AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಶಾಲೆಯಲ್ಲಿ ಪಾಠ ಮಾಡದೆ ಜಗಳವಾಡುವ ಶಿಕ್ಷಕಿಯರು; ಬೇಸತ್ತು ಶಾಲೆಗೆ ಬೀಗ ಜಡಿದ ಗ್ರಾಮಸ್ಥರು

ಶಿಕ್ಷಕರಿಯರ ಜಗಳ ನೋಡಿ ರೋಸಿ ಹೋಗಿದ್ದ ಗ್ರಾಮಸ್ಥರು ಕೊನೆಗೆ ಶಾಲೆಗೆ ಬೀಗ ಹಾಕಿದ್ದು, ತುಮಕೂರು ಬಿಇಒ ಹನುಮನಾಯಕ್ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತುಮಕೂರು ಶಾಲೆಯಲ್ಲಿ ಪಾಠ ಮಾಡದೆ ಜಗಳವಾಡುವ ಶಿಕ್ಷಕಿಯರು; ಬೇಸತ್ತು ಶಾಲೆಗೆ ಬೀಗ ಜಡಿದ ಗ್ರಾಮಸ್ಥರು
ಶಾಲೆಗೆ ಬಾಗಿಲಿಗೆ ಬೀಗ ಹಾಕಿದ ಹಿನ್ನೆಲೆ ವಿದ್ಯಾರ್ಥಿಗಳು ಹೊರಗೆ ಕೂತು ಪಾಠ ಕೇಳುತ್ತಿದ್ದಾರೆ.
TV9 Web
| Edited By: |

Updated on:Jul 16, 2022 | 1:23 PM

Share

ತುಮಕೂರು: ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯರ (Teachers) ನಡುವೆ ಮನಸ್ತಾಪದಿಂದ ಬೇಸತ್ತು ಗ್ರಾಮಸ್ಥರು (Villagers) ಶಾಲೆಗೆ ಬೀಗ ಜಡಿದಿರುವ ಘಟನೆ ನಡೆದಿದೆ. ಶಿಕ್ಷಕಿಯರಾದ ಗಂಗಲಕ್ಷ್ಮಮ್ಮ ಹಾಗೂ ಭಾಗ್ಯಮ್ಮ ಪ್ರತಿದಿನವೂ ಶಾಲೆಗೆ ತಡವಾಗಿ ಬರುತ್ತಾರೆ. ಒಬ್ಬರನ್ನ ಕಂಡರೇ ಮತ್ತೊಬ್ಬರಿಗೆ ಆಗುವುದಿಲ್ಲ. ಇಬ್ಬರೂ ಮಕ್ಕಳಿಗೆ ಪಾಠ ಮಾಡದೇ ಸದಾ ಪರಸ್ಪರ ಜಗಳವಾಡುತ್ತಿರುತ್ತಾರೆ. ಶಿಕ್ಷಕರಿಯರ ಜಗಳ ನೋಡಿ ರೋಸಿ ಹೋಗಿದ್ದ ಗ್ರಾಮಸ್ಥರು ಕೊನೆಗೆ ಶಾಲೆಗೆ ಬೀಗ ಹಾಕಿದ್ದು, ತುಮಕೂರು ಬಿಇಒ ಹನುಮನಾಯಕ್ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬೀಗ ಹಾಕಿದ್ದಕ್ಕೆ ಮಕ್ಕಳು ಹೊರಗೆ ಕೂತಿದ್ದಾರೆ.

ಬಸ್ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ: ಬಾಗಲಕೋಟೆ: ಕೆಎಸ್ಆರ್​ಟಿಸಿ ಬಸ್ ನಿಲುಗಡೆಯಾಗದ ಹಿನ್ನೆಲೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಬಸ್ ಮೇಲೆ ಕಲ್ಲೆಸೆದು ಆಕ್ರೋಶ ಹೊರಹಾಕಿದ್ದಾರೆ. ಈ ಘಟನೆ ಬಾಗಲಕೋಟೆ ಶಿಗಿಕೇರಿ ಕ್ರಾಸ್ ಬಳಿಯ ಮೇಲ್ಸೆತುವೆ ಬಳಿ ನಡೆದಿದೆ. ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಫ್ಲೈ ಓವರ್ ಮೇಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಸ್ಥಳಕ್ಕೆ ಕೆಎಸ್ಆರ್​ಟಿಸಿ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜೊತೆ ಸಂಧಾನ ಮಾಡಿದರು. ಸಂಧಾನ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.

ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ತುಂಗಭದ್ರಾ, ಉಕ್ಕಡಗಾತ್ರಿ ಪುಣ್ಯಕ್ಷೇತ್ರ ಜಲಾವೃತ

ಇದನ್ನೂ ಓದಿ
Image
Edible Oil Price: ತೈಲ ಬೆಲೆಯಲ್ಲಿ ಭಾರೀ ಕುಸಿತ, ಚಿನ್ನ- ಬೆಳ್ಳಿಯ ಆಮದು ಸುಂಕವೂ ಕಡಿತ
Image
Uttar Pradesh: ಸರ್ಕಾರಿ ಹಿರಿಯ ಅಧಿಕಾರಿಯ ಶವ ಪತ್ತೆ, ಆತ್ಮಹತ್ಯೆ ಶಂಕೆ: ಪೊಲೀಸರು
Image
ಮಹಿಳೆ ಹಣ ಎಸೆದ ಮಾತ್ರಕ್ಕೆ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕುಂದುಂಟಾಗುವುದಿಲ್ಲ: ಶಾಸಕ ಯು.ಟಿ ಖಾದರ್
Image
World Record: ವಿಶ್ವ ದಾಖಲೆ ಬರೆದ 24,679 ನೈಸರ್ಗಿಕ ವಜ್ರಗಳುಳ್ಳ ಉಂಗುರು, ಇದರ ಬೆಲೆ ಎಷ್ಟು ಗೊತ್ತಾ?

ಕಾಮುಕ ಶಿಕ್ಷಕನ ವಿರುದ್ಧ ಕೊನೆಗೂ ದಾಖಲಾಯ್ತು ಪೋಕ್ಸೋ ಕೇಸ್: ಕೊಪ್ಪಳ: ಕಾಮುಕ ಶಿಕ್ಷಕನ ವಿರುದ್ಧ ಜಿಲ್ಲೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಕಾಮುಕ ಶಿಕ್ಷಕ ಅಜರುದ್ದೀನ್ ಮಕ್ಕಳೊಂದಿಗೆ ವಿಕೃತಿ ಮೆರೆದ ವಿಡಿಯೋ ವೈರಲ್ ಆಗಿತ್ತು. ಪಾಠ ಹೇಳುವ ನೆಪದಲ್ಲಿ ಮಕ್ಕಳ ಗುಪ್ತಾಂಗ ಅಳತೆ ಮಾಡಿ ವಿಕೃತಿ ಮೆರದಿದ್ದ. ಶಿಕ್ಷಕನ ವಿರುದ್ಧ ಗಂಗಾವತಿ ಶಿಕ್ಷಣಾಧಿಕಾರಿ ಸುರೇಶ ಗೌಡ ದೂರು ನೀಡಿದ್ದರು. ಸುರೇಶ್ ಗೌಡ ದೂರಿನ ಆಧಾರದ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ.

ಶಿಕ್ಷಣ ಇಲಾಖೆ ಮಕ್ಕಳ ಪತ್ತೆಗೆ ತಂಡ ರಚನೆ ಮಾಡಿತ್ತು. ಇದೀಗ ಅಧಿಕಾರಿಗಳು ವಿಡಿಯೋದಲ್ಲಿದ್ದ ಮಕ್ಕಳನ್ನ ಪತ್ತೆ ಹಚ್ಚಿದ್ದಾರೆ. ಮಕ್ಕಳ ಗುರುತು ಪತ್ತೆಯಾದ ಬಳಿಕ ಅವರ ಹೇಳಿಕೆ ಪಡೆದು ಪೋಕ್ಸೋ ಕೇಸ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಮಹಿಳೆ ಹಣ ಎಸೆದ ಮಾತ್ರಕ್ಕೆ ಸಿದ್ದರಾಮಯ್ಯನವರ ವ್ಯಕ್ತಿತ್ವಕ್ಕೆ ಕುಂದುಂಟಾಗುವುದಿಲ್ಲ: ಶಾಸಕ ಯು.ಟಿ ಖಾದರ್

Published On - 1:15 pm, Sat, 16 July 22

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ