AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿಗೆ ಭರಪೂರ ಕೊಡುಗೆಗಳು: ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು

ವಿ.ಸೋಮಣ್ಣ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗುತ್ತಿದ್ದಂತೆ ತುಮಕೂರಿಗೆ ಭರಪೂರ ಕೊಡುಗೆಗಳು ಹರಿದು ಬರುತ್ತಿವೆ. ಕಳೆದ ತಿಂಗಳಷ್ಟೇ ಜಿಲ್ಲೆಯ 5 ಮೇಲ್ಸೇತುವೆ ನಿರ್ಮಾಣಕ್ಕೆ ಬರೋಬ್ಬರಿ  350 ಕೋಟಿ ರೂ. ರೇಲ್ವೆ ಸಚಿವಾಲಯ ಅನುಮೋದನೆ ನೀಡಿತ್ತು. ಇದೀಗ ಮತ್ತೆ 60ಕೋಟಿ ರೂಪಾಯಿ ವೆಚ್ಚದಲ್ಲಿ ತುಮಕೂರಿನ ಮೂರು ರೈಲ್ವೆ ಕಾಮಗಾರಿಗಳ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ.

ತುಮಕೂರಿಗೆ ಭರಪೂರ ಕೊಡುಗೆಗಳು: ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು
ತುಮಕೂರು ಜಿಲ್ಲೆಯ 3 ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು
ಹರೀಶ್ ಜಿ.ಆರ್​.
| Edited By: |

Updated on:Aug 27, 2024 | 5:52 PM

Share

ನವದೆಹಲಿ, ಆ.27: ತುಮಕೂರು ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಹಣ ಮಂಜೂರು ಮಾಡಿದೆ. ಈ ಕುರಿತು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V. Somanna) ಅವರು ಮಾಹಿತಿ ನೀಡಿದ್ದು, ‘ತುಮಕೂರಿನ ಕಲ್ಲಿಪಾಳ್ಯ ​ರಸ್ತೆ ಕೆಳ ಸೇತುವೆಗೆ 13.44 ಕೋಟಿ ರೂ., ಬಂಡಿಹಳ್ಳಿ ರೋಡ್ ಗೇಟ್ ರಸ್ತೆ ಕೆಳ ಸೇತುವೆಗೆ 10.01 ಕೋಟಿ ರೂ., ತುಮಕೂರಿನ ಬೆಂಚಗೆರೆ ಗೇಟ್ ರಸ್ತೆ ಮೇಲ್ಸೇತುವೆಗೆ 36.62 ಕೋಟಿ ರೂ ಸೇರಿ ಒಟ್ಟು 60ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮೂರು ರೈಲ್ವೆ ಕಾಮಗಾರಿಗಳು ನಿರ್ಮಾಣವಾಗಲಿದೆ.

ಕಳೆದ ತಿಂಗಳು ಜಿಲ್ಲೆಯ 5 ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದ ರೇಲ್ವೆ ಸಚಿವಾಲಯ

ಇನ್ನು ಕಳೆದ ಜುಲೈ.15 ರಂದು ತುಮಕೂರಿನ ಕ್ಯಾತ್ಸಂದ್ರ ರೈಲ್ವೆ ಸ್ಟೇಷನ್ ಮೈದಾಳ ಗೇಟ್, ಬಡ್ಡಿಹಳ್ಳಿ ಗೇಟ್, ಬಟ್ಟವಾಡಿ, ಹಿರಿಯೂರು, ತುಮಕೂರು-ಮೈಸೂರು ಗೇಟ್​​ ಫ್ಲೈಓವರ್​​ ಸೇರಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೇಲ್ವೆ ಸಚಿವಾಲಯ ಅನುಮೋದನೆ ನೀಡಿತ್ತು. ಬರೋಬ್ಬರಿ  350 ಕೋಟಿ ರೂ. ವೆಚ್ಚದಲ್ಲಿ ಇದು ನಿರ್ಮಾಣವಾಗಲಿದೆ. ಈ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದು ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದರು. ಇದೀಗ 60 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೆ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು ಎಂದಿದೆ.

ಇದನ್ನೂ ಓದಿ:ತುಮಕೂರಿನಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಸಚಿವಾಲಯ ಅನುಮೋದನೆ

ಈ ಹಿಂದೆ ವಿ.ಸೋಮಣ್ಣ ಮಾತನಾಡಿ, ‘ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಆ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರು ಕೂಡ ಈ ವಂದೇ ಭಾರತ್ ರೈಲಿನಲ್ಲಿ ಸಂಚರಿಸುವಂತೆ ಟಿಕೆಟ್‌ ದರ ಪರಿಷ್ಕರಣೆ ಮಾಡುತ್ತೇವೆ. ಈ ರೈಲು ಟಿಕೆಟ್ ದರ ಪರಿಷ್ಕರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆ ಮಾಡಿರುವುದಾಗಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Tue, 27 August 24

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್