AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು

ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾಗಿತ್ತು. ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರಾಗಿದ್ದಾರೆ. ಸದ್ಯ, ಈ ಪ್ರಕರಣ ತಿರುವು ಪಡೆದುಕೊಂಡಿದ್ದು, ಚಿನ್ನದ ಆಸೆಗೆ ಬಿದ್ದು ತುಮಕೂರಿಗೆ ಹೋಗಿ ಮೂವರು ಕೊಲೆಯಾಗಿದ್ದಾರೆ ಎಂಬ ವಿಚಾರ ತಿಳಿದುಬಂದಿದೆ.

ಕಾರಿನಲ್ಲಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಚಿನ್ನದ ಆಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಮೂವರು
ಚಿನ್ನದ ಆಸೆಗೆ ಬಿದ್ದು ದಕ್ಷಿಣ ಕನ್ನಡದ ಬೆಳ್ತಂಗಡಿಯಿಂದ ತುಮಕೂರಿಗೆ ಹೋಗಿ ಕೊಲೆಯಾದ ಇಮ್ತಿಯಾಸ್, ಇಸಾಕ್ ಹಾಗೂ ಸಾಹುಲ್
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: Rakesh Nayak Manchi|

Updated on: Mar 23, 2024 | 3:23 PM

Share

ತುಮಕೂರು, ಮಾ.23: ತಾಲೂಕಿನ (Tumkur) ಕುಚ್ಚಂಗಿ ಕೆರೆಯ ಬಳಿ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ (Dead Body Found) ಪ್ರಕರಣವು ಇದೀಗ ತಿರುವು ಪಡೆದುಕೊಂಡಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ ಮೂಲದ ಮೂವರು ಚಿನ್ನದ ಆಸೆಗೆ ಬಿದ್ದು ತುಮಕೂರಿಗೆ ಹೋಗಿ ದರೋಡೆಕೋರರಿಂದ ಕೊಲೆಯಾದರು ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ಇಸಾಕ್ (56), ಸಾಹುಲ್ (45) ಮತ್ತು ಇಮ್ತಿಯಾಜ್ (34) ಹತ್ಯೆಯಾದವರಾಗಿದ್ದಾರೆ. ರಿಯಲ್ ಎಸ್ಟೇಟ್ ಕೆಲಸ ಮಾಡುತ್ತಿದ್ದ ಇಸಾಕ್​ಗೆ ದರೋಡೆಕೋರರು ತಮ್ಮ ಜಮೀನಿನಲ್ಲಿ ಕೃಷಿ ಮಾಡುವಾಗ ಚಿನ್ನದಹಂಡೆ ಸಿಕ್ಕಿದೆ ಅಂತ ನಕಲಿ ಚಿನ್ನವನ್ನು ತೋರಿಸಿ ಅದನ್ನು ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ನಂಬಿಸಿ ತಮಕೂರಿಗೆ ಕರೆಸಿಕೊಂಡಿದ್ದರು.

ದರೋಡೆಕೋರರ ಮಾತನ್ನು ನಂಬಿದ ಇಸಾಕ್, ಡೀಲ್ ಇದೆ ಬಾ ಅಂತಾ ತನ್ನ ಇಬ್ಬರು ಸ್ನೇಹಿತರಾದ ಸಾಹುಲ್ ಮತ್ತು ಇಮ್ತಿಯಾಜ್ ಅವರನ್ನು ಕರೆದಿದ್ದಾನೆ. ತುಮಕೂರು ಮೂಲದ ಸ್ವಾಮಿ ಎಂಬಾತನ ಪರಿಚಯದ ಮೂಲಕ ತುಮಕೂರಿಗೆ ಕಾರು ಮೂಲಕ ಹೋಗಿದ್ದರು. ಗುರುವಾರ ಸಂಜೆವರೆಗೂ ಕುಟುಂಬಸ್ಥರ ಜೊತೆ ಸಂಪರ್ಕದಲ್ಲಿದ್ದ ಇಸಾಕ್​ನ ಮೊಬೈಲ್ ಗುರುವಾರ ರಾತ್ರಿ ಸ್ವಿಚ್‌ ಆಫ್ ಆಗಿತ್ತು.

ಇದನ್ನೂ ಓದಿ: ತುಮಕೂರು: ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವಗಳ ಪತ್ತೆ ಪ್ರಕರಣ; ಮೂವರ ಗುರುತು ಪತ್ತೆ

ಇನ್ನೊಂದೆಡೆ, ಮೂವರ ಶವ ಕಾರಿನಲ್ಲಿ ಪತ್ತೆಯಾಗಿರುವ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಘಟನಾ ಸ್ಥಳದಲ್ಲಿದ್ದ ಕಾರಿನ ನಂಬರ್ ಆಧರಿಸಿ ಕಾರು ಮಾಲೀಕ ರಫೀಕ್ ಸಂಪರ್ಕ ಮಾಡಿದಾಗ ಇಸಾಕ್​ ಎಂಬಾತನಿಗೆ 15 ದಿನಗಳ ಹಿಂದೆ ಕಾರು ಕೊಟ್ಟಿದ್ದಾಗಿ ಹೇಳಿಕೊಂಡಿದ್ದಾರೆ. ಇದರಿಂದಾಗಿ ಮೃತರ ಗುರುತು ಪತ್ತೆಕಾರ್ಯ ಪೊಲೀಸರಿಗೆ ಸುಲಭವಾಯಿತು.

ಹಣ ದೋಚಲು ಮೂವರನ್ನು ಕೊಂದ ದರೋಡೆಕೋರರು

ಚಿನ್ನ ಖರೀದಿಗೆ ತಂದಿದ್ದ ಹಣ ದೋಚಲು ಮೂವರನ್ನು ಹತ್ಯೆ ಮಾಡಲಾಗಿದೆ. ನಕಲಿ ಚಿನ್ನ ತೋರಿಸಿ ಹಣ ದೋಚಲು ಮೂವರ ಮೇಲೆ ಹಲ್ಲೆಗೈದು ಕೈ, ಕಾಲು, ಕಟ್ಟಿಹಾಕಿ ಬೆಂಕಿ ಹಚ್ಚಿದ್ದರು. ಮೂವರ ಪೈಕಿ ಇಬ್ಬರ ಶವವನ್ನು ಕಾರಿನ ಡಿಕ್ಕಿಗೆ ಹಾಕಿದ್ದು, ಮತ್ತೊಬ್ಬನ ಶವವನ್ನು ಕಾರಿನ ಮಧ್ಯಭಾಗದಲ್ಲಿ ಇರಿಸಲಾಗಿತ್ತು. ಕೊಲೆ ವಿಚಾರ ತಿಳಿಯಬಾರದೆಂದು ಆರೋಪಿಗಳು ಕಾರಿಗೆ ಬೆಂಕಿ ಹಚ್ಚಿದ್ದರು. ಗುರುತು ಪತ್ತೆ ಹಚ್ಚಲು ಆಗದ ಸ್ಥಿತಿಯಲ್ಲಿ ಮೂವರ ದೇಹಗಳು ಸುಟ್ಟು ಹೋಗಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!