AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೋಟಾಸಾಬರ ಪಾಳ್ಯ ಅತ್ಯಾಚಾರ ಕೊಲೆ ಕೇಸ್; 7 ದಿನವಾದ್ರೂ ಆರೋಪಿಗಳ ಬಂಧನವಾಗಿಲ್ಲ, ಅಗ್ನಿವಂಶ ಕ್ಷತ್ರಿಯ ಸಮಾಜ ಪ್ರತಿಭಟನೆ

ಆಗಸ್ಟ್ 24.. ತುಮಕೂರು ತಾಲೂಕಿನ ಹೀರೇಹಳ್ಳಿಯ ಛೋಟಾಸಾಬರ ಪಾಳ್ಯದ ಗುಡ್ಡದ ಮೇಲೆ 30 ವರ್ಷದ ವಿವಾಹಿತ ಮಹಿಳೆಯೊಬ್ಬರು ಶವವಾಗಿ ಸಿಕ್ಕಿದ್ರು. ಅದು ಕೂಡ ಗುಡ್ಡದ ಮೇಲೆ ದನ ಮೇಯಿಸಲು ಹೋಗಿದ್ದ ಮಹಿಳೆಯನ್ನ ವಿವಸ್ತ್ರಗೊಳಿಸಿ, ಮೈಮೇಲಿದ್ದ ಚಿನ್ನಾಭರಣ ದೋಚಿ ಕೊಲೆ ಮಾಡಲಾಗಿತ್ತು.

ಛೋಟಾಸಾಬರ ಪಾಳ್ಯ ಅತ್ಯಾಚಾರ ಕೊಲೆ ಕೇಸ್; 7 ದಿನವಾದ್ರೂ ಆರೋಪಿಗಳ ಬಂಧನವಾಗಿಲ್ಲ, ಅಗ್ನಿವಂಶ ಕ್ಷತ್ರಿಯ ಸಮಾಜ ಪ್ರತಿಭಟನೆ
ಛೋಟಾಸಾಬರ ಪಾಳ್ಯ ಅತ್ಯಾಚಾರ ಹಾಗೂ ಕೊಲೆ ಕೇಸ್; 7 ದಿನವಾದ್ರೂ ಆರೋಪಿಗಳ ಬಂಧನವಾಗಿಲ್ಲ, ಅಗ್ನಿವಂಶ ಕ್ಷತ್ರಿಯ ಸಮಾಜದಿಂದ ಪ್ರತಿಭಟನೆ
TV9 Web
| Edited By: |

Updated on:Aug 30, 2021 | 12:11 PM

Share

ತುಮಕೂರು: ಛೋಟಾಸಾಬರ ಪಾಳ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆಗೈದವರ ಬಂಧನಕ್ಕೆ ಆಗ್ರಹಿಸಿ ತುಮಕೂರಿನ ಟೌನ್ಹಾಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಬೃಹತ್ ಮೆರವಣಿಗೆ ಮಾಡಲಾಗುತ್ತಿದೆ. ಘಟನೆ ನಡೆದು 7 ದಿನವಾದ್ರೂ ಆರೋಪಿಗಳ ಬಂಧನವಾಗಿಲ್ಲ. ಪೊಲೀಸರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಿ ಅಗ್ನಿವಂಶ ಕ್ಷತ್ರಿಯ ಸಮಾಜದಿಂದ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.

ಘಟನೆ ವಿವರ ಮೈಸೂರಿನಲ್ಲಿ ವಿದ್ಯಾರ್ಥಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ದಿನವೇ ತುಮಕೂರಿನಲ್ಲೂ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ರು. ಬೆಟ್ಟದ ಮೇಲೆ ಬೆತ್ತಲೆ ಶವವಾಗಿ ಬಿದ್ದಿದ್ದ ಮಹಿಳೆ ಮೇಲೆ ಅತ್ಯಾಚಾರ ನಡೆಸಲಾಗಿದೆ ಅಂತಾ ಹೇಳಲಾಗಿತ್ತು. ಕೇವಲ 4 ದಿನದಲ್ಲಿ ಮೈಸೂರಿನ ಅತ್ಯಾಚಾರ ಕೇಸ್ ಆರೋಪಿಗಳು ಸಿಕ್ಕಿದ್ರೆ, ತುಮಕೂರಿನ ಕ್ಯಾತಸಂದ್ರ ಪೊಲೀಸರಿಗೆ ಮಾತ್ರ ಮಹಿಳೆ ಸಾವು ಪ್ರಕರಣ ಸವಾಲ್ ಆಗಿದೆ.

ಸಿಗದ ಸುಳಿವು.. ಜನರಿಗೆ ದೂರವಾಗದ ಭಯ ಆಗಸ್ಟ್ 24.. ತುಮಕೂರು ತಾಲೂಕಿನ ಹೀರೇಹಳ್ಳಿಯ ಛೋಟಾಸಾಬರ ಪಾಳ್ಯದ ಗುಡ್ಡದ ಮೇಲೆ 30 ವರ್ಷದ ವಿವಾಹಿತ ಮಹಿಳೆಯೊಬ್ಬರು ಶವವಾಗಿ ಸಿಕ್ಕಿದ್ರು. ಅದು ಕೂಡ ಗುಡ್ಡದ ಮೇಲೆ ದನ ಮೇಯಿಸಲು ಹೋಗಿದ್ದ ಮಹಿಳೆಯನ್ನ ವಿವಸ್ತ್ರಗೊಳಿಸಿ, ಮೈಮೇಲಿದ್ದ ಚಿನ್ನಾಭರಣ ದೋಚಿ ಕೊಲೆ ಮಾಡಲಾಗಿತ್ತು. ಮೈಮೇಲೆ ಕಚ್ಚಿದ ಮತ್ತು ಪರಚಿದ ಕಲೆಗಳು ಇತ್ತು. ಹೀಗಾಗಿ ಇದು ಮೇಲ್ನೋಟಕ್ಕೆ ರೇಪ್ ಌಂಡ್ ಮರ್ಡರ್ ಅಂತಾ ಹೇಳಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿರೋ ಕ್ಯಾತಸಂದ್ರ ಪೊಲೀಸರು ಇದುವರೆಗೂ ಆರೋಪಿಗಳನ್ನು ಬಂಧಿಸಿಲ್ಲ. ಕೇವಲ ಮೃತಳ ಸಂಬಂಧಿಕರ ವಿಚಾರಣೆ ಮಾಡಿರುವುದನ್ನು ಬಿಟ್ಟರೆ, ಯಾವ ಸಾಕ್ಷ್ಯವನ್ನೂ ಪೊಲೀಸರು ಸಂಗ್ರಹಿಸಿಲ್ಲ. ಹೀಗಾಗಿ ಪೊಲೀಸರ ಕಾರ್ಯ ವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗ್ತಿದೆ.

ಘಟನೆ ಸಂಭವಿಸಿ ಬರೋಬ್ಬರಿ 7 ದಿನವಾಗಿದೆ. ಆದರೂ ಪೊಲೀಸರಿಗೆ ಒಂದು ಸಣ್ಣ ಸುಳಿವೂ ಸಿಕ್ಕಿಲ್ಲ. ಟವರ್ ಲೊಕೇಶನ್ನಲ್ಲೂ ಪೊಲೀಸರಿಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಮೈಸೂರಿನಲ್ಲಿ ಆರೋಪಿಗಳನ್ನು ಹಿಡಿಯುವಲ್ಲಿ ಅಲ್ಲಿನ ಪೊಲೀಸರು ತೋರಿಸಿದ ಕಾಳಜಿ, ಇಲ್ಲಿನ ಪೊಲೀಸರು ತೋರುತ್ತಿಲ್ಲ ಅಂತಾ ಜನ ಆಕ್ರೋಶ ಹೊರ ಹಾಕ್ತಿದ್ದಾರೆ. ಈ ನಡುವೆ ಡಿವೈಎಸ್ಪಿ ನೇತೃತ್ವದಲ್ಲಿ ಮೂರು ತಂಡಗಳನ್ನು ಮಾಡಿ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇಷ್ಟಾದರೂ ಗ್ರಾಮದಲ್ಲಿ ಇನ್ನೂ ಭಯದ ವಾತಾವರಣ ಇದೆ. ಮಹಿಳೆಯರು, ವಿದ್ಯಾರ್ಥಿನಿಯರು ಹೊರ ಬರೋದಕ್ಕೆ ಹೆದರುತ್ತಿದ್ದಾರೆ. ದನ ಮೇಯಿಸುವವರಂತೂ ಬೆದರಿ ಗೂಡು ಸೇರಿದ್ದಾರೆ.

ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ಭೇದಿಸೋಕೆ ಕ್ಯಾತಸಂದ್ರ ಪೊಲೀಸರು ಪರದಾಡ್ತಿದ್ದಾರೆ. ಆರೋಪಿಗಳ ಹೆಜ್ಜೆ ಗುರುತು ಪತ್ತೆ ಹಚ್ಚುವಲ್ಲಿ ಫೇಲ್ ಆಗ್ತಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದಂತೆ, ತುಮಕೂರಿನ ಈ ಕೇಸ್ನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಸರ್ಕಾರ ಅಧಿಕಾರಿಗಳಿಗೆ ಬಿಸಿ ಮುಟ್ಟಿಸ್ಬೇಕು ಅಂತಾ ಜನ ಆಗ್ರಹಿಸ್ತಿದ್ದಾರೆ. ಇದರ ಜೊತೆಗೆ ಇಂದು ಅಗ್ನಿವಂಶ ಕ್ಷತ್ರಿಯ ಸಮಾಜ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದೆ.

tumkur rape and murder protest 2

ಛೋಟಾಸಾಬರ ಪಾಳ್ಯ ಅತ್ಯಾಚಾರ ಹಾಗೂ ಕೊಲೆ ಕೇಸ್; 7 ದಿನವಾದ್ರೂ ಆರೋಪಿಗಳ ಬಂಧನವಾಗಿಲ್ಲ, ಅಗ್ನಿವಂಶ ಕ್ಷತ್ರಿಯ ಸಮಾಜದಿಂದ ಪ್ರತಿಭಟನೆ

ಇದನ್ನೂ ಓದಿ: ಛೋಟಾಸಾಬರಪಾಳ್ಯ ಅತ್ಯಾಚಾರ ಕೇಸ್ ಆರೋಪಿಗಳನ್ನು ಬಂಧಿಸಿ; ಗ್ರಾಮೀಣ ಭಾಗಕ್ಕೂ ಗಮನ ಕೊಡಿ: ಜೆಡಿಎಸ್ ಶಾಸಕ ಆಗ್ರಹ

Published On - 12:01 pm, Mon, 30 August 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ