AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಕೇಸ್​​: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಕೇಸ್​​: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು
ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮೇಲೆ‌ ಎಫ್ಐಆರ್ ದಾಖಲು
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Mar 16, 2024 | 10:56 PM

Share

ತುಮಕೂರು, ಮಾ.16: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ಖಂಡಿಸಿ, ಕಳೆದ ಗುರುವಾರ ರಾತ್ರಿ PWD ಇಲಾಖೆ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದ‌. ಈ ವೇಳೆ ಪ್ರತಿಭಟನಾ ನಿರತರಾಗಿದ್ದ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಸಹಚರರು ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದರು.

ಶಾಸಕನ ಮೇಲೆ ಎಫ್​ಐಆರ್​ ದಾಖಲು

ಈ ಹಿನ್ನಲೆ ರಾಯಸಂದ್ರ ರವಿಕುಮಾರ್ ತುಮಕೂರಿನ ತಿಲಕ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇವರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 511, 506,504,143,149, 323,363 ಅಡಿಯಲ್ಲಿ ಎಫ್ಐಆರ್​ ದಾಖಲಿಸಲಾಗಿದ್ದು, ಈ ಕುರಿತು ತಿಲಕ್ ಪಾರ್ಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಯುವತಿಯನ್ನು ಫಾಲೋ ಮಾಡಿದ ಯುವಕ: ಬುದ್ಧಿ ಹೇಳಿದ್ದಕ್ಕೆ ಗ್ರಾಮಕ್ಕೆ ನುಗ್ಗಿ ಹಲ್ಲೆ

UPS ಬ್ಯಾಟರಿ ಸರ್ಕ್ಯೂಟ್ ಆಗಿ ಚಿನ್ನಾಭರಣ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ

ಬೆಂಗಳೂರು: ಜಾಲಹಳ್ಳಿಯ ಚೆಮ್ಮನೂರು ಚಿನ್ನಾಭರಣ ಮಳಿಗೆಯಲ್ಲಿ ಯುಪಿಎಸ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಚಿನ್ನಾಭರಣ ಮಳಿಗೆ ತುಂಬಾ ದಟ್ಟ ಹೊಗೆ ಆವರಿಸಿದ್ದರಿಂದ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sat, 16 March 24

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್