AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಮತ್ತು ತುಮಕೂರು ಎರಡು ಕಡೆನೂ ಮೆಟ್ರೋ ಆಗಬೇಕು: ಜಿ.ಪರಮೇಶ್ವರ, ಗೃಹ ಸಚಿವ

ಬೆಂಗಳೂರಿನ ನಮ್ಮ ಮೆಟ್ರೋವನ್ನು ತನ್ನ ತವರು ಜಿಲ್ಲೆಯ ಬಿಡದಿವರೆಗೂ ವಿಸ್ತರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ತನ್ನ ತವರು ಜಿಲ್ಲೆ ತಮಕೂರಿಗೂ ಮೆಟ್ರೋ ವಿಸ್ತರಣೆ ಆಗಬೇಕು ಎನ್ನುವ ಹೇಳಿಕೆ ನೀಡಿದ್ದಾರೆ.

ಬಿಡದಿ ಮತ್ತು ತುಮಕೂರು ಎರಡು ಕಡೆನೂ ಮೆಟ್ರೋ ಆಗಬೇಕು: ಜಿ.ಪರಮೇಶ್ವರ, ಗೃಹ ಸಚಿವ
ಗೃಹ ಸಚಿವ ಡಾ.ಜಿ.ಪರಮೇಶ್ವರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Nov 11, 2023 | 6:05 PM

Share

ತುಮಕೂರು, ನ.11: ಬಿಡದಿ ಹಾಗೂ ತುಮಕೂರು ಎರಡು ಕಡೆಯೂ ಮೆಟ್ರೋ (Metro) ಆಗಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ (Dr.G.Parameshwara) ಹೇಳಿದ್ದಾರೆ. ಬೆಂಗಳೂರಿನ ನಮ್ಮ ಮೆಟ್ರೋವನ್ನು ತನ್ನ ತವರು ಜಿಲ್ಲೆಯ ಬಿಡದಿವರೆಗೂ ವಿಸ್ತರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ತನ್ನ ತವರು ಜಿಲ್ಲೆ ತಮಕೂರಿಗೂ ಮೆಟ್ರೋ ವಿಸ್ತರಣೆ ಆಗಬೇಕು ಎನ್ನುವ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಚಟಾಪಟಿ ಇಲ್ಲ. ಫಸ್ಟ್​, ಸೆಕೆಂಡ್ ಪ್ರಶ್ನೆ ಇಲ್ಲ. ಬಿಡದಿವರೆಗೂ ಮೆಟ್ರೋ ವಿಸ್ತರಣೆ ಮಾಡಿದರೆ ಬೆಂಗಳೂರು ಬೆಳೆಯುತ್ತದೆ. ಅದೇ ರೀತಿ ತುಮಕೂರು ಬೆಳೆದರೂ ಒಳ್ಳೆಯದು. ಲಂಡನ್​ನಲ್ಲಿ ನೂರಾರು ಕಿಲೋಮೀಟರ್ ವರೆಗೆ ಮೆಟ್ರೋ ಬೆಳೆದಿದೆ. ಅದೇನು ದೊಡ್ಡ ವಿಚಾರ ಅಲ್ಲ. ಮೆಟ್ರೋ ಬೆಳೆದರೆ ಸಾರಿಗೆ ಸಂಪರ್ಕಕ್ಕೆ ಒಳ್ಳೆಯದು ಎಂದರು.

ಇದನ್ನೂ ಓದಿ: ಪಿಎಸ್​​ಐ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್​ ತೀರ್ಪು: ಆದೇಶ ಪ್ರತಿ ಕೈ ಸೇರಿದ ಬಳಿಕ ಮುಂದಿನ ಹೆಜ್ಜೆ: ಜಿ ಪರಮೇಶ್ವರ್​

ಇತ್ತೀಚೆಗೆ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ರಾಮನಗರವನ್ನು ಬೆಂಗಳೂರಿನೊಂದಿಗೆ ಸೇರಿಸಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ, ಶುಕ್ರವಾರ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಬಿಡದಿಗೆ ಬೆಂಗಳೂರು ಮೆಟ್ರೋ ವಿಸ್ತರಿಸುವ ಬಗ್ಗೆ ಘೋಷಣೆ ಮಾಡಿದ್ದರು.

ಮಚ್ಚು ಹಿಡ್ಕೊಂಡು ಓಡಾಡಿದರೆ ಪೊಲೀಸರು ಸುಮ್ಮನೆ ಬಿಡಲ್ಲ

ಗೃಹಸಚಿವರ ತವರು ಜಿಲ್ಲೆ ತುಮಕೂರಿನಲ್ಲೇ ಪುಂಡರಿಂದ ಪುಂಡಾಟ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ಕಾನೂನಿಗೆ ಯಾರು ದೊಡ್ಡವರಲ್ಲ. ಯಾರೋ ಮಚ್ಚು ಹಿಡ್ಕೊಂಡು ಓಡಾಡಿದರೆ ಪೊಲೀಸರು ಸುಮ್ಮನೆ ಬಿಡಲ್ಲ. ಅವರನ್ನ ಹಿಡಿದು ಒಳಗೆ ಹಾಕುತ್ತೇವೆ. ಅಂತವರು ಏನಾದರು ಸ್ವಲ್ಪದ್ದರಲ್ಲಿ ತಪ್ಪಿಸಿಕೊಂಡಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ. ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತರು ಎಲ್ಲಾ ರೌಡಿಗಳನ್ನು ಮಾನಿಟರ್ ಮಾಡುತ್ತಿದ್ದಾರೆ. ಅದೇ ರೀತಿ ತುಮಕೂರಿನಲ್ಲೂ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Sat, 11 November 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ