ತುಮಕೂರಿಗೆ ಭರಪೂರ ಕೊಡುಗೆಗಳು: ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು

ವಿ.ಸೋಮಣ್ಣ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗುತ್ತಿದ್ದಂತೆ ತುಮಕೂರಿಗೆ ಭರಪೂರ ಕೊಡುಗೆಗಳು ಹರಿದು ಬರುತ್ತಿವೆ. ಕಳೆದ ತಿಂಗಳಷ್ಟೇ ಜಿಲ್ಲೆಯ 5 ಮೇಲ್ಸೇತುವೆ ನಿರ್ಮಾಣಕ್ಕೆ ಬರೋಬ್ಬರಿ  350 ಕೋಟಿ ರೂ. ರೇಲ್ವೆ ಸಚಿವಾಲಯ ಅನುಮೋದನೆ ನೀಡಿತ್ತು. ಇದೀಗ ಮತ್ತೆ 60ಕೋಟಿ ರೂಪಾಯಿ ವೆಚ್ಚದಲ್ಲಿ ತುಮಕೂರಿನ ಮೂರು ರೈಲ್ವೆ ಕಾಮಗಾರಿಗಳ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ.

ತುಮಕೂರಿಗೆ ಭರಪೂರ ಕೊಡುಗೆಗಳು: ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು
ತುಮಕೂರು ಜಿಲ್ಲೆಯ 3 ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Aug 27, 2024 | 5:52 PM

ನವದೆಹಲಿ, ಆ.27: ತುಮಕೂರು ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಹಣ ಮಂಜೂರು ಮಾಡಿದೆ. ಈ ಕುರಿತು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V. Somanna) ಅವರು ಮಾಹಿತಿ ನೀಡಿದ್ದು, ‘ತುಮಕೂರಿನ ಕಲ್ಲಿಪಾಳ್ಯ ​ರಸ್ತೆ ಕೆಳ ಸೇತುವೆಗೆ 13.44 ಕೋಟಿ ರೂ., ಬಂಡಿಹಳ್ಳಿ ರೋಡ್ ಗೇಟ್ ರಸ್ತೆ ಕೆಳ ಸೇತುವೆಗೆ 10.01 ಕೋಟಿ ರೂ., ತುಮಕೂರಿನ ಬೆಂಚಗೆರೆ ಗೇಟ್ ರಸ್ತೆ ಮೇಲ್ಸೇತುವೆಗೆ 36.62 ಕೋಟಿ ರೂ ಸೇರಿ ಒಟ್ಟು 60ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮೂರು ರೈಲ್ವೆ ಕಾಮಗಾರಿಗಳು ನಿರ್ಮಾಣವಾಗಲಿದೆ.

ಕಳೆದ ತಿಂಗಳು ಜಿಲ್ಲೆಯ 5 ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದ ರೇಲ್ವೆ ಸಚಿವಾಲಯ

ಇನ್ನು ಕಳೆದ ಜುಲೈ.15 ರಂದು ತುಮಕೂರಿನ ಕ್ಯಾತ್ಸಂದ್ರ ರೈಲ್ವೆ ಸ್ಟೇಷನ್ ಮೈದಾಳ ಗೇಟ್, ಬಡ್ಡಿಹಳ್ಳಿ ಗೇಟ್, ಬಟ್ಟವಾಡಿ, ಹಿರಿಯೂರು, ತುಮಕೂರು-ಮೈಸೂರು ಗೇಟ್​​ ಫ್ಲೈಓವರ್​​ ಸೇರಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೇಲ್ವೆ ಸಚಿವಾಲಯ ಅನುಮೋದನೆ ನೀಡಿತ್ತು. ಬರೋಬ್ಬರಿ  350 ಕೋಟಿ ರೂ. ವೆಚ್ಚದಲ್ಲಿ ಇದು ನಿರ್ಮಾಣವಾಗಲಿದೆ. ಈ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದು ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದರು. ಇದೀಗ 60 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೆ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು ಎಂದಿದೆ.

ಇದನ್ನೂ ಓದಿ:ತುಮಕೂರಿನಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಸಚಿವಾಲಯ ಅನುಮೋದನೆ

ಈ ಹಿಂದೆ ವಿ.ಸೋಮಣ್ಣ ಮಾತನಾಡಿ, ‘ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಆ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರು ಕೂಡ ಈ ವಂದೇ ಭಾರತ್ ರೈಲಿನಲ್ಲಿ ಸಂಚರಿಸುವಂತೆ ಟಿಕೆಟ್‌ ದರ ಪರಿಷ್ಕರಣೆ ಮಾಡುತ್ತೇವೆ. ಈ ರೈಲು ಟಿಕೆಟ್ ದರ ಪರಿಷ್ಕರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆ ಮಾಡಿರುವುದಾಗಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Tue, 27 August 24

ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ