AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು

ವಿದ್ಯಾರ್ಥಿಗೆ ಫೋನ್ ಕರೆ ಮಾಡಿ ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು. ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿ ಜತೆ ಯೋಗೀಶ್‌ ಮಾತಾಡಿದ ಆಡಿಯೋ ವೈರಲ್ ಆಗಿದೆ.

ನೀರು ಪೋಲಾಗುವ ಬಗ್ಗೆ ದೂರು ಹೇಳಿದಕ್ಕೆ ವಿದ್ಯಾರ್ಥಿಗಳಿಗೆ ಧಮ್ಕಿ, ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಮೇಲೆ ದೂರು ದಾಖಲು
ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್‌
TV9 Web
| Edited By: |

Updated on:Nov 04, 2021 | 9:51 AM

Share

ತುಮಕೂರು: ನೀರು ಪೋಲಾಗುವ ಬಗ್ಗೆ ದೂರು ಹೇಳಿದ ವಿದ್ಯಾರ್ಥಿಗಳಿಗೆ ಗುಬ್ಬಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು ಎಂದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿಗಳಿಗೆ ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ಚನ್ನಬಸವೇಶ್ವರ ಸ್ವಾಮಿ ದೇವಾಲಯದ ಸಮೀಪ ರಸ್ತೆಯಲ್ಲಿ ನೀರು ಪೋಲಾಗಿ ಹರಿಯುವುದನ್ನ ಕಂಡು ವಿದ್ಯಾರ್ಥಿಗಳೂ ವಿಡಿಯೋ ಮಾಡಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್‌ಗೆ ಕಳಿಸಿದ್ದರು. ಮೆಡಿಕಲ್ ವಿದ್ಯಾರ್ಥಿನಿ ಮೇಘನಾ ಹಾಗೂ ಇತರೆ ಸ್ನೇಹಿತರು ಮುಖ್ಯಾಧಿಕಾರಿ ಯೋಗೀಶ್ ಗೆ ವಿಡಿಯೋ ಕಳಿಸಿ ಕ್ರಮದ ಬಗ್ಗೆ ಮನವಿ ಮಾಡಿದ್ದರು. ಆದ್ರೆ ವಿಡಿಯೋ ನೋಡಿ ಕ್ರಮಕೈಗೊಳ್ಳುಬೇಕಿದ್ದ ಅಧಿಕಾರಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ.

ವಿದ್ಯಾರ್ಥಿಗೆ ಫೋನ್ ಕರೆ ಮಾಡಿ ನಿನ್ನ ಕೆಲಸವನ್ನು ನೀನು ನೋಡಿಕೋ, ಯಾರೋ ನೀನು? ಎಲ್ಲಿ ನೀರು ಹರೀತಿದೆ ತೋರಿಸು. ನೀನು ಬರಲಿಲ್ಲ ಅಂದ್ರೆ ಪೊಲೀಸರನ್ನ ಕಳಿಸುತ್ತೇನೆಂದು ವಿದ್ಯಾರ್ಥಿ ಜತೆ ಯೋಗೀಶ್‌ ಮಾತಾಡಿದ ಆಡಿಯೋ ವೈರಲ್ ಆಗಿದೆ. ಸದ್ಯ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಗುಬ್ಬಿ ಪೊಲೀಸ್ ಠಾಣೆಯಲ್ಲಿ ಗುಬ್ಬಿ ಪ.ಪಂ. ಮುಖ್ಯಾಧಿಕಾರಿ ಯೋಗೀಶ್ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: 2020ನೇ ಇಸವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡವರಲ್ಲಿ 10ಕ್ಕೆ 6 ಜನರ ಆದಾಯ 1 ಲಕ್ಷ ರೂ.ಗಿಂತ ಕಮ್ಮಿ

Published On - 9:11 am, Thu, 4 November 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ