AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಸಚಿವರ ತವರು ಜಿಲ್ಲೆಯಲ್ಲಿ ಮಹಿಳಾ ಪೊಲೀಸ್​ ಮುಂದೆ ಡ್ರ್ಯಾಗರ್ ಹಿಡಿದು ಪುಡಿರೌಡಿಯ ಹುಚ್ಚಾಟ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on:Oct 31, 2023 | 10:47 AM

Share

ತುಮಕೂರು ಅ.31: ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parmeshwara)​​ ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumakuru) ಪುಡಿರೌಡಿಗಳ (Rowdy) ಅಟ್ಟಹಾಸ ಮಿತಿ ಮೀರಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಓರ್ವ ಪುಡಿರೌಡಿ ಕೈಯಲ್ಲಿ ಡ್ಯ್ರಾಗರ್​ ಹಿಡಿದು ಮಹಿಳಾ ಪೊಲೀಸ್ (Police) ಸಿಬ್ಬಂದಿ ಮುಂದೆಯೇ ಹುಚ್ಚಾಟವಾಡಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮೋಜಾ ಅಲಿಯಾಸ್​​ ಮಧು ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೇಲೆ ಹೊರಬಂದಿದ್ದನು. ನಿನ್ನೆ (ಅ.30) ರಂದು ತುಮಕೂರಿನ ಅಶೋಕ ರಸ್ತೆಯಲ್ಲಿನ ಖಾಸಗಿ ಬಸ್​ ನಿಲ್ದಾಣದ ಬಳಿ ಕೈಯಲ್ಲಿ ಡ್ರ್ಯಾಗರ್ ಹಿಡಿದು, ಸಾರ್ವಜನಿಕರಿಗೆ ಬೆದರಿಸಿ ಮೊಬೈಲ್ ದೋಚುತ್ತಿದ್ದನು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು. ಆರೋಪಿ ಮೋಜಾ ಅಲಿಯಾಸ್​ ಮಧು ಹಾಗೂ ಆತನ ಜೊತೆಯಿದ್ದ ಮನೋಜ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Tue, 31 October 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ