AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಏಪ್ರಿಲ್ 14ರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಮುಖಂಡರಿಂದ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ

ಏಪ್ರಿಲ್ 14 ರ ಅಂಬೇಡ್ಕರ್ ಜಯಂತಿ ಪ್ರಯುಕ್ತ ತುಮಕೂರು ಜಿಲ್ಲೆಯಲ್ಲಿ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಆರಂಭವಾಗಿದೆ. ತುಮಕೂರು ನಗರ ಜೈಪುರದ ದಲಿತ ಮುಖಂಡ ನವೀನ್ ಎನ್ನುವವರ ಮನೆಯಲ್ಲಿ ಬಿಜೆಪಿ ಮುಖಂಡರು ಸಹಪಂಕ್ತಿ ಭೋಜನ ಮಾಡಿದ್ದಾರೆ.

ತುಮಕೂರು: ಏಪ್ರಿಲ್ 14ರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಮುಖಂಡರಿಂದ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ
ಬಿಜೆಪಿ ಮುಖಂಡರು
TV9 Web
| Edited By: |

Updated on:Mar 27, 2022 | 7:04 PM

Share

ತುಮಕೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಹೋಟೆಲಿನಿಂದ ತಿಂಡಿ ತರಿಸಿ ದಲಿತರ ಮನೆಯಲ್ಲಿ ಭೋಜನ ಮಾಡಿದ್ವಿ ಎಂದು ಈ ಹಿಂದೆ ಎಡವಟ್ಟು ಮಾಡಿಕೊಂಡ ಬಿಜೆಪಿ (BJP) ಈಗ ಮತ್ತೇ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಶುರುಮಾಡಿದೆ. ಆದರೆ ಈ ಬಾರಿ ಎಚ್ಚರಿಕೆಯ ಹೆಜ್ಜೆ ಇಟ್ಟ ಬಿಜೆಪಿ ದಲಿತರ ಮನೆಯಲ್ಲೇ ಅಡುಗೆ ತಯಾರಿಸಿ ಸಹಪಂಕ್ತಿ ಭೋಜನ(Dinner) ಮಾಡುತ್ತಿದೆ. ಏಪ್ರಿಲ್ 14 ರ ಅಂಬೇಡ್ಕರ್ ಜಯಂತಿ (Ambedkar jayanti) ಪ್ರಯುಕ್ತ ತುಮಕೂರು ಜಿಲ್ಲೆಯಲ್ಲಿ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಆರಂಭವಾಗಿದೆ. ತುಮಕೂರು ನಗರ ಜೈಪುರದ ದಲಿತ ಮುಖಂಡ ನವೀನ್ ಎನ್ನುವವರ ಮನೆಯಲ್ಲಿ ಬಿಜೆಪಿ ಮುಖಂಡರು ಸಹಪಂಕ್ತಿ ಭೋಜನ ಮಾಡಿದ್ದಾರೆ.

ನಗರ ಶಾಸಕ ಜ್ಯೋತಿಗಣೇಶ್, ಜಿಲ್ಲಾಧ್ಯಕ್ಷ ಲಕ್ಷ್ಮಿಶ್, ಮುಖಂಡರಾದ ಓಂಕಾರ್‌ ಸೇರಿ ಹಲವು ಪ್ರಮುಖರು ನವೀನ್ ಅವರ ಕುಟುಂಬದ ಜೊತೆ ಕುಳಿತು ಊಟ ಮಾಡಿದ್ದಾರೆ. ಅನ್ನ, ಸಾಂಬಾರ್, ಒಬ್ಬಟ್ಟನ್ನು ಸವಿದಿದ್ದಾರೆ. ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.

ಟಿಪ್ಪು ಬಗ್ಗೆ ನಾವು ಓದಿದ್ದು, ತಿಳಿದುಕೊಂಡಿದ್ದು ಅಸತ್ಯ, ಸುಳ್ಳು: ಪ್ರಮೋದ್ ಮುತಾಲಿಕ್

ಟಿಪ್ಪು ಬಗ್ಗೆ ನಾವು ಓದಿದ್ದು, ತಿಳಿದುಕೊಂಡಿದ್ದು ಅಸತ್ಯ, ಸುಳ್ಳು. ಟಿಪ್ಪು ಒಬ್ಬ ಮತಾಂಧ, ಕ್ರೂರಿ, ದೇಶದ್ರೋಹಿ, ಕನ್ನಡ ದ್ರೋಹಿ. ಲಕ್ಷಾಂತರ ಹಿಂದೂಗಳನ್ನು ಮತಾಂತರ ಮಾಡಿದ ವ್ಯಕ್ತಿ ಟಿಪ್ಪು. ಕೊಡಗು, ಕೇರಳಕ್ಕೆ ಹೋದರೆ ಅಲ್ಲಿರುವ ಬ್ಯಾರಿಗಳು ಸಿಗ್ತಾರೆ. ಅವರೆಲ್ಲರೂ ಹಿಂದೆ ಹಿಂದೂಗಳು, ಆದರೆ ಮತಾಂತರ ಆದವರು. ಈ ಹಿಂದೆ ಮಾಡಿದಂತಹ ತಪ್ಪನ್ನು ಮತ್ತೆ ಮಾಡುವುದು ಬೇಡ. ಪಠ್ಯದಿಂದ ಟಿಪ್ಪು ಸುಲ್ತಾನ್ ಪಾಠವನ್ನು ಸಂಪೂರ್ಣ ರದ್ದುಗೊಳಿಸಿ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ನಾಳೆ ಪರೀಕ್ಷೆಗೆ ಹಿಜಾಬ್ ನಿರ್ಬಂಧ ಆದೇಶ ವಿಚಾರ

ಪರೀಕ್ಷೆ ಬರೆಯುವಂತೆ ಧರ್ಮ ಗುರುಗಳು ಮನವಿ ಮಾಡಲಿ. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಮೌಲ್ವಿಗಳು ಮನವಿ ಮಾಡಲಿ. ಒಂದು ಕಾರಣಕ್ಕೆ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ. ವಿದ್ಯೆಗೆ ಕಲ್ಲು ಹಾಕಬೇಡಿ, ಎಸ್​ಎಸ್​ಎಲ್​ಸಿ ಅಂದ್ರೆ ಪ್ರಮುಖ ಘಟ್ಟ. ಕೋರ್ಟ್‌ ಆದೇಶದಂತೆ ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಿರಿ. ಸುಪ್ರೀಂಕೋರ್ಟ್‌ ಆದೇಶ ಬಂದ ಬಳಿಕ ಅದನ್ನ ಪಾಲಿಸೋಣ ಎಂದು ಮುತಾಲಿಕ್‌ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹುಚ್ಚು ನಾಯಿಯಂತೆ ಕೂಗುತ್ತಿದೆ, ಸಿದ್ದರಾಮಯ್ಯ ತಕ್ಷಣ ರಾಜಕೀಯ ನಿವೃತ್ತಿ ಪಡೆಯಲಿ; ಸಚಿವ ಈಶ್ವರಪ್ಪ ಹೇಳಿಕೆ

Crime News: ದಲಿತ ಮಹಿಳೆಗೆ ಬ್ಲಾಕ್​ಮೇಲ್ ಮಾಡಿ, ಶಾಲಾ ವಿದ್ಯಾರ್ಥಿಗಳು ಸೇರಿ 8 ಜನರಿಂದ ನಿರಂತರ ಅತ್ಯಾಚಾರ!

Published On - 6:35 pm, Sun, 27 March 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ