AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಕಾ ನಿಷೇಧಿಸಬೇಕು ಎಂದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ದೂರು ದಾಖಲು

ಧಾರ್ಮಿಕ‌ ಭಾವನೆ ಹಾನಿ ಮಾಡುವ ಉದ್ದೇಶದಿಂದ‌ ಮಾಜಿ ಸಚಿವ ಸೊಗಡು ಶಿವಣ್ಣ ಬುರ್ಕಾ ನಿಷೇಧದ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬುರ್ಕಾ ನಿಷೇಧಿಸಬೇಕು ಎಂದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ದೂರು ದಾಖಲು
ಸೊಗಡು ಶಿವಣ್ಣ
TV9 Web
| Edited By: |

Updated on: Sep 11, 2021 | 6:28 PM

Share

ತುಮಕೂರು: ದೇಶದಲ್ಲಿ ಬುರ್ಕಾ ಧಾರಣೆಯನ್ನು ನಿಷೇಧಿಸಬೇಕು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಮುಖಂಡ ಬುರ್ಹಾನ್ ಎಂಬುವವರು ದೂರು ನೀಡಿದ್ದು, ಧಾರ್ಮಿಕ‌ ಭಾವನೆ ಹಾನಿ ಮಾಡುವ ಉದ್ದೇಶದಿಂದ‌ ಮಾಜಿ ಸಚಿವ ಸೊಗಡು ಶಿವಣ್ಣ ಬುರ್ಕಾ ನಿಷೇಧದ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ತುಮಕೂರು‌ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡುತ್ತ, ಪಾಕಿಸ್ತಾನದಲ್ಲಿ ಇರುವವರೆಲ್ಲರೂ ತಾಲಿಬಾನಿಗಳು. ನಮ್ಮಲ್ಲೂ ತಾಲಿಬಾನಿಗಳಿದ್ದಾರೆ. ಬುರ್ಕಾ ಸಂಸ್ಕೃತಿಯನ್ನು ಬೆಂಬಲಿಸುವವರು ತಾಲಿಬಾನಿಗಳು ಎಂದು ಅವರು ಹೇಳಿಕೆ ನೀಡಿದ್ದರು. ಅಲ್ಲದೇ ಅಂತವರ ಜತೆಗೆ ಸಂಬಂಧ ಹೊಂದಿದ್ದರೆ ಆ ಸಂಬಂಧವನ್ನು ಕಡಿದುಕೊಳ್ಳಬೇಕು ಎಂದು ಅವರು ಹೇಳಿದ್ದರು.

ಅಲ್ಲದೇ, ಚಾಮರಾಜಪೇಟೆ ಶಾಸಕ ಜಮೀರ್ ಅಜ್ಮದ್ ಖಾನ್ ಅವರನ್ನು ತಾಲಿಬಾನಿಗಳಿಗೆ ಹೋಲಿಸಿದ್ದ ಮಾಜಿ ಸಚಿವ, ಡಿಜೆ ಹಳ್ಳಿ, ಕೆಜೆ ಹಳ್ಳಿ ಘಟನೆಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಶಾಸಕ ಜಮೀರ್ ಅಹ್ಮದ್ ಖಾನ್ ಹೆಸರೂ ಇದೆ. ಅವರೂ ಒಂದು ರೀತಿಯಲ್ಲಿ ತಾಲಿಬಾನಿ ಎಂದು ಹೇಳಿದ್ದರು. ಇದು ವಿವಾದದ ಸ್ವರೂಪ ಪಡೆದುಕೊಂಡಿತ್ತು.

ಇದನ್ನೂ ಓದಿ: 

Taliban: ಅಫ್ಘಾನಿಸ್ತಾನದಲ್ಲಿ ಬುರ್ಕಾ ಬೆಲೆ ಏರಿಕೆ; 500 ರಿಂದ 2,500 ಅಫ್ಘನೀಸ್​ಗೆ ಹೆಚ್ಚಳ

ಮಹಿಳಾ ಹಕ್ಕುಗಳನ್ನು ಗೌರವಿಸುತ್ತೇವೆ ಎಂದು ಹೇಳುತ್ತಲೇ, ಬುರ್ಕಾ ಧರಿಸದ ಮಹಿಳೆಯ ಹತ್ಯೆ ಮಾಡಿದ ತಾಲಿಬಾನಿಗಳು

(Ban Burqa in India said by Former Minister Sogadu Shivanna case registered in Tumkur)

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು