AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ವಸತಿ ಶಾಲೆ ಮಕ್ಕಳ ಮೇಲೆ ಪಾನಮತ್ತನಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಕೊಡಿಸದೆ ವಿಷಯ ಮುಚ್ಚಿಟ್ಟ ಆಡಳಿತ ಮಂಡಳಿ

ಸುಮಾರು 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ಈ ವೇಳೆ ಮಕ್ಕಳು ದಮ್ಮಯ್ಯ ಹೊಡೀಬೇಡಿ ಎಂದು ಕಾಲಿಗೆ ಬಿದ್ದರೂ ಆರೋಪಿಯು ಹೊಡೆತ ನಿಲ್ಲಿಸಿಲ್ಲ.

ತುಮಕೂರು: ವಸತಿ ಶಾಲೆ ಮಕ್ಕಳ ಮೇಲೆ ಪಾನಮತ್ತನಿಂದ ಮಾರಣಾಂತಿಕ ಹಲ್ಲೆ: ಚಿಕಿತ್ಸೆ ಕೊಡಿಸದೆ ವಿಷಯ ಮುಚ್ಚಿಟ್ಟ ಆಡಳಿತ ಮಂಡಳಿ
ಆರೋಪಿ ಭರತ್ ಮತ್ತು ಪೆಟ್ಟು ತಿಂದ ಮಗು
TV9 Web
| Edited By: |

Updated on: Nov 25, 2022 | 10:16 AM

Share

ತುಮಕೂರು: ನಗರದ ಹೊರವಲಯದಲ್ಲಿರುವ ವಸತಿ ಶಾಲಾ ಮಕ್ಕಳ ಮೇಲೆ ಪಾನಮತ್ತ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಸಂದ್ರ ಗ್ರಾಮದ ವಿಶ್ವಭಾರತಿ ಸರ್ಕಾರಿ ಅನುದಾನಿತ ಶಾಲೆಯಲ್ಲಿ ಕೃತ್ಯ ನಡೆದಿದೆ. ಶಾಲೆಯ ಕಾರ್ಯದರ್ಶಿ ಎನ್.ಮೂರ್ತಿ ಅವರ ಪುತ್ರ ಭರತ್​ ಮಕ್ಕಳನ್ನು ಥಳಿಸಿರುವ ಆರೋಪಿ ಎಂದು ಪೋಷಕರು ದೂರಿದ್ದಾರೆ. ಕುಡಿದ ಮತ್ತಿನಲ್ಲಿ ಮಕ್ಕಳ ಮೇಲೆ ಬೆಲ್ಟ್ ಮತ್ತು ದೊಣ್ಣೆಯಿಂದ ಆರೋಪಿಯು ಹಲ್ಲೆ ನಡೆಸಿದ್ದಾನೆ. ನಾಲ್ಕು ದಿನಗಳ ಹಿಂದೆ (ನ 21) ರಾತ್ರಿ 10 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಆದರೆ ಮಕ್ಕಳಿಗೆ ಚಿಕಿತ್ಸೆಯನ್ನೂ ಕೊಡಿಸದ ಆಡಳಿತ ಮಂಡಳಿಯು ಹಲ್ಲೆಯ ವಿಚಾರವನ್ನೇ ಮುಂದಿಟ್ಟಿತ್ತು ಎಂದು ದೂರಲಾಗಿದೆ.

ಸುಮಾರು 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಮನಬಂದಂತೆ ಹಲ್ಲೆ ಮಾಡಲಾಗಿದೆ. ಮಕ್ಕಳ ತೊಡೆ‌, ಮರ್ಮಾಂಗಗಳಿಗೂ ಹೊಡೆದ ಬಿದ್ದಿದೆ. ಘಟನೆ ನಡೆದು 3 ದಿನಗಳ ಬಳಿಕ ಮಕ್ಕಳಿಗೆ ಪೋಷಕರಿಗೆ ಕರೆ ಮಾಡಲು ಅವಕಾಶ ಸಿಕ್ಕಿದೆ. ವಿಚಾರ ತಿಳಿಯುತ್ತಿದ್ದಂತೆ ರಾತ್ರೋರಾತ್ರಿ ಶಾಲೆಗೆ ಬಂದ ಪೋಷಕರು ಆರೋಪಿ ಭರತ್​ಗಾಗಿ ಹುಡುಕಾಡಿದರು. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಹ ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಸುಮಾರು 40 ಮಕ್ಕಳನ್ನು ಸಾಲಾಗಿ ನಿಲ್ಲಿಸಿ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಲಾಗಿದೆ. ಈ ವೇಳೆ ಮಕ್ಕಳು ದಮ್ಮಯ್ಯ ಹೊಡೀಬೇಡಿ ಎಂದು ಕಾಲಿಗೆ ಬಿದ್ದರೂ ಆರೋಪಿಯು ಹೊಡೆತ ನಿಲ್ಲಿಸಿಲ್ಲ. ಮಕ್ಕಳು ಬೇಗ ಮಲಗಿದ್ದೇ ಹೊಡೆತಕ್ಕೆ ಕಾರಣ ಎಂದು ದೂರಲಾಗಿದೆ. ಘಟನೆ ವೇಳೆ ಒಂದು ಮಗುವಿನ ಕೈ ಮುರಿದು ಹೋಗಿದೆ.

ಜೆಡಿಎಸ್ ಶಾಸಕ ಗೌರಿಶಂಕರ್ ಸೇರಿ ಮೂವರ ವಿರುದ್ಧ ದೂರು ದಾಖಲು

ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸುರೇಶ್ ಗೌಡ (Suresh Gowda) ಅವರ ಕೊಲೆ ಯತ್ನ ಆರೋಪ ಸಂಬಂಧ ಜೆಡಿಎಸ್ ಶಾಸಕ ಗೌರಿಶಂಕರ್ (MLA Gowri Shankar) ಮತ್ತು ಇವರ ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು (ಅಟ್ಟಿಕಾ ಬಾಬು) ವಿರುದ್ಧ ದೂರು ದಾಖಲಾಗಿದೆ. ತಮ್ಮ ವಿರುದ್ಧದ ಕೊಲೆ ಸಂಚಿನ ಬಗ್ಗೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ಸುರೇಶ್ ಗೌಡ ಅವರು ದೂರು ನೀಡಿದ್ದು, ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ್, ಅಟ್ಟಿಕಾ ಬಾಬು ಸೇರಿಕೊಂಡು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ದೂರಿನ ಅನ್ವಯ ಪೊಲೀಸರು, IPC 1860 ( 120B, 506, 109, 34) ಅಡಿ‌ ದೂರು ದಾಖಲಿಸಿಕೊಂಡಿದ್ದಾರೆ.

ತುಮಕೂರಿನ ಜೆಎಮ್​ಎಫ್​ಸಿ ನ್ಯಾಯಾಲಯದ ಅನುಮತಿ ಪಡೆದ ಸುರೇಶ್ ಗೌಡ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಕೊಲೆ‌ ಮಾಡಲು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್, ಬೆಂಬಲಿಗ ಹಿರೇಹಳ್ಳಿ ಮಹೇಶ್ ಹಾಗೂ ಬೊಮ್ಮನಹಳ್ಳಿ ಬಾಬು ಅವರು ರೌಡಿಶಿಟರ್ ಮೂಲಕ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ಅವರು ಇತ್ತೀಚಿಗೆ ಹೇಳಿಕೆ ನೀಡಿದ್ದರು.

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್