AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸಾಲ ತೀರಿಸಲಾಗದೆ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ

ಆಂಧ್ರ ಪ್ರದೇಶದ ಹಿಂದೂಪುರದಲ್ಲಿ ವಾಸವಾಗಿದ್ದ ಸುಜಾತಾ ಎಂಬುವರನ್ನು ಸಾಲ ತೀರಿಸಲಾಗದೆ ಮಗಳನ್ನು 35 ಸಾವಿರ ರೂ.ಗೆ ಶ್ರೀರಾಮುಲು ಎಂಬುವರಿಗೆ ಮಾರಾಟ ಮಾಡಿದ್ದಾರೆ. ಬಾಲಕಿ ತುಮಕೂರು ನಗರದ ದಿಬ್ಬೂರು ನಿವಾಸಿಯಾಗಿದ್ದಾಳೆ. ಬಾಲಕಿ ಸದ್ಯ ಬಾಲ‌ ಮಂದಿರದಲ್ಲಿ ಇದ್ದಾಳೆ.

ತುಮಕೂರು: ಸಾಲ ತೀರಿಸಲಾಗದೆ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ
ತುಮಕೂರು ನಗರ ಪೊಲೀಸ್​ ಠಾಣೆ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ವಿವೇಕ ಬಿರಾದಾರ|

Updated on: Jul 12, 2024 | 9:49 AM

Share

ತುಮಕೂರು, ಜುಲೈ 12: ಸಾಲ ತೀರಿಸಲಾಗದೆ ಚಿಕ್ಕಮ್ಮ ಮಗಳನ್ನು ಮಾರಾಟ ಮಾಡಿದ್ದಾಳೆ. ಆಂಧ್ರ ಪ್ರದೇಶದ (Andra Pradesh) ಹಿಂದೂಪುರದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ತಾಯಿ ಚೌಡಮ್ಮ ತುಮಕೂರು (Tumakur) ನಗರದ ದಿಬ್ಬೂರದಲ್ಲಿ ವಾಸಿಸುತ್ತಿದ್ದಾಳೆ. ಚೌಡಮ್ಮ ತನ್ನ ಮಗಳನ್ನು ತಂಗಿ ಸುಜಾತಾ ವಾಸವಿದ್ದ ಹಿಂದೂಪುರದ ಮನೆಗೆ ಕಳುಹಿಸಿದ್ದಳು. ಹಿಂದೂಪುರ ಚೌಡಮ್ಮ ಮತ್ತು ಸುಜಾತಾರ ತವರು ಮನೆಯಾಗಿದೆ. ಸುಜಾತಾ ಹಿಂದೂಪುರದಲ್ಲಿ ಶೀರಾಮುಲು ಎಂಬುವರ ಬಳಿ ಸಾಲ ಮಾಡಿದ್ದಳು.

ಈ ಸಾಲ ತೀರಿಸಲಾಗದೆ ಚಿಕ್ಕಮ್ಮ ಸುಜಾತಾ ಬಾಲಕಿಯನ್ನು ಶ್ರೀರಾಮುಲುಗೆ 35 ಸಾವಿರ ರೂ.ಗೆ ಮಾರಾಟ ಮಾಡಿದ್ದಳು. ಶ್ರೀರಾಮುಲು ಬಾಲಕಿಯನ್ನು ಬಾತುಕೋಳಿ ಮೇಯಿಸಲು ಇರಿಸಿಕೊಂಡಿದ್ದನು. ಬಾಲಕಿ ಕರೆತರಲು ಚೌಡಮ್ಮ ಹಿಂದೂಪುರಕ್ಕೆ ಹೋದಾಗ ವಿಷಯ ತಿಳಿದಿದೆ. ಬಳಿಕ, ಚೌಡಮ್ಮ ತನ್ನ ಪುತ್ರಿಯನ್ನು ಕಳಿಸಿಕೊಡುವಂತೆ ಶ್ರೀರಾಮುಲು ಬಳಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗೃಹ ಸಚಿವರ ತವರು ಕ್ಷೇತ್ರ ತುಮಕೂರಿನಲ್ಲೇ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ

ಈ ವೇಳೆ ಶ್ರೀರಾಮುಲು ಬಾಲಕಿಯನ್ನು ಖರೀದಿಸಿದ್ದು, ಸಾಲದ ಹಣ ಕೊಟ್ಟು ಕರೆದೊಯ್ಯುವಂತೆ ಹೇಳಿದ್ದಾರೆ. ನಂತರ ಬಾಲಕಿಯ ತಾಯಿ ಚೌಡಮ್ಮ ತುಮಕೂರಿಗೆ ಬಂದು, ಮಗಳ ಸ್ಥಿತಿಯ ಬಗ್ಗೆ ಕಾರ್ಮಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಕಾರ್ಮಿಕ ಅಧಿಕಾರಿಗಳು ಪೊಲೀಸರಿ ವಿಷಯ ತಿಳಿಸಿದ್ದಾರೆ. ಕೂಡಲೆ ತುಮಕೂರು ಪೊಲೀಸರು ಹಿಂದೂಪುರಕ್ಕೆ ಹೋಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿಯನ್ನು ಜಿಲ್ಲಾ ಬಾಲ‌ ಮಂದಿರದಲ್ಲಿ ಇರಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ