Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡದಿ ಮತ್ತು ತುಮಕೂರು ಎರಡು ಕಡೆನೂ ಮೆಟ್ರೋ ಆಗಬೇಕು: ಜಿ.ಪರಮೇಶ್ವರ, ಗೃಹ ಸಚಿವ

ಬೆಂಗಳೂರಿನ ನಮ್ಮ ಮೆಟ್ರೋವನ್ನು ತನ್ನ ತವರು ಜಿಲ್ಲೆಯ ಬಿಡದಿವರೆಗೂ ವಿಸ್ತರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ತನ್ನ ತವರು ಜಿಲ್ಲೆ ತಮಕೂರಿಗೂ ಮೆಟ್ರೋ ವಿಸ್ತರಣೆ ಆಗಬೇಕು ಎನ್ನುವ ಹೇಳಿಕೆ ನೀಡಿದ್ದಾರೆ.

ಬಿಡದಿ ಮತ್ತು ತುಮಕೂರು ಎರಡು ಕಡೆನೂ ಮೆಟ್ರೋ ಆಗಬೇಕು: ಜಿ.ಪರಮೇಶ್ವರ, ಗೃಹ ಸಚಿವ
ಗೃಹ ಸಚಿವ ಡಾ.ಜಿ.ಪರಮೇಶ್ವರ
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on:Nov 11, 2023 | 6:05 PM

ತುಮಕೂರು, ನ.11: ಬಿಡದಿ ಹಾಗೂ ತುಮಕೂರು ಎರಡು ಕಡೆಯೂ ಮೆಟ್ರೋ (Metro) ಆಗಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ (Dr.G.Parameshwara) ಹೇಳಿದ್ದಾರೆ. ಬೆಂಗಳೂರಿನ ನಮ್ಮ ಮೆಟ್ರೋವನ್ನು ತನ್ನ ತವರು ಜಿಲ್ಲೆಯ ಬಿಡದಿವರೆಗೂ ವಿಸ್ತರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ತನ್ನ ತವರು ಜಿಲ್ಲೆ ತಮಕೂರಿಗೂ ಮೆಟ್ರೋ ವಿಸ್ತರಣೆ ಆಗಬೇಕು ಎನ್ನುವ ಹೇಳಿಕೆ ನೀಡಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಚಟಾಪಟಿ ಇಲ್ಲ. ಫಸ್ಟ್​, ಸೆಕೆಂಡ್ ಪ್ರಶ್ನೆ ಇಲ್ಲ. ಬಿಡದಿವರೆಗೂ ಮೆಟ್ರೋ ವಿಸ್ತರಣೆ ಮಾಡಿದರೆ ಬೆಂಗಳೂರು ಬೆಳೆಯುತ್ತದೆ. ಅದೇ ರೀತಿ ತುಮಕೂರು ಬೆಳೆದರೂ ಒಳ್ಳೆಯದು. ಲಂಡನ್​ನಲ್ಲಿ ನೂರಾರು ಕಿಲೋಮೀಟರ್ ವರೆಗೆ ಮೆಟ್ರೋ ಬೆಳೆದಿದೆ. ಅದೇನು ದೊಡ್ಡ ವಿಚಾರ ಅಲ್ಲ. ಮೆಟ್ರೋ ಬೆಳೆದರೆ ಸಾರಿಗೆ ಸಂಪರ್ಕಕ್ಕೆ ಒಳ್ಳೆಯದು ಎಂದರು.

ಇದನ್ನೂ ಓದಿ: ಪಿಎಸ್​​ಐ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್​ ತೀರ್ಪು: ಆದೇಶ ಪ್ರತಿ ಕೈ ಸೇರಿದ ಬಳಿಕ ಮುಂದಿನ ಹೆಜ್ಜೆ: ಜಿ ಪರಮೇಶ್ವರ್​

ಇತ್ತೀಚೆಗೆ ಮಾತನಾಡಿದ್ದ ಡಿಕೆ ಶಿವಕುಮಾರ್ ಅವರು, ರಾಮನಗರವನ್ನು ಬೆಂಗಳೂರಿನೊಂದಿಗೆ ಸೇರಿಸಲಾಗುವುದು ಎಂದಿದ್ದರು. ಇದರ ಬೆನ್ನಲ್ಲೇ, ಶುಕ್ರವಾರ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ಬಿಡದಿಗೆ ಬೆಂಗಳೂರು ಮೆಟ್ರೋ ವಿಸ್ತರಿಸುವ ಬಗ್ಗೆ ಘೋಷಣೆ ಮಾಡಿದ್ದರು.

ಮಚ್ಚು ಹಿಡ್ಕೊಂಡು ಓಡಾಡಿದರೆ ಪೊಲೀಸರು ಸುಮ್ಮನೆ ಬಿಡಲ್ಲ

ಗೃಹಸಚಿವರ ತವರು ಜಿಲ್ಲೆ ತುಮಕೂರಿನಲ್ಲೇ ಪುಂಡರಿಂದ ಪುಂಡಾಟ ನಡೆಯುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗೃಹಸಚಿವರು, ಕಾನೂನಿಗೆ ಯಾರು ದೊಡ್ಡವರಲ್ಲ. ಯಾರೋ ಮಚ್ಚು ಹಿಡ್ಕೊಂಡು ಓಡಾಡಿದರೆ ಪೊಲೀಸರು ಸುಮ್ಮನೆ ಬಿಡಲ್ಲ. ಅವರನ್ನ ಹಿಡಿದು ಒಳಗೆ ಹಾಕುತ್ತೇವೆ. ಅಂತವರು ಏನಾದರು ಸ್ವಲ್ಪದ್ದರಲ್ಲಿ ತಪ್ಪಿಸಿಕೊಂಡಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡುತ್ತೇನೆ. ಬೆಂಗಳೂರಿನಲ್ಲಿ ಪೊಲೀಸ್ ಆಯುಕ್ತರು ಎಲ್ಲಾ ರೌಡಿಗಳನ್ನು ಮಾನಿಟರ್ ಮಾಡುತ್ತಿದ್ದಾರೆ. ಅದೇ ರೀತಿ ತುಮಕೂರಿನಲ್ಲೂ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Sat, 11 November 23

ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಯಾರ ದಯೆಯಿಂದಲೂ ನಾನಿಲ್ಲಿ ಬಂದಿಲ್ಲ; ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು