ ಕಾಂಗ್ರೆಸ್ ಮುಖಂಡ ದೇವರಾಜ್ (30) ಎಂಬುವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೆಡಿಎಸ್ ಮುಖಂಡ ಮರಿಯಪ್ಪ ಎಂಬುವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮರಿಯಪ್ಪ ಗ್ರಾಮದ ಮುಖಂಡ ಹಾಗೂ ಜೆಡಿಎಸ್ ಪಕ್ಷದಲ್ಲಿದ್ದರು. ದೇವರಾಜ್ ಕಾಂಗ್ರೆಸ್ ಮುಖಂಡ ಆನಂದ್​ರವರ ಸಂಬಂಧಿಯಾಗಿದ್ದರು. ಇಬ್ಬರ ನಡುವೆ ರಾಜಕೀಯ ವೈಮನಸ್ಸು ಇತ್ತು. ಇತ್ತೀಚಿಗೆ ಮರಿಯಪ್ಪ ದೇವರಾಜ್​ರನ್ನು ಪಾರ್ಟಿ ಮಾಡೊಣ ಬಾ ಎಂದು ಕರೆದುಕೊಂಡು ಹೋಗಿದ್ದರು. ಮರಿಯಪ್ಪ ಅವರ ಜೊತೆ ಹೋದ ದೇವರಾಜ್​ ಶವವಾಗಿ ಪತ್ತೆಯಾಗಿದ್ದಾರೆ. ದೇವರಾಜ್​​ ಅಪಘಾತದಲ್ಲಿ ಮೃತರಾಗಿರುವ ರೀತಿ ಬಿಂಬಿಸಲಾಗಿದೆ. ಆದರೆ ದೇವರಾಜ್​ ತಲೆ ಬಲವಾಗಿ ಹೊಡೆದಿರುವ ಗುರುತು ಪತ್ತೆಯಾಗಿದೆ.

ಇದನ್ನೂ ಓದಿ: ತುಮಕೂರು: ನಾಗಾಸಾಧು ವೇಷದಲ್ಲಿ ಬಂದು ವ್ಯಕ್ತಿಯೊಬ್ಬರ ಕೈಯಲ್ಲಿನ ಉಂಗುರ ದೋಚಿ ಪರಾರಿ

ಇದರಿಂದ ಮರಿಯಪ್ಪ, ದೇವರಾಜ್​​ರನ್ನು ಕರೆದುಕೊಂಡು ಹೋಗಿ ಹೊಡೆದು ಕೊಂದಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಕೊರಟಗೆರೆ ಪೊಲೀಸರು ಆರೋಪಿ ಮರಿಯಪ್ಪನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ಆರೋಪಿ ವಿರುದ್ಧ 302 ಕೊಲೆ ಕೇಸ್ ಹಾಗೂ ಒಡವೆ ಅಡವಿಟ್ಟ ಆರೋಪದ ಅಡಿ 392 ಸುಲಿಗೆ ಕೇಸ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:53 pm, Sun, 13 August 23

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ