ತುಮಕೂರಿಗೆ ಭರಪೂರ ಕೊಡುಗೆಗಳು: ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 27, 2024 | 5:52 PM

ವಿ.ಸೋಮಣ್ಣ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗುತ್ತಿದ್ದಂತೆ ತುಮಕೂರಿಗೆ ಭರಪೂರ ಕೊಡುಗೆಗಳು ಹರಿದು ಬರುತ್ತಿವೆ. ಕಳೆದ ತಿಂಗಳಷ್ಟೇ ಜಿಲ್ಲೆಯ 5 ಮೇಲ್ಸೇತುವೆ ನಿರ್ಮಾಣಕ್ಕೆ ಬರೋಬ್ಬರಿ  350 ಕೋಟಿ ರೂ. ರೇಲ್ವೆ ಸಚಿವಾಲಯ ಅನುಮೋದನೆ ನೀಡಿತ್ತು. ಇದೀಗ ಮತ್ತೆ 60ಕೋಟಿ ರೂಪಾಯಿ ವೆಚ್ಚದಲ್ಲಿ ತುಮಕೂರಿನ ಮೂರು ರೈಲ್ವೆ ಕಾಮಗಾರಿಗಳ ನಿರ್ಮಾಣಕ್ಕೆ ಕೇಂದ್ರ ಅಸ್ತು ಎಂದಿದೆ.

ತುಮಕೂರಿಗೆ ಭರಪೂರ ಕೊಡುಗೆಗಳು: ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು
ತುಮಕೂರು ಜಿಲ್ಲೆಯ 3 ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು
Follow us on

ನವದೆಹಲಿ, ಆ.27: ತುಮಕೂರು ಜಿಲ್ಲೆಯ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ರೈಲ್ವೆ ಸಚಿವಾಲಯ ಹಣ ಮಂಜೂರು ಮಾಡಿದೆ. ಈ ಕುರಿತು ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V. Somanna) ಅವರು ಮಾಹಿತಿ ನೀಡಿದ್ದು, ‘ತುಮಕೂರಿನ ಕಲ್ಲಿಪಾಳ್ಯ ​ರಸ್ತೆ ಕೆಳ ಸೇತುವೆಗೆ 13.44 ಕೋಟಿ ರೂ., ಬಂಡಿಹಳ್ಳಿ ರೋಡ್ ಗೇಟ್ ರಸ್ತೆ ಕೆಳ ಸೇತುವೆಗೆ 10.01 ಕೋಟಿ ರೂ., ತುಮಕೂರಿನ ಬೆಂಚಗೆರೆ ಗೇಟ್ ರಸ್ತೆ ಮೇಲ್ಸೇತುವೆಗೆ 36.62 ಕೋಟಿ ರೂ ಸೇರಿ ಒಟ್ಟು 60ಕೋಟಿ ರೂಪಾಯಿ ವೆಚ್ಚದಲ್ಲಿ ಈ ಮೂರು ರೈಲ್ವೆ ಕಾಮಗಾರಿಗಳು ನಿರ್ಮಾಣವಾಗಲಿದೆ.

ಕಳೆದ ತಿಂಗಳು ಜಿಲ್ಲೆಯ 5 ಮೇಲ್ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದ ರೇಲ್ವೆ ಸಚಿವಾಲಯ

ಇನ್ನು ಕಳೆದ ಜುಲೈ.15 ರಂದು ತುಮಕೂರಿನ ಕ್ಯಾತ್ಸಂದ್ರ ರೈಲ್ವೆ ಸ್ಟೇಷನ್ ಮೈದಾಳ ಗೇಟ್, ಬಡ್ಡಿಹಳ್ಳಿ ಗೇಟ್, ಬಟ್ಟವಾಡಿ, ಹಿರಿಯೂರು, ತುಮಕೂರು-ಮೈಸೂರು ಗೇಟ್​​ ಫ್ಲೈಓವರ್​​ ಸೇರಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೇಲ್ವೆ ಸಚಿವಾಲಯ ಅನುಮೋದನೆ ನೀಡಿತ್ತು. ಬರೋಬ್ಬರಿ  350 ಕೋಟಿ ರೂ. ವೆಚ್ಚದಲ್ಲಿ ಇದು ನಿರ್ಮಾಣವಾಗಲಿದೆ. ಈ ವೆಚ್ಚವನ್ನು ರೈಲ್ವೆ ಇಲಾಖೆ ಭರಿಸಲಿದೆ ಎಂದು ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದ್ದರು. ಇದೀಗ 60 ಕೋಟಿ ರೂಪಾಯಿ ವೆಚ್ಚದಲ್ಲಿ ಮತ್ತೆ ಮೂರು ರೈಲ್ವೆ ಕಾಮಗಾರಿಗೆ ಕೇಂದ್ರ ಅಸ್ತು ಎಂದಿದೆ.

ಇದನ್ನೂ ಓದಿ:ತುಮಕೂರಿನಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ನಿರ್ಮಾಣಕ್ಕೆ ರೈಲ್ವೆ ಸಚಿವಾಲಯ ಅನುಮೋದನೆ

ಈ ಹಿಂದೆ ವಿ.ಸೋಮಣ್ಣ ಮಾತನಾಡಿ, ‘ವಂದೇ ಭಾರತ್ ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಮಾಡಲಾಗುತ್ತದೆ. ಆ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರು ಕೂಡ ಈ ವಂದೇ ಭಾರತ್ ರೈಲಿನಲ್ಲಿ ಸಂಚರಿಸುವಂತೆ ಟಿಕೆಟ್‌ ದರ ಪರಿಷ್ಕರಣೆ ಮಾಡುತ್ತೇವೆ. ಈ ರೈಲು ಟಿಕೆಟ್ ದರ ಪರಿಷ್ಕರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚೆ ಮಾಡಿರುವುದಾಗಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Tue, 27 August 24