Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಮೇಲಾಧಿಕಾರಿಯಿಂದ ಕಿರುಕುಳ ಆರೋಪ; ಡೆತ್​ನೋಟ್ ಬರೆದಿಟ್ಟು ಸಹಾಯಕ ಸರ್ವೆಯರ್​ ಆತ್ಮಹತ್ಯೆಗೆ ಯತ್ನ

ತುಮಕೂರು ಜಿಲ್ಲಾಧಿಕಾರಿ ಆವರಣದಲ್ಲಿ ಸಹಾಯಕ ಸರ್ವೆಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಹೇಶ್ ಎಂಬಾತ​ ಮೇಲಾಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್​ನೋಟ್​ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತುಮಕೂರು: ಮೇಲಾಧಿಕಾರಿಯಿಂದ ಕಿರುಕುಳ ಆರೋಪ; ಡೆತ್​ನೋಟ್ ಬರೆದಿಟ್ಟು ಸಹಾಯಕ ಸರ್ವೆಯರ್​ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಅಧಿಕಾರಿ
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 10:05 PM

ತುಮಕೂರು, ಆ.23: ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಸಹಾಯಕ ಸರ್ವೆಯರ್ (Assistant Surveyor)​ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು (Tumakur) ಜಿಲ್ಲಾಧಿಕಾರಿ ಆವರಣದಲ್ಲಿ ನಡೆದಿದೆ. ಮಹೇಶ್​ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. 6 ರಿಂದ7 ವರ್ಷ ಕೆಲಸ ಮಾಡುತ್ತಿರುವ ಸಹಾಯಕ ಸರ್ವೆಯರ್ ಮಹೇಶ್ ಮೇಲೆ ಸರ್ವೆ ಮೇಲ್ವಿಚಾರಕಿ ಕವಿತಾ ಎಂಬುವವರು ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಹೌದು, ಸರಿಯಾಗಿ ಕೆಲಸ ಮಾಡಿಲ್ಲ ಎಂದು ಮಹೇಶ್​ಗೆ ಟಾರ್ಚರ್​ ನೀಡುತ್ತಿದ್ದಾರೆ ಎಂದು ಮಹೇಶ್​ ಆರೋಪಿಸಿ ಡೆತ್​ನೋಟ್ ಬರೆದಿಟ್ಟು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿಷ ಸೇವಿಸಿ​​ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಈ ಘಟನೆ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರತಿಭಾ ಕಾರಂಜಿ ಕಾರ್ಯಕ್ರಮ ವೇಳೆ ಎಡವಟ್ಟು! ಪೆಟ್ರೋಲ್ ಬಿದ್ದು ವಿದ್ಯಾರ್ಥಿಗೆ ಸುಟ್ಟಗಾಯ

ರಾಮನಗರ: ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ವೇಳೆ ಪೆಟ್ರೋಲ್ ಬಿದ್ದು ವಿದ್ಯಾರ್ಥಿಯೊರ್ವನಿಗೆ ಸುಟ್ಟಗಾಯಗಳಾಗಿವೆ. ಕೂಡಲೇ ಬಾಲಕನನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರೀತಮ್ (12)ಗಾಯಗೊಂಡ ವಿದ್ಯಾರ್ಥಿ. 5 ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದ ಪ್ರೀತಮ್, ವೀರಗಾಸೆ ಪ್ರದರ್ಶನ ವೇಳೆ ಪೆಟ್ರೋಲ್ ಬಳಕೆ ಮಾಡಿದ್ದರು. ಈ ವೇಳೆ ಈ ಅವಘಡ ಸಂಭವಿಸಿದ್ದು, ಕಣ್ಣು, ಮುಖ ಹಾಗೂ ತಲೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಘಟನೆ ಬಳಿಕ ವಿದ್ಯಾರ್ಥಿಗಳ ಕೈಯಲ್ಲಿ ಪೆಟ್ರೋಲ್ ಬಳಸಲು ಅನುಮತಿ ನೀಡಿದಕ್ಕೆ ಶಿಕ್ಷಕರ ವಿರುದ್ದ ಪೋಷಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಬೆಡ್​​ ರೂಮ್​ನಲ್ಲಿ ಯುವಕನ ಜೊತೆ ಹೆಂಡ್ತಿ ಕಂಡು ಹೌಹಾರಿದ ಪತಿ, ಡೆತ್​ನೋಟ್ ನಲ್ಲಿ ಭಾವುಕ ನುಡಿ ಬರೆದಿಟ್ಟು ಬಿಬಿಎಂಪಿ ನೌಕರ ಆತ್ಮಹತ್ಯೆ

ಬೆಸ್ಕಾಂ ಎಇಇ ಮೇಲೆ‌ ಲೋಕಾಯುಕ್ತ ದಾಳಿ

ತುಮಕೂರು: ಜಿಲ್ಲೆಯ ಕೊರಟಗೆರೆ ಬೆಸ್ಕಾಂ ಎಇಇ ಅರಸರಾಜು ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೈತರ ಬಳಿ ಸದಾ ಲಂಚಕ್ಕಾಗಿ ಪೀಡಿಸುತ್ತಿದ್ದ ಆರೋಪದಡಿ ದಾಳಿ ಮಾಡಲಾಗಿದ್ದು, ಗುತ್ತಿಗೆದಾರ ಹರೀಶ್ ಎಂಬುವವರಿಂದ 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಅರಸರಾಜು ಬಳಿಯಿದ್ದ ಸುಮಾರು 50 ಸಾವಿರ ನಗದು ವಶಕ್ಕೆ ಪಡೆಯಲಾಗಿದ್ದು, ಅರಸರಾಜು ಅವರನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್