Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಕಾಂಗ್ರೆಸ್ ಮುಖಂಡ ಅನುಮಾನಸ್ಪದ ಸಾವು, ಪರಮೇಶ್ವರ್​ಗೆ ಮತ ಹಾಕಿದ್ದಕ್ಕೆ ಕೊಲೆ ಶಂಕೆ

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಓರ್ವ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಜಿ. ಪರಮೇಶ್ವರ್ ಅವರಿಗೆ ಮತ ನೀಡಿದ್ದಕ್ಕೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಬಳಿ ಕಾಂಗ್ರೆಸ್ ಮುಖಂಡ ದೇವರಾಜ್ (30) ಎಂಬುವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ತುಮಕೂರು: ಕಾಂಗ್ರೆಸ್ ಮುಖಂಡ ಅನುಮಾನಸ್ಪದ ಸಾವು, ಪರಮೇಶ್ವರ್​ಗೆ ಮತ ಹಾಕಿದ್ದಕ್ಕೆ ಕೊಲೆ ಶಂಕೆ
ಸಾಂದರ್ಭಿಕ ಚಿತ್ರ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ವಿವೇಕ ಬಿರಾದಾರ

Updated on:Aug 13, 2023 | 3:13 PM

ತುಮಕೂರು: ಇತ್ತೀಚಿಗೆ ರಾಜಕೀಯ (Politics) ಧ್ವೇಷಕ್ಕಾಗಿ ಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿವೆ. ತಮ್ಮ ನಾಯಕರು ಅಧಿಕಾರಕ್ಕೆ ಬಂದ ತಕ್ಷಣ ಬೆಂಬಲಿಗರು ಬಾಲ ಬಿಚ್ಚುತ್ತಿದ್ದು, ಏನು ಮಾಡಿದರೂ ನಡೆಯುತ್ತದೆ ಎಂಬ ಅಹಂನೊಂದಿಗೆ ವರ್ತಿಸುತ್ತಿದ್ದಾರೆ. ಇದೇರೀತಿಯಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ (G Parameshwara) ಕ್ಷೇತ್ರದಲ್ಲಿ ರಾಜಕೀಯ ಜಿದ್ದಾಜಿದ್ದಿಗೆ ಓರ್ವ ಕೊಲೆಯಾಗಿರುವ ಆರೋಪ ಕೇಳಿಬಂದಿದೆ. ಜಿ. ಪರಮೇಶ್ವರ್ ಅವರಿಗೆ ಮತ ನೀಡಿದ್ದಕ್ಕೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಬಳಿ ಕಾಂಗ್ರೆಸ್ ಮುಖಂಡ ದೇವರಾಜ್ (30) ಎಂಬುವರನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಜೆಡಿಎಸ್ ಮುಖಂಡ ಮರಿಯಪ್ಪ ಎಂಬುವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮರಿಯಪ್ಪ ಗ್ರಾಮದ ಮುಖಂಡ ಹಾಗೂ ಜೆಡಿಎಸ್ ಪಕ್ಷದಲ್ಲಿದ್ದರು. ದೇವರಾಜ್ ಕಾಂಗ್ರೆಸ್ ಮುಖಂಡ ಆನಂದ್​ರವರ ಸಂಬಂಧಿಯಾಗಿದ್ದರು. ಇಬ್ಬರ ನಡುವೆ ರಾಜಕೀಯ ವೈಮನಸ್ಸು ಇತ್ತು. ಇತ್ತೀಚಿಗೆ ಮರಿಯಪ್ಪ ದೇವರಾಜ್​ರನ್ನು ಪಾರ್ಟಿ ಮಾಡೊಣ ಬಾ ಎಂದು ಕರೆದುಕೊಂಡು ಹೋಗಿದ್ದರು. ಮರಿಯಪ್ಪ ಅವರ ಜೊತೆ ಹೋದ ದೇವರಾಜ್​ ಶವವಾಗಿ ಪತ್ತೆಯಾಗಿದ್ದಾರೆ. ದೇವರಾಜ್​​ ಅಪಘಾತದಲ್ಲಿ ಮೃತರಾಗಿರುವ ರೀತಿ ಬಿಂಬಿಸಲಾಗಿದೆ. ಆದರೆ ದೇವರಾಜ್​ ತಲೆ ಬಲವಾಗಿ ಹೊಡೆದಿರುವ ಗುರುತು ಪತ್ತೆಯಾಗಿದೆ.

ಇದನ್ನೂ ಓದಿ: ತುಮಕೂರು: ನಾಗಾಸಾಧು ವೇಷದಲ್ಲಿ ಬಂದು ವ್ಯಕ್ತಿಯೊಬ್ಬರ ಕೈಯಲ್ಲಿನ ಉಂಗುರ ದೋಚಿ ಪರಾರಿ

ಇದರಿಂದ ಮರಿಯಪ್ಪ, ದೇವರಾಜ್​​ರನ್ನು ಕರೆದುಕೊಂಡು ಹೋಗಿ ಹೊಡೆದು ಕೊಂದಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಕೊರಟಗೆರೆ ಪೊಲೀಸರು ಆರೋಪಿ ಮರಿಯಪ್ಪನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ಆರೋಪಿ ವಿರುದ್ಧ 302 ಕೊಲೆ ಕೇಸ್ ಹಾಗೂ ಒಡವೆ ಅಡವಿಟ್ಟ ಆರೋಪದ ಅಡಿ 392 ಸುಲಿಗೆ ಕೇಸ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:53 pm, Sun, 13 August 23

ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​