AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಬ್ಬಿ: ಫೋನ್​​ ಪೇ ಮೂಲಕ ಲಂಚ ಪಡೆದಿದ್ದ ಪಿಎಸ್‌ಐ ಜ್ಞಾನಮೂರ್ತಿ ಗಣೇಶನ ಹಬ್ಬದ ದಿನ ಸಸ್ಪೆಂಡ್​!

ತುಮಕೂರು: ಮಾಹಿತಿ ತಂತ್ರಜ್ಞಾನ ಅಗಾಧವಾಗಿ ಬೆಳೆಯುತ್ತಿದೆ. ಅದರೊಂದಿಗೆ ಹಣಕಾಸು ವ್ಯವಹಾರವೂ ಸರಳವಾಗುತ್ತಿವೆ. ಮನಿ ಗೇಟ್​ ವೇ ಗಳ ಮೂಲಕ ಹಣಕಾಸು ವಿನಿಮಯ ಈಗ ಸಲೀಸಾಗಿ ನಡೆಯುತ್ತಿದೆ. ಆದರೆ ಇಲ್ಲೊಬ್ಬ ಆರೋಪಿ ಪೊಲೀಸ್​ ಅಧಿಕಾರಿ ಕಾಲಕ್ಕೆ ತಕ್ಕಂತೆ ಫೋನ್​​ ಪೇ ಮೂಲಕವೂ ಲಂಚ ಪಡೆದಿದ್ದು, ನೋಡಿದಿರಾ! ನಾವು ಹೆಂಗೆ ಎಂದು ವ್ಯಂಗ್ಯವಾಗಿ ಕೇಳುವಂತಿದೆ. ಆದರೆ ಪೊಲೀಸ್​ ಇಲಾಖೆ ಆತನನ್ನು ಗಣೇಶನ ಹಬ್ಬದ ದಿನ ಸಸ್ಪೆಂಡ್​ ಮಾಡಿ ಮನೆಗೆ ಕಳಿಸಿದೆ. ಗುಬ್ಬಿ ಪೊಲೀಸ್​ ಠಾಣೆ ಪಿಎಸ್‌ಐ ಜ್ಞಾನಮೂರ್ತಿ ಅಮಾನತುಗೊಂಡ ಕಿರಿಯ […]

ಗುಬ್ಬಿ: ಫೋನ್​​ ಪೇ ಮೂಲಕ ಲಂಚ ಪಡೆದಿದ್ದ ಪಿಎಸ್‌ಐ ಜ್ಞಾನಮೂರ್ತಿ ಗಣೇಶನ ಹಬ್ಬದ ದಿನ ಸಸ್ಪೆಂಡ್​!
ಗುಬ್ಬಿ: ಫೋನ್​​ ಪೇ ಮೂಲಕ ಲಂಚ ಪಡೆದಿದ್ದ ಪಿಎಸ್‌ಐ ಜ್ಞಾನಮೂರ್ತಿ ಗಣೇಶನ ಹಬ್ಬದ ದಿನ ಸಸ್ಪೆಂಡ್​!
TV9 Web
| Edited By: |

Updated on:Sep 10, 2021 | 2:44 PM

Share

ತುಮಕೂರು: ಮಾಹಿತಿ ತಂತ್ರಜ್ಞಾನ ಅಗಾಧವಾಗಿ ಬೆಳೆಯುತ್ತಿದೆ. ಅದರೊಂದಿಗೆ ಹಣಕಾಸು ವ್ಯವಹಾರವೂ ಸರಳವಾಗುತ್ತಿವೆ. ಮನಿ ಗೇಟ್​ ವೇ ಗಳ ಮೂಲಕ ಹಣಕಾಸು ವಿನಿಮಯ ಈಗ ಸಲೀಸಾಗಿ ನಡೆಯುತ್ತಿದೆ. ಆದರೆ ಇಲ್ಲೊಬ್ಬ ಆರೋಪಿ ಪೊಲೀಸ್​ ಅಧಿಕಾರಿ ಕಾಲಕ್ಕೆ ತಕ್ಕಂತೆ ಫೋನ್​​ ಪೇ ಮೂಲಕವೂ ಲಂಚ ಪಡೆದಿದ್ದು, ನೋಡಿದಿರಾ! ನಾವು ಹೆಂಗೆ ಎಂದು ವ್ಯಂಗ್ಯವಾಗಿ ಕೇಳುವಂತಿದೆ. ಆದರೆ ಪೊಲೀಸ್​ ಇಲಾಖೆ ಆತನನ್ನು ಗಣೇಶನ ಹಬ್ಬದ ದಿನ ಸಸ್ಪೆಂಡ್​ ಮಾಡಿ ಮನೆಗೆ ಕಳಿಸಿದೆ.

ಗುಬ್ಬಿ ಪೊಲೀಸ್​ ಠಾಣೆ ಪಿಎಸ್‌ಐ ಜ್ಞಾನಮೂರ್ತಿ ಅಮಾನತುಗೊಂಡ ಕಿರಿಯ ಅಧಿಕಾರಿ. ಈತನನ್ನು ಅಮಾನತುಗೊಳಿಸಿ ತುಮಕೂರು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (ಎಸ್​ಪಿ) ರಾಹುಲ್ ಇಂದು ಆದೇಶ ಹೊರಡಿಸಿದ್ದಾರೆ.

ಏನಿದು ಲಂಚ ವೃತ್ತಾಂತ: ಕಳೆದ ವಾರ ವಿನಾಕಾರಣ ಮ್ಯಾಕ್ಸಿಕ್ಯಾಬ್ ವೊಂದನ್ನು ತಡೆದು ಚಾಲಕನಿಗೆ ಕಿರುಕುಳ ನೀಡಿದ ಆರೋಪವನ್ನು ಪಿಎಸ್ಐ ಎದುರಿಸುತ್ತಿದ್ದರು. ಕ್ಯಾಬ್ ಚಾಲಕನಿಂದ 7 ಸಾವಿರ ರೂ. ಲಂಚವನ್ನು ಫೋನ್ ಪೇ ಮೂಲಕ ಪಿಎಸ್‌ಐ ಪಡೆದುಕೊಂಡಿದ್ದರು. ಜೀಪ್ ಚಾಲಕ ಕರಿಯಪ್ಪ ಮೊಬೈಲ್ ನಂಬರಿಗೆ ಪಿಎಸ್ಐ ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡದ್ದರು!

ಗುಬ್ಬಿ ಪೊಲೀಸ್​ ಠಾಣೆಯ PSI ಜ್ಞಾನಮೂರ್ತಿ ಲಂಚ ಸ್ವೀಕರಿಸುತ್ತಿದ್ದಾರೆಂದು ಆರೋಪಿಸಿ, ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಟ್ಯಾಕ್ಸಿ ಚಾಲಕರು ತುಮಕೂರು ಜಿಲ್ಲೆ ಗುಬ್ಬಿ ಠಾಣೆ ಮುಂದೆ ಮಿಂಚಿನ ಪ್ರತಿಭಟನೆ, ಧರಣಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್‌ಐ ಜ್ಞಾನಮೂರ್ತಿಯನ್ನು ಅಮಾನತು ಮಾಡಿ ತುಮಕೂರು ಎಸ್‌ಪಿ ರಾಹುಲ್ ಕುಮಾರ್ ಶಹಾಪುರ್ ಆದೇಶಿಸಿದ್ದಾರೆ.

Also Read: ಮೃತದೇಹ ಸಾಗಿಸೋಲ್ಲ ಎಂದ ಮ್ಯಾಕ್ಸಿ ಕ್ಯಾಬ್ ಚಾಲಕ, ದಂಡ ಹಾಕಿ ಲಂಚ ಪಡೆದ ಪಿಎಸ್ಐ; ಗುಬ್ಬಿ ಚಾಲಕರ ಮಿಂಚಿನ ಪ್ರತಿಭಟನೆ Also Read: ತುಮಕೂರು ಸಂಸದ ಮತ್ತು ಗುಬ್ಬಿ ಶಾಸಕರ ನಡುವೆ ವಾಕ್ಸಮರ; ಎಂಎಸ್ಎಸ್ ಸ್ಟೇಷನ್ ಉದ್ಘಾಟನೆ ಕಾರ್ಯಕ್ರಮಲ್ಲೇ ಪರಸ್ಪರ ಜಗಳ

(bribe through phonepe Gubbi police station sub inspector jnana murthy suspended)

Published On - 1:57 pm, Fri, 10 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!