AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಸಾಲ ತೀರಿಸಲಾಗದೆ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ

ಆಂಧ್ರ ಪ್ರದೇಶದ ಹಿಂದೂಪುರದಲ್ಲಿ ವಾಸವಾಗಿದ್ದ ಸುಜಾತಾ ಎಂಬುವರನ್ನು ಸಾಲ ತೀರಿಸಲಾಗದೆ ಮಗಳನ್ನು 35 ಸಾವಿರ ರೂ.ಗೆ ಶ್ರೀರಾಮುಲು ಎಂಬುವರಿಗೆ ಮಾರಾಟ ಮಾಡಿದ್ದಾರೆ. ಬಾಲಕಿ ತುಮಕೂರು ನಗರದ ದಿಬ್ಬೂರು ನಿವಾಸಿಯಾಗಿದ್ದಾಳೆ. ಬಾಲಕಿ ಸದ್ಯ ಬಾಲ‌ ಮಂದಿರದಲ್ಲಿ ಇದ್ದಾಳೆ.

ತುಮಕೂರು: ಸಾಲ ತೀರಿಸಲಾಗದೆ ಮಗಳನ್ನೇ ಮಾರಾಟ ಮಾಡಿದ ಚಿಕ್ಕಮ್ಮ
ತುಮಕೂರು ನಗರ ಪೊಲೀಸ್​ ಠಾಣೆ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Jul 12, 2024 | 9:49 AM

Share

ತುಮಕೂರು, ಜುಲೈ 12: ಸಾಲ ತೀರಿಸಲಾಗದೆ ಚಿಕ್ಕಮ್ಮ ಮಗಳನ್ನು ಮಾರಾಟ ಮಾಡಿದ್ದಾಳೆ. ಆಂಧ್ರ ಪ್ರದೇಶದ (Andra Pradesh) ಹಿಂದೂಪುರದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ತಾಯಿ ಚೌಡಮ್ಮ ತುಮಕೂರು (Tumakur) ನಗರದ ದಿಬ್ಬೂರದಲ್ಲಿ ವಾಸಿಸುತ್ತಿದ್ದಾಳೆ. ಚೌಡಮ್ಮ ತನ್ನ ಮಗಳನ್ನು ತಂಗಿ ಸುಜಾತಾ ವಾಸವಿದ್ದ ಹಿಂದೂಪುರದ ಮನೆಗೆ ಕಳುಹಿಸಿದ್ದಳು. ಹಿಂದೂಪುರ ಚೌಡಮ್ಮ ಮತ್ತು ಸುಜಾತಾರ ತವರು ಮನೆಯಾಗಿದೆ. ಸುಜಾತಾ ಹಿಂದೂಪುರದಲ್ಲಿ ಶೀರಾಮುಲು ಎಂಬುವರ ಬಳಿ ಸಾಲ ಮಾಡಿದ್ದಳು.

ಈ ಸಾಲ ತೀರಿಸಲಾಗದೆ ಚಿಕ್ಕಮ್ಮ ಸುಜಾತಾ ಬಾಲಕಿಯನ್ನು ಶ್ರೀರಾಮುಲುಗೆ 35 ಸಾವಿರ ರೂ.ಗೆ ಮಾರಾಟ ಮಾಡಿದ್ದಳು. ಶ್ರೀರಾಮುಲು ಬಾಲಕಿಯನ್ನು ಬಾತುಕೋಳಿ ಮೇಯಿಸಲು ಇರಿಸಿಕೊಂಡಿದ್ದನು. ಬಾಲಕಿ ಕರೆತರಲು ಚೌಡಮ್ಮ ಹಿಂದೂಪುರಕ್ಕೆ ಹೋದಾಗ ವಿಷಯ ತಿಳಿದಿದೆ. ಬಳಿಕ, ಚೌಡಮ್ಮ ತನ್ನ ಪುತ್ರಿಯನ್ನು ಕಳಿಸಿಕೊಡುವಂತೆ ಶ್ರೀರಾಮುಲು ಬಳಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಗೃಹ ಸಚಿವರ ತವರು ಕ್ಷೇತ್ರ ತುಮಕೂರಿನಲ್ಲೇ ಮಕ್ಕಳ ಮಾರಾಟ ಜಾಲ ಪತ್ತೆ: 6 ಜನರ ಬಂಧನ

ಈ ವೇಳೆ ಶ್ರೀರಾಮುಲು ಬಾಲಕಿಯನ್ನು ಖರೀದಿಸಿದ್ದು, ಸಾಲದ ಹಣ ಕೊಟ್ಟು ಕರೆದೊಯ್ಯುವಂತೆ ಹೇಳಿದ್ದಾರೆ. ನಂತರ ಬಾಲಕಿಯ ತಾಯಿ ಚೌಡಮ್ಮ ತುಮಕೂರಿಗೆ ಬಂದು, ಮಗಳ ಸ್ಥಿತಿಯ ಬಗ್ಗೆ ಕಾರ್ಮಿಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಆಧರಿಸಿ ಕಾರ್ಮಿಕ ಅಧಿಕಾರಿಗಳು ಪೊಲೀಸರಿ ವಿಷಯ ತಿಳಿಸಿದ್ದಾರೆ. ಕೂಡಲೆ ತುಮಕೂರು ಪೊಲೀಸರು ಹಿಂದೂಪುರಕ್ಕೆ ಹೋಗಿ ಬಾಲಕಿಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಬಾಲಕಿಯನ್ನು ಜಿಲ್ಲಾ ಬಾಲ‌ ಮಂದಿರದಲ್ಲಿ ಇರಿಸಲಾಗಿದೆ. ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ