Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ ಮುಸ್ಲಿಂ ಸಮುದಾಯದ ವ್ಯಕ್ತಿ, ವಿಡಿಯೋ ವೈರಲ್

ಹಿಂದೂ, ಮುಸ್ಲಿಂ, ಸಿಖ್ಖರು ಎಲ್ಲಾ ಸೇರಿಕೊಂಡು ಇದ್ದೀವಿ. ನೀವು ಬಂದ ಮೇಲೆ ನಮ್ಮ ದೇಶ ನಾಶವಾಗುತ್ತಿದೆ. ಟಿಪ್ಪು ಅಂದರೇ ಹುಲಿ. ಒಳ್ಳೆ ಕೆಲಸ ಮಾಡೋರಿಗೆ ಬಿಡಿ ಅಂತ ವ್ಯಕ್ತಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ

ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ ಮುಸ್ಲಿಂ ಸಮುದಾಯದ ವ್ಯಕ್ತಿ, ವಿಡಿಯೋ ವೈರಲ್
ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ ಮುಸ್ಲಿಂ ಸಮುದಾಯದ ವ್ಯಕ್ತಿ
Follow us
TV9 Web
| Updated By: sandhya thejappa

Updated on:Oct 25, 2021 | 10:40 AM

ತುಮಕೂರು: ಭಜರಂಗದಳ (Bajrang Dal) ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಶುಕ್ರವಾರ ತುಮಕೂರು ಬಂದ್ ಆಗಿತ್ತು. ಬಂದ್ಗೆ ಮುಸ್ಲಿಂ ಸಮುದಾಯದ ವ್ಯಕ್ತಿ ಅಸಮಾಧಾನ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಬೆಂಗಳೂರು ಮೂಲದ ವ್ಯಕ್ತಿ ಏಜಾಸ್ ರಾವಲ್ ಎಂಬುವವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಪ್ರತಿಭಟನೆ ಮಾಡೋದು ಬಿಟ್ಟು ನಿಮಗೆ ಕೆಲಸವಿಲ್ಲವಾ. ಯಾಕ್ರೋ ಹಿಂದು ಮುಸ್ಲಿಂ ಅಂತಾ ಓಡಾಡುತ್ತಿದ್ದೀರಾ. ಯಾಕೆ ವಾತಾವರಣ ಹಾಳು ಮಾಡುತ್ತೀರಾ ಅಂತ ವೈರಲ್ ಆದ ವಿಡಿಯೋದಲ್ಲಿ ಕೇಳಿದ್ದಾರೆ.

ನಮ್ಮ ಭಾರತ ದೇಶದಲ್ಲಿ ಹಿಂದೂ, ಮುಸ್ಲಿಂ, ಸಿಖ್ಖರು ಎಲ್ಲಾ ಸೇರಿಕೊಂಡು ಇದ್ದೀವಿ. ನೀವು ಬಂದ ಮೇಲೆ ನಮ್ಮ ದೇಶ ನಾಶವಾಗುತ್ತಿದೆ. ಟಿಪ್ಪು ಅಂದರೇ ಹುಲಿ. ಒಳ್ಳೆ ಕೆಲಸ ಮಾಡೋರಿಗೆ ಬಿಡಿ ಅಂತ ವ್ಯಕ್ತಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಯಾಕೆ ನಮ್ಮನ್ನ ನೀವು ಟಾರ್ಗೆಟ್ ಮಾಡುತ್ತಿದ್ದೀರಾ? ನೀವು ಲವ್ ಜಿಹಾದ್ ಮಾಡುತ್ತೀರಾ. ನಮ್ಮ ಮುಸ್ಲಿಂ ಹುಡುಗಿಯರ ಬಗ್ಗೆ ಆಗಲಿ, ನಮ್ಮ ಬಗ್ಗೆ ಆಗಲಿ ಅಪ್ಪಿತಪ್ಪಿ ಮಾತನಾಡಿದರೆ ಹುಷಾರ್. ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಅಂತ ಭಜರಂಗದಳ, ಹಿಂದೂಪರ ಸಂಘಟನೆಗಳ ವಿರುದ್ಧ ಮುಸ್ಲಿಂ ಸಮುದಾಯದ ವ್ಯಕ್ತಿ ವೈರಲ್ ಆಗಿರುವ ವಿಡಿಯೋದಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ

ಭಜರಂಗದಳ ಜಿಲ್ಲಾ ಸಂಚಾಲಕನ ಮೇಲೆ ಹಲ್ಲೆ: ಹಿಂದೂಪರ ಸಂಘಟನೆಗಳಿಂದ ಅ.22 ರಂದು ತುಮಕೂರು ಬಂದ್​ಗೆ ಕರೆ

ಸ್ಮಾರ್ಟ್ ಸಿಟಿ ಯೋಜನೆ ಹುಬ್ಬಳ್ಳಿಗಷ್ಟೇ ಸೀಮಿತ ಆರೋಪ; ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ನಿರ್ಮಿಸಲು ಆಗ್ರಹ

Published On - 10:28 am, Mon, 25 October 21

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ