AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railway: ಎಕ್ಸಪ್ರೆಸ್​ ರೈಲು ತುಮಕೂರಿನ ಸಂಪಿಗೆ ರಸ್ತೆ ಮತ್ತು ತಿಪಟೂರಿನಲ್ಲೂ ನಿಲುಗಡೆ

ನೈಋತ್ಯ ರೈಲ್ವೆ ಇತ್ತೀಚೆಗೆ ಪ್ರಮುಖ ಬೆಳವಣಿಗೆಯನ್ನು ಘೋಷಿಸಿದೆ. ಯಶವಂತಪುರ-ಚಿಕ್ಕಮಗಳೂರು ಎಕ್ಸ್‌ಪ್ರೆಸ್ ರೈಲು ಇಂದಿನಿಂದ ಸಂಪಿಗೆ ರಸ್ತೆಯಲ್ಲಿ ನಿಲ್ಲಲಿದೆ. ಹಾಗೆಯೇ, ಕೆಎಸ್‌ಆರ್ ಬೆಂಗಳೂರು-ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು-ಶಿವಮೊಗ್ಗ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲುಗಳು ತಿಪಟೂರಿನಲ್ಲಿ ನಿಲ್ಲಲಿವೆ.

Indian Railway: ಎಕ್ಸಪ್ರೆಸ್​ ರೈಲು ತುಮಕೂರಿನ ಸಂಪಿಗೆ ರಸ್ತೆ ಮತ್ತು ತಿಪಟೂರಿನಲ್ಲೂ ನಿಲುಗಡೆ
ಸಂಪಿಕೆ ರಸ್ತೆ ರೈಲು ನಿಲ್ದಾಣ
Follow us
ವಿವೇಕ ಬಿರಾದಾರ
|

Updated on:Nov 15, 2024 | 8:02 AM

ಬೆಂಗಳೂರು, ನವೆಂಬರ್​ 15: ಎಕ್ಸ್​​ಪ್ರೆಸ್​​ ರೈಲುಗಳು (Express Trains) ಇನ್ಮುಂದೆ ತುಮಕೂರಿನ (Tumakur) ಸಂಪಿಗೆ ರಸ್ತೆ (Sampige Road) ಮತ್ತು ತಿಪಟೂರಿನಲ್ಲೂ (Tipatur) ನಿಲುಗಡೆಯಾಗಲಿವೆ. ಈ ಕುರಿತು ನೈಋತ್ಯ ರೈಲ್ವೆ ಸಾಮಾಜಿ ಮಾಧ್ಯಮ ಎಕ್ಸ್​ ಮೂಲಕ ಮಾಹಿತಿ ನೀಡಿದೆ. ಯಶವಂತಪುರ ಮತ್ತು ಚಿಕ್ಕಮಗಳೂರು ನಡುವೆ ಸಂಚರಿಸುವ ಎಕ್ಸೆಸ್ ರೈಲು ಸಂಪಿಗೆ ರಸ್ತೆ ನಿಲ್ದಾಣದಲ್ಲಿ ಇಂದಿನಿಂದ (ನ.15) ನಿಲುಗಡೆಯಾಗಲಿದೆ.

ಕೆಎಸ್‌ಆರ್ ಬೆಂಗಳೂರು ಮತ್ತು ಎಸ್‌ಎಸ್‌ಎಸ್‌ ಹುಬ್ಬಳ್ಳಿ ಮತ್ತು ಕೆಎಸ್‌ಆರ್ ಬೆಂಗಳೂರು ಮತ್ತು ಶಿವಮೊಗ್ಗ ಟೌನ್ ನಡುವೆ ಚಲಿಸುವ ಜನಶತಾಬಿ ಎಣ್ಣೆಸ್ ರೈಲುಗಳು ತಿಪಟೂರು ನಿಲ್ದಾಣದಲ್ಲಿ ನಿಲುಗಡೆಯಾಗಲಿವೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಹುಬ್ಬಳ್ಳಿ-ಬೆಂಗಳೂರು ರೈಲು ಸಮಯ ಬದಲಾವಣೆ

ರೈಲು ನಿಲುಗಡೆಯ ಸಮಯ

  1. ರೈಲು ಸಂಖ್ಯೆ 16240 ಯಶವಂತಪುರ-ಚಿಕ್ಕಮಗಳೂರು ಎಕ್ಸ್​ಪ್ರೆಸ್​​ ರೈಲು ಸಂಜೆ 05:04ಕ್ಕೆ ಸಂಪಿಗೆ ರಸ್ತೆ ನಿಲ್ದಾಣವನ್ನು ತಲುಪಿ ಮತ್ತೆ 05:05ಕ್ಕೆ ಹೊರಡಲಿದೆ.
  2. ರೈಲು ಸಂಖ್ಯೆ 16239 ಚಿಕ್ಕಮಗಳೂರು-ಯಶವಂತಪುರ ಎಕ್ಸ್​ಪ್ರೆಸ್​ ರೈಲು ಬೆಳಗ್ಗೆ 11:13ಕ್ಕೆ ಸಂಪಿಗೆ ರಸ್ತೆ ನಿಲ್ದಾಣವನ್ನು ತಲುಪಿ ನಂತರ 11:14ಕ್ಕೆ ಹೊರಡಲಿದೆ.
  3. ರೈಲು ಸಂಖ್ಯೆ 12079 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್ಎಸ್ ಹುಬ್ಬಳ್ಳಿ ಜನಶತಾಬಿ ಎಕ್ಸ್​ಪ್ರೆಸ್​ ರೈಲು ಬೆಳಗ್ಗೆ 07:49 ತಿಪಟೂರು ನಿಲ್ದಾಣವನ್ನು ತಲುಪಿ ನಂತರ 07:50ಕ್ಕೆ ಹೊರಡಲಿದೆ.
  4. ರೈಲು ಸಂಖ್ಯೆ 12080 ಎಸ್‌ಎಸ್‌ಎಸ್‌ ಹುಬ್ಬಳ್ಳಿ – ಕೆಎಸ್‌ಆರ್ ಬೆಂಗಳೂರು ಜನಶತಾಬಿ ಎಕ್ಸ್​ಪ್ರೆಸ್​ ರೈಲು ಸಂಜೆ 06:34ಕ್ಕೆ ತಿಪಟೂರು ನಿಲ್ದಾಣವನ್ನು ತಲುಪಿ ನಂತರ 06:35ಕ್ಕೆ ಹೊರಡಲಿದೆ.
  5. ರೈಲು ಸಂಖ್ಯೆ 12089 ಕೆಎಸ್‌ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಜನಶತಾಬಿ ಎಕ್ಸ್​ಪ್ರೆಸ್​ ರೈಲು ರಾತ್ರಿ 07:09ಕ್ಕೆ ತಿಪಟೂರು ನಿಲ್ದಾಣವನ್ನು ತಲುಪಿ ನಂತರ 07:10ಕ್ಕೆ ಹೊರಡಲಿದೆ.
  6. ರೈಲು ಸಂಖ್ಯೆ 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಜನಶತಾಬಿ ಎಕ್ಸ್​ಪ್ರೆಸ್​ ರೈಲು ಬೆಳಗ್ಗೆ 07:14ಕ್ಕೆ ತಿಪಟೂರು ನಿಲ್ದಾಣವನ್ನು ತಲುಪಿ ನಂತರ 07:15ಕ್ಕೆ ಹೊರಡಲಿದೆ.

ಟ್ವಿಟರ್​ ಪೋಸ್ಟ್​

ಈ ಹೆಚ್ಚುವರಿ ನಿಲುಗಡೆಯು ಸಂಪಿಗೆ ರಸ್ತೆ ಮತ್ತು ತಿಪಟೂರಿನಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಮತ್ತು ಪ್ರವೇಶವನ್ನು ಒದಗಿಸುತ್ತದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:58 am, Fri, 15 November 24

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ