AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 50ಕ್ಕೂ ಹೆಚ್ಚು ನವಿಲುಗಳ ಸಾವು!

ತುಮಕೂರಿನಲ್ಲಿ ನವಿಲುಗಳ ಸಾವು 54ಕ್ಕೆ ಏರಿಕೆಯಾಗಿದ್ದು, ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಹಿಂದೆ ಕೋಳಿಗಳು ಮತ್ತು ನವಿಲುಗಳ ಸರಣಿ ಸಾವು ಸಂಭವಿಸಿತ್ತು. ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವೆಂಬುದು ದೃಢಪಟ್ಟಿತ್ತು. ಆದರೆ ಬೊಮ್ಮನಹಳ್ಳಿಯ ಕೋಳಿಗಳ ವೈದ್ಯಕೀಯ ವರದಿ ನೆಗೆಟಿವ್ ಬಂದಿರುವುದು ಸಮಾಧಾನದ ಸಂಗತಿಯಾಗಿದ್ದರೂ, ಕುಣಿಗಲ್​ನಲ್ಲಿ ಮತ್ತೊಮ್ಮೆ ನವಿಲಿನ ಕಳೆಬರ ಪತ್ತೆಯಾದ ಕಾರಣ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದಾರೆ.

ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 50ಕ್ಕೂ ಹೆಚ್ಚು ನವಿಲುಗಳ ಸಾವು!
50ಕ್ಕೂ ಹೆಚ್ಚು ನವಿಲುಗಳ ಸಾವು!
Jagadisha B
| Edited By: |

Updated on:May 08, 2026 | 12:12 PM

Share

ತುಮಕೂರು, ಮೇ 08: ಜಿಲ್ಲೆಯಲ್ಲಿ ಹಕ್ಕಿ ಜ್ವರದ (Bird Flu) ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ 44 ನವಿಲುಗಳು ಮತ್ತು 30 ಕೋಳಿಗಳು ಸಾವನ್ನಪ್ಪಿದ್ದವು. ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣವೆಂದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿತ್ತು. ಕೋಳಿಗಳ ಸಾವಿಗೆ ಸಂಬಂಧಿಸಿದಂತೆ ಸ್ಯಾಂಪಲ್​ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಈಗ ಮತ್ತಷ್ಟು ನವಿಲುಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ.

ಮುಖ್ಯಾಂಶಗಳು

  • ತುಮಕೂರು ಜಿಲ್ಲೆಯಲ್ಲಿ ಕಳೆದ 30 ದಿನಗಳಲ್ಲಿ 54ಕ್ಕೂ ಅಧಿಕ ನವಿಲುಗಳ ಸಾವು
  • ಹಕ್ಕಿ ಜ್ವರದ ಭೀತಿಯಿಂದ ಪಶುಸಂಗೋಪನಾ ಇಲಾಖೆ ಹೈ ಅಲರ್ಟ್
  • ಬೊಮ್ಮನಹಳ್ಳಿ ಕೋಳಿ ಫಾರಂನಲ್ಲಿ ಮೃತಪಟ್ಟಿದ್ದ ಕೋಳಿಗಳ ವರದಿ ನೆಗೆಟಿವ್

ತುಮಕೂರು ತಾಲೂಕಿನಾದ್ಯಂತ ಕಳೆದ ಒಂದು ತಿಂಗಳಿನಿಂದ ನವಿಲುಗಳು ನಿಗೂಢವಾಗಿ ಸಾವನ್ನಪ್ಪುತ್ತಿವೆ. ಕಳೆದ 30 ದಿನಗಳಲ್ಲಿ ಸಾವನ್ನಪ್ಪಿದ ನವಿಲುಗಳ ಸಂಖ್ಯೆ ಈಗ 54ರ ಗಡಿ ದಾಟಿದೆ. ಈ ಹಿಂದೆ 44 ನವಿಲುಗಳು ಸಾವನ್ನಪ್ಪಿದ್ದ ವರದಿಯಾಗಿತ್ತು, ಇದೀಗ ಆ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ತುಮಕೂರು ತಾಲೂಕು ಮಾತ್ರವಲ್ಲದೆ, ಇದೀಗ ಕುಣಿಗಲ್‌ನಲ್ಲಿಯೂ ನವಿಲಿನ ಕಳೆಬರ ಪತ್ತೆಯಾಗಿದ್ದು, ಹಕ್ಕಿ ಜ್ವರ ಜಿಲ್ಲೆಯ ಇತರೆ ಭಾಗಗಳಿಗೂ ವ್ಯಾಪಿಸುತ್ತಿರುವ ಮುನ್ಸೂಚನೆ ನೀಡಿದೆ. ಕುಣಿಗಲ್‌ನಲ್ಲಿ ಮತ್ತೆ ನವಿಲುಗಳು ಸಾವನ್ನಪ್ಪಿದರೆ ಕೂಡಲೇ ಸ್ಯಾಂಪಲ್‌ಗಳನ್ನು ವರದಿಗೆ ರವಾನಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಪಶುಸಂಗೋಪನಾ ಇಲಾಖೆ ಮುನ್ನೆಚ್ಚರಿಕೆ

ನವಿಲುಗಳ ನಿರಂತರ ಸಾವಿನ ಬೆನ್ನಲ್ಲೇ ಪಶುಸಂಗೋಪನಾ ಇಲಾಖೆ ಅಲರ್ಟ್ ಘೋಷಿಸಿದೆ. ಜಿಲ್ಲೆಯಾದ್ಯಂತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಹಕ್ಕಿಗಳ ಚಲನವಲನದ ಮೇಲೆ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಕಾಡುಪ್ರಾಣಿಗಳು ಹಾಗೂ ಹಕ್ಕಿಗಳ ಸಾವಿನ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ವರದಿ ಮಾಡಲು ತಿಳಿಸಲಾಗಿದೆ.

ಇದನ್ನೂ ಓದಿ ತುಮಕೂರಿನಲ್ಲಿ ಹಕ್ಕಿ ಜ್ವರದ ಆತಂಕ: ನವಿಲುಗಳ ಸಾವಿಗೆ ‘H5N1’ ಸೋಂಕು ಕಾರಣ!

ಕೋಳಿಗಳ ಸಾವಿಗೆ ಹಕ್ಕಿ ಜ್ವರ ಕಾರಣವಲ್ಲ

ಇನ್ನೊಂದೆಡೆ, ತುಮಕೂರು ತಾಲೂಕಿನ ಬೊಮ್ಮನಹಳ್ಳಿಯ ಕೋಳಿ ಫಾರಂನಲ್ಲಿ ಏಕಕಾಲಕ್ಕೆ ಸುಮಾರು 30ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿದ್ದವು. ಹಕ್ಕಿ ಜ್ವರದ ಭೀತಿಯ ನಡುವೆ ಈ ಘಟನೆ ಗ್ರಾಮಸ್ಥರನ್ನು ಕಂಗಾಲಾಗಿಸಿತ್ತು. ತಕ್ಷಣವೇ ಮೃತ ಕೋಳಿಗಳ ಸ್ಯಾಂಪಲ್‌ಗಳನ್ನು ವೈದ್ಯಕೀಯ ಪರೀಕ್ಷೆಗೆ ರವಾನಿಸಲಾಗಿತ್ತು. ಇದೀಗ ವರದಿ ಬಂದಿದ್ದು, ಕೋಳಿಗಳಲ್ಲಿ ಹಕ್ಕಿ ಜ್ವರ ಪತ್ತೆಯಾಗಿಲ್ಲ (Negative) ಎಂದು ದೃಢಪಟ್ಟಿದೆ. ಇದರಿಂದ ಕೋಳಿ ಫಾರಂ ಮಾಲೀಕರು ಹಾಗೂ ಸ್ಥಳೀಯರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರಾದರೂ, ನವಿಲುಗಳ ಸಾವು ಇನ್ನೂ ನಿಗೂಢವಾಗಿಯೇ ಇರುವುದು ಚಿಂತೆಯನ್ನು ಹೆಚ್ಚಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:00 am, Fri, 8 May 26

Follow Us
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ