ಗೃಹ ಸಚಿವರ ತವರು ಜಿಲ್ಲೆಯಲ್ಲಿ ಮಹಿಳಾ ಪೊಲೀಸ್​ ಮುಂದೆ ಡ್ರ್ಯಾಗರ್ ಹಿಡಿದು ಪುಡಿರೌಡಿಯ ಹುಚ್ಚಾಟ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು.

ತುಮಕೂರು ಅ.31: ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parmeshwara)​​ ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumakuru) ಪುಡಿರೌಡಿಗಳ (Rowdy) ಅಟ್ಟಹಾಸ ಮಿತಿ ಮೀರಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೌದು ಓರ್ವ ಪುಡಿರೌಡಿ ಕೈಯಲ್ಲಿ ಡ್ಯ್ರಾಗರ್​ ಹಿಡಿದು ಮಹಿಳಾ ಪೊಲೀಸ್ (Police) ಸಿಬ್ಬಂದಿ ಮುಂದೆಯೇ ಹುಚ್ಚಾಟವಾಡಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮೋಜಾ ಅಲಿಯಾಸ್​​ ಮಧು ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಮೇಲೆ ಹೊರಬಂದಿದ್ದನು. ನಿನ್ನೆ (ಅ.30) ರಂದು ತುಮಕೂರಿನ ಅಶೋಕ ರಸ್ತೆಯಲ್ಲಿನ ಖಾಸಗಿ ಬಸ್​ ನಿಲ್ದಾಣದ ಬಳಿ ಕೈಯಲ್ಲಿ ಡ್ರ್ಯಾಗರ್ ಹಿಡಿದು, ಸಾರ್ವಜನಿಕರಿಗೆ ಬೆದರಿಸಿ ಮೊಬೈಲ್ ದೋಚುತ್ತಿದ್ದನು. ಈ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಡಿರೌಡಿಗಳ ಅಟ್ಟಹಾಸ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಆರೋಪಿ ಮೋಜಾ ಅಲಿಯಾಸ್​ ಮಧುವನ್ನು ಸೆರೆ ಹಿಡಿಯಲು ಹೋದ ವೇಳೆ, ಎನ್​ಇಪಿಎಸ್ ಠಾಣೆಯ ಮಹಿಳಾ ಪೊಲೀಸ್ ಮಂಗಳಮ್ಮ ಮುಂದೆ ಡ್ರ್ಯಾಗರ್ ಹಿಡಿದು ಪುಂಡಾಟವಾಡಿದ್ದಾನೆ. ಸುಮಾರು ಅರ್ಧ ಗಂಟೆಗಳ ಕಾಲ ಮಹಿಳಾ ಪೊಲೀಸ್​ ಮುಂದೆ ಹುಚ್ಚಾಟವಾಡಿದ್ದಾನೆ. ಕೊನೆಗೆ ಪೊಲೀಸರು ಹರಸಾಹಸಪಟ್ಟು ಆರೋಪಿಯನ್ನು ಹಿಡಿಯಲು ಯಶಸ್ವಿಯಾದರು. ಆರೋಪಿ ಮೋಜಾ ಅಲಿಯಾಸ್​ ಮಧು ಹಾಗೂ ಆತನ ಜೊತೆಯಿದ್ದ ಮನೋಜ್ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:47 am, Tue, 31 October 23

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
Follow Us