AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ದೇವರ ಉತ್ಸವ ನೋಡುತ್ತಿದ್ದವರ ಮೇಲೆ ನುಗ್ಗಿದ ಗೂಡ್ಸ್ ಆಟೋ; ಒಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ

ದೊಡ್ಡಮ್ಮ, ನರಸಮ್ಮ, ಕುಮಾರ್ ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಆಟೋ ಡ್ರೈವರ್​ನ​​ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ತುಮಕೂರು: ದೇವರ ಉತ್ಸವ ನೋಡುತ್ತಿದ್ದವರ ಮೇಲೆ ನುಗ್ಗಿದ ಗೂಡ್ಸ್ ಆಟೋ; ಒಬ್ಬರ ಸಾವು, ನಾಲ್ವರ ಸ್ಥಿತಿ ಗಂಭೀರ
ಅಪಘಾತ
Follow us
TV9 Web
| Updated By: ganapathi bhat

Updated on: Jan 29, 2022 | 5:44 PM

ತುಮಕೂರು: ದೇವರ ಉತ್ಸವ ನೋಡುತ್ತಿದ್ದವರ ಮೇಲೆ ಗೂಡ್ಸ್ ಆಟೋ ನುಗ್ಗಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರ ಗೇಟ್​ನಲ್ಲಿ ಶನಿವಾರ ನಡೆದಿದೆ. ಆಟೋ ನುಗ್ಗಿದ ರಭಸಕ್ಕೆ ಓರ್ವ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗೇಟ್​ನಲ್ಲಿ ಮಣ್ಣಮ್ಮ ದೇವರ ಉತ್ಸವ ನಡೆಯುತ್ತಿತ್ತು. ದೇವರ ಉತ್ಸವ ನೋಡುತ್ತಿದ್ದ ಗಂಗಾಧರ್ (40) ದುರ್ಮರಣವನ್ನಪ್ಪಿದ್ದಾರೆ.

ದೊಡ್ಡಮ್ಮ, ನರಸಮ್ಮ, ಕುಮಾರ್ ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಆಟೋ ಡ್ರೈವರ್​ನ​​ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹುಬ್ಬಳ್ಳಿ: ಚೀಟಿ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿ ಸೆರೆ

ಚೀಟಿ ಹೆಸರಲ್ಲಿ ಲಕ್ಷಾಂತರ ರೂಪಾಯಿ ವಂಚಿಸಿದ್ದ ಆರೋಪಿ ಸೆರೆ ಹಿಡಿಯಲಾಗಿದೆ. ಹುಬ್ಬಳ್ಳಿಯ ಗೋಕುಲ್​ರೋಡ್ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಮಂಡ್ಯಕ್ಕೆ ಓಡಿಹೋಗಿದ್ದ ವಂಚಕ ರಮೇಶ್ ನಾಗಾಲೋಟಿ ಸೆರೆ ಹಿಡಿಯಲಾಗಿದೆ. ಚೀಟಿ ಹೆಸರಿನಲ್ಲಿ ಮಹಿಳೆಯರಿಂದ ಹಣ ಸಂಗ್ರಹಿಸಿದ ರಮೇಶ್, ಕೆಲವರಿಂದ ಸಾಲವಾಗಿ ಹಣ ಪಡೆದು ವಂಚಿಸಿ ಪರಾರಿಯಾಗಿದ್ದ. ಹಣ ಕಳೆದುಕೊಂಡ ಮಹಿಳೆಯರು ಠಾಣೆಗೆ ದೂರು ನೀಡಿದ್ದರು. ಇದೀಗ ಗೋಕುಲ್​ರೋಡ್ ಪೊಲೀಸರಿಂದ ರಮೇಶ್ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇತರ ಅಪರಾಧ ಸುದ್ದಿಗಳು

ಮೈಸೂರು: ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ ಆಗಿ ಸ್ಕೂಟರ್ ಸವಾರ ದುರ್ಮರಣವನ್ನಪ್ಪಿದ ಘಟನೆ ಬಂಚಳ್ಳಿಹುಂಡಿಯ ನಂಜುಂಡೇಶ್ವರ ದೇವಸ್ಥಾನದ ಬಳಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಂಚಳ್ಳಿಹುಂಡಿಯಲ್ಲಿ ನಂದಗುಂದ ಗ್ರಾಮದ ಬೈಕ್ ಸವಾರ ಸುರೇಶ್ (40) ಮೃತಪಟ್ಟಿದ್ದಾರೆ.

ಕಲಬುರಗಿ: ಆಳಂದ, ಅಫಜಲಪುರ ತಾಲೂಕಿನ ವಿವಿಧೆಡೆ ಟ್ರಾನ್ಸ್​ಫಾರ್ಮರ್​​ಗಳಲ್ಲಿ ಆಯಿಲ್ ಕದಿಯುತ್ತಿದ್ದ ವಿಜಯ್ ಪವಾರ್, ಚೋಟು ಕಾಳೆ, ಪರಮೇಶ್ವರ ಹೂಗಾರನನ್ನು ನರೋಣಾ ಠಾಣೆ ಪೋಲಿಸರು ಬಂಧಿಸಿದ್ದಾರೆ. 8 ಕ್ಯಾನ್ ಆಯಿಲ್, ಸಾಗಣೆಗೆ ಬಳಸುತ್ತಿದ್ದ ಜೀಪ್ ಜಪ್ತಿ ಮಾಡಲಾಗಿದೆ.

ರಾಯಚೂರು: ಇಲ್ಲಿನ ತಿಮ್ಮಾಪುರಪೇಟೆಯಲ್ಲಿ ಜೆಸ್ಕಾಂ ಜಾಗೃತ ದಳದ ಪಿಎಸ್​ಐ ಲಕ್ಷ್ಮೀ ಮನೆಯಲ್ಲಿ 80 ಗ್ರಾಂ ಚಿನ್ನಾಭರಣ, 15 ಸಾವಿರ ನಗದು ಕಳ್ಳತನ ಮಾಡಲಾಗಿದೆ.

ಬೀದರ್: ಹುಮ್ನಾಬಾದ್​ ತಹಶೀಲ್ದಾರ್​ ಡಾ.ಪ್ರದೀಪ್ ಕುಮಾರ್ ಹಿರೇಮಠ ಮೇಲೆ ಹಲ್ಲೆ ಮಾಡಿದ್ದ ಬಿಎಸ್​ಪಿ ಮುಖಂಡ ಅಂಕುಶ್ ಗೋಖಲೆ, ಜಮೀರ್ ಖಾನ್, ರಾಜಕುಮಾರ ಶಿಂಧೆ, ದೇವೇಂದ್ರ ಗೌತಮ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Crime News: ತ್ರಿಕೋನ ಪ್ರೇಮ ಪ್ರಕರಣದಲ್ಲಿ ಲಾಯ್ಡ್ ಡಿಸೋಜ ಸಾವು; ಘಟನೆಯ ವಿವರ ನೀಡಿದ ಪೊಲೀಸ್ ಆಯುಕ್ತ

ಇದನ್ನೂ ಓದಿ: ಐಟಿ ಅಧಿಕಾರಿಗಳ ಸೋಗಿನಲ್ಲಿ ದರೋಡೆ ಮಾಡಿದ್ದ ಐವರ ಬಂಧನ; ಮತ್ತೊಂದೆಡೆ ವಿಷ ಸೇವಿಸಿ ಕುಟುಂಬದಿಂದ ಆತ್ಮಹತ್ಯೆಗೆ ಯತ್ನ, ಒಬ್ಬರ ಸಾವು

ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು