ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​

ಹುಬ್ಬಳ್ಳಿಯ ವಿದ್ಯಾನಗರದಲ್ಲಿರುವ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಮಧ್ಯಾಹ್ನ ಎಂಸಿಎ ವಿದ್ಯಾರ್ಥಿನಿ ನೇಹಾ ಎಂಬುವರನ್ನು ಫಯಾಜ್​ ಕೊಲೆ ಮಾಡಿದ್ದನು. ಕೊಲೆ ಪ್ರಕರಣ ಸಂಬಂಧ ವಿದ್ಯಾನಗರ ಪೊಲೀಸರು ಆರೋಪಿ ಫಯಾಜನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆಗೆ ಕಾರಣ ತಿಳಿಸಿದ ಪರಮೇಶ್ವರ್​
ಕೊಲೆಯಾದ ನೇಹಾ, ಜಿ ಪರಮೇಶ್ವರ್​
Follow us
| Updated By: ವಿವೇಕ ಬಿರಾದಾರ

Updated on:Apr 19, 2024 | 11:04 AM

ತುಮಕೂರು, ಏಪ್ರಿಲ್​ 19: ನಗರದ ಬಿವಿಬಿ ಇಂಜಿನಿಯರ್​​ ಕಾಲೇಜು (BVB Engineering College) ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ (Student Neha) ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ. ಕೊಲೆಯಾದ ನೇಹಾ ಮತ್ತು ಆರೋಪಿ ಫಯಾಜ್​ ಪರಸ್ಪರ ಪ್ರೀತಿಸುತ್ತಿದ್ದರು. ನಂತರ ನೇಹಾ ಫಯಾಜ್​ನಿಂದ ದೂರವಾಗಲು ಯತ್ನಿಸಿದ್ದಾಳೆ. ಇದರಿಂದ ಕೋಪಗೊಂಡ ಫಯಾಜ್​​ ಕೊಲೆ ಮಾಡಿದ್ದಾನೆ ಎಂದು ಗೃಹ ಸಚಿವ ಜಿ ಪರಮೇಶ್ವರ (G Parameshwara) ಹೇಳಿದರು. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಘಟನೆ ನಡೆದ ವೇಳೆ ಮಗಳ ಜೊತೆ ಇದ್ದ, ತಾಯಿ ಮೇಲೂ ಹಲ್ಲೆ ಮಾಡಲಾಗಿದೆ, ಆದರೆ ನೇಹಾ ತಾಯಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಇದರಲ್ಲಿ ಲವ್ ಜಿಹಾದ್ ಕಂಡು ಬಂದಿಲ್ಲ. ನನ್ನನ್ನು ಬಿಟ್ಟು ಬೇರೆಯವನ್ನು ಮದುವೆ ಮಾಡಿಕೊಳ್ಳುತ್ತೀಯಾ ಅಂತ ಕೂಪದಲ್ಲಿ ಕೊಲೆ ಮಾಡಿದ್ದಾನೆ. ಇಂಥಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ ಎಂದರು.

ಜೈ ಶ್ರೀರಾಮ್​ ಎಂದು ಕೂಗಿದ್ದಕ್ಕೆ ಯುವಕರ ಮೇಲೆ ಹಲ್ಲೆ ಮಾಡಿದ್ದು ದುರದೃಷ್ಟಕರ. ಕಾನೂನಿನ ವಿರುದ್ಧವಾಗಿ ನಡೆದುಕೊಂಡರೆ ಯಾರನ್ನೂ ರಕ್ಷಣೆ ಮಾಡಲ್ಲ. ರಾಜ್ಯದ ಜನತೆಗೆ ಗೃಹ ಸಚಿವನಾಗಿ ಭರವಸೆ ಕೊಡಲು ಬಯಸುತ್ತೇನೆ. ರಾಮನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹಜ. ಅದಕ್ಕೆ ಇನ್ನೊಬ್ಬರು ಬೇರೆ ಘೋಷಣೆ ಕೂಗಿದ್ದಾರೆ. ಯಾರನ್ನೂ ರಕ್ಷಣೆ ಮಾಡುವುದಾಗಲಿ, ಓಲೈಸುವುದಾಗಲಿ ಮಾಡಲ್ಲ. ಯಾವುದೇ ಮುಲಾಜಿಲ್ಲದೆ ಕಾನೂನಡಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಕೊಲೆಯಾದ ನೇಹಾ, ನೇಹಾ ತಂದೆ ನಿರಂಜನ ಹಿರೇಮಠ, ಆರೋಪಿ ಫಯಾಜ್​

ಜೈ ಶ್ರೀರಾಮ ಅಂತ ಕೂಗಿದವರ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ವೀಕ್ ಸೆಕ್ಷನ್​ ಹಾಕಲಾಗಿದೆ ಎಂಬ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸೆಕ್ಷನ್​ಗಳನ್ನು ಹಾಕಲಾಗುವುದು. ಪ್ರಾರಂಭದಲ್ಲಿ ಪ್ರಕರಣ ದಾಖಲಿಸಿಕಿಕೊಳ್ಳಲಾಗಿದೆ. ತನಿಖೆ ಹಂತದಲ್ಲಿ ಸಾಕ್ಷಾಧಾರಗಳ ಆಧಾರದ ಮೇಲೆ ಸೆಕ್ಷನ್​ ಹಾಕಲಾಗುತ್ತದೆ. ಈ ಸೆಕ್ಷನ್​ ಹಾಕಿಲ್ಲ, ಆ ಸೆಕ್ಷನ್​ ಹಾಕಿಲ್ಲ ಅನ್ನಲು‌‌ ಆಗಲ್ಲ. ತನಿಖೆಯ ಆಧಾರದ ಮೇಲೆ ಸೆಕ್ಷನ್ ಹಾಕಲಾಗುತ್ತದೆ.

ಇದನ್ನೂ ಓದಿ: ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಇಂಥಹ ಘಟನೆ ಮರುಕಳಿಸುತ್ತದೆ ಎಂಬ ಬಿಜೆಪಿ ಆರೋಪ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಇದ್ದಾಗಲೂ ಹಲವು ಘಟನೆಗಳು ನಡೆದ ಬಗ್ಗೆ ಮಾಹಿತಿ ಇದೆ. ಆರ್​. ಅಶೋಕ್ ಮತ್ತು ಆರಗ ಜ್ಞಾನೇಂದ್ರ, ಬಸವರಾಜ್​ ಬೊಮ್ಮಾಯಿ ಅವರು ಗೃಹಮಂತ್ರಿ ಇದ್ದಾಗ ಇಂಥಹ ಘಟನೆಗಳು ನಡೆದಿವೆ ಎಂದು ವಾಗ್ದಾಳಿ ಮಾಡಿದರು.

ಇಡೀ ರಾಜ್ಯದಲ್ಲಿ ಶ್ರೀರಾಮನವಮಿ ದಿನ ಎಷ್ಟು ಘಟನೆ ನಡೆದಿವೆ? ಇದೊಂದು ಹೊರತು ಪಡಿಸಿದರೆ ಬೇರೆ ಏನು ನಡೆದಿಲ್ಲ. ಯಾರು ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಾರೆ, ಅವರು ಯಾವುದೇ ಸಮುದಾಯ ಆಗಲಿ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಅವರನ್ನು ಓಲೈಸುವ ಕೆಲಸ ನಾವು ಯಾವತ್ತೂ ಮಾಡುವುದಿಲ್ಲ. ಸಮಾಜವನ್ನು ಶಾಂತಿಯಿಂದ ಇಡಬೇಕು ಅನ್ನುವುದು ನಮ್ಮ ಉದ್ದೇಶ ಎಂದು ಹೇಳಿದರು.

ಆರೋಪಿ ಫಯಾಜ್​​ಗೆ 14 ದಿನಗಳ ನ್ಯಾಯಾಂಗ ಬಂಧನ

ಎಂಸಿಎ ವಿದ್ಯಾರ್ಥಿನಿ ನೇಹಾಳನ್ನು ಕೊಲೆ ಮಾಡಿದ ಆರೋಪಿ ಫಯಾಜ್​​ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Fri, 19 April 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ