AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಮಹಿಳಾ ಪೊಲೀಸ್​ ಮುಂದೆ ಡ್ರ್ಯಾಗರ್ ಹಿಡಿದು ಪುಡಿರೌಡಿಯ ಹುಚ್ಚಾಟ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on:Oct 31, 2023 | 10:47 AM

Share

ತುಮಕೂರು ಅ.31: ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parmeshwara)​​ ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumakuru) ಪುಡಿರೌಡಿಗಳ (Rowdy) ಅಟ್ಟಹಾಸ ಮಿತಿ ಮೀರಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಓರ್ವ ಪುಡಿರೌಡಿ ಕೈಯಲ್ಲಿ ಡ್ಯ್ರಾಗರ್​ ಹಿಡಿದು ಮಹಿಳಾ ಪೊಲೀಸ್ (Police) ಸಿಬ್ಬಂದಿ ಮುಂದೆಯೇ ಹುಚ್ಚಾಟವಾಡಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮೋಜಾ ಅಲಿಯಾಸ್​​ ಮಧು ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೇಲೆ ಹೊರಬಂದಿದ್ದನು. ನಿನ್ನೆ (ಅ.30) ರಂದು ತುಮಕೂರಿನ ಅಶೋಕ ರಸ್ತೆಯಲ್ಲಿನ ಖಾಸಗಿ ಬಸ್​ ನಿಲ್ದಾಣದ ಬಳಿ ಕೈಯಲ್ಲಿ ಡ್ರ್ಯಾಗರ್ ಹಿಡಿದು, ಸಾರ್ವಜನಿಕರಿಗೆ ಬೆದರಿಸಿ ಮೊಬೈಲ್ ದೋಚುತ್ತಿದ್ದನು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು. ಆರೋಪಿ ಮೋಜಾ ಅಲಿಯಾಸ್​ ಮಧು ಹಾಗೂ ಆತನ ಜೊತೆಯಿದ್ದ ಮನೋಜ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Tue, 31 October 23

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ