AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಕೇಸ್​​: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಕೇಸ್​​: ಶಾಸಕ ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲು
ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮೇಲೆ‌ ಎಫ್ಐಆರ್ ದಾಖಲು
Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 16, 2024 | 10:56 PM

ತುಮಕೂರು, ಮಾ.16: ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ಖಂಡಿಸಿ, ಕಳೆದ ಗುರುವಾರ ರಾತ್ರಿ PWD ಇಲಾಖೆ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದ‌. ಈ ವೇಳೆ ಪ್ರತಿಭಟನಾ ನಿರತರಾಗಿದ್ದ ರಾಯಸಂದ್ರ ರವಿಕುಮಾರ್ ಮೇಲೆ ಶಾಸಕ ಎಸ್ ಆರ್ ಶ್ರೀನಿವಾಸ್ ಹಾಗೂ ಸಹಚರರು ಏಕಾಏಕಿ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದರು.

ಶಾಸಕನ ಮೇಲೆ ಎಫ್​ಐಆರ್​ ದಾಖಲು

ಈ ಹಿನ್ನಲೆ ರಾಯಸಂದ್ರ ರವಿಕುಮಾರ್ ತುಮಕೂರಿನ ತಿಲಕ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇವರು ನೀಡಿದ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ವಿರುದ್ಧ ಇದೀಗ ಎಫ್ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 511, 506,504,143,149, 323,363 ಅಡಿಯಲ್ಲಿ ಎಫ್ಐಆರ್​ ದಾಖಲಿಸಲಾಗಿದ್ದು, ಈ ಕುರಿತು ತಿಲಕ್ ಪಾರ್ಕ್ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗ: ಯುವತಿಯನ್ನು ಫಾಲೋ ಮಾಡಿದ ಯುವಕ: ಬುದ್ಧಿ ಹೇಳಿದ್ದಕ್ಕೆ ಗ್ರಾಮಕ್ಕೆ ನುಗ್ಗಿ ಹಲ್ಲೆ

UPS ಬ್ಯಾಟರಿ ಸರ್ಕ್ಯೂಟ್ ಆಗಿ ಚಿನ್ನಾಭರಣ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ

ಬೆಂಗಳೂರು: ಜಾಲಹಳ್ಳಿಯ ಚೆಮ್ಮನೂರು ಚಿನ್ನಾಭರಣ ಮಳಿಗೆಯಲ್ಲಿ ಯುಪಿಎಸ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಚಿನ್ನಾಭರಣ ಮಳಿಗೆ ತುಂಬಾ ದಟ್ಟ ಹೊಗೆ ಆವರಿಸಿದ್ದರಿಂದ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:52 pm, Sat, 16 March 24

ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ಆರ್​ಸಿಬಿ ಫ್ಯಾನ್ಸ್ ಕಾಲ್ತುಳಿತ: ಚಂದನ್​ ಶೆಟ್ಟಿಗೂ ಪೊಲೀಸರ ಲಾಠಿ ಏಟು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ