AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರ: ಪ್ರತಿ ಕ್ವಿಂಟಾಲ್‌ಗೆ 11,750 ರೂ. ಬೆಂಬಲ ಬೆಲೆ ನಿಗದಿ

ನಾಪೇಡ್ ಕೇಂದ್ರದ ಮೂಲಕ ರೈತರ ಉಂಡೆ ಕೊಬ್ಬರಿ ಖರೀದಿ ಮಾಡಲು ಸರ್ಕಾರ ಆದೇಶಿಸಿದ್ದು, ಆ ಮೂಲಕ ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸರ್ಕಾರ ನಿಂತಿದೆ.

ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ನಿಂತ ಕೇಂದ್ರ ಸರ್ಕಾರ: ಪ್ರತಿ ಕ್ವಿಂಟಾಲ್‌ಗೆ 11,750 ರೂ. ಬೆಂಬಲ ಬೆಲೆ ನಿಗದಿ
ಪ್ರಾತಿನಿಧಿಕ ಚಿತ್ರImage Credit source: prajavani.net
TV9 Web
| Edited By: |

Updated on:Jan 27, 2023 | 11:23 PM

Share

ತುಮಕೂರು: ನಾಪೇಡ್ ಕೇಂದ್ರದ ಮೂಲಕ ರೈತರ ಉಂಡೆ ಕೊಬ್ಬರಿ (coconut) ಖರೀದಿ ಮಾಡಲು ಸರ್ಕಾರ ಆದೇಶಿಸಿದ್ದು, ಆ ಮೂಲಕ ಕೊಬ್ಬರಿ ಬೆಳೆಗಾರರ ಬೆಂಬಲಕ್ಕೆ ಕೇಂದ್ರ ಸರ್ಕಾರ ನಿಂತಿದೆ. ಪ್ರತಿ ಕ್ವಿಂಟಾಲ್​ಗೆ 11.750 ರೂ. ಬೆಂಬಲ ಬೆಲೆ ನೀಡಿ ಖರೀದಿಸಲು ಸರ್ಕಾರ ಮುಂದಾಗಿದೆ. ಕೊಬ್ಬರಿ ಬೆಲೆ 10 ಸಾವಿರ ರೂ. ಗೆ ಕುಸಿದಿದ್ದರಿಂದ ಬೆಂಬಲ ಬೆಲೆ ಘೋಷಿಸುವಂತೆ ರೈತರು ಒತ್ತಾಯಿಸಿದ್ದರು. ಬೆಂಬಲ ಬೆಲೆ ನೀಡಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸುವುದಾಗಿ ತಿಪಟೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ಕೊಟ್ಟಿದ್ದರು. 6 ತಿಂಗಳ ಕಾಲ 54,750 ಮೆಟ್ರಿಕ್ ಟನ್ ಕೊಬ್ಬರಿ ರೈತರಿಂದ ಖರೀದಿ ಮಾಡಲು ಸರ್ಕಾರ ಕ್ರಮಕೈಗೊಂಡಿದೆ.

ತೆಂಗು ಬೆಳೆಗಾರರಲ್ಲಿ ತೀರ್ವ ಆತಂಕ

ಕಳೆದ ವರ್ಷ ಕ್ವಿಂಟಲ್​​ಗೆ 18 ಸಾವಿರ ರೂ. ಇದ್ದ ಕೊಬ್ಬರಿ ಬೆಲೆ, ಇತ್ತೀಚೆಗೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಗಿಂತ ತೀವ್ರ ಕುಸಿತ ಉಂಟಾಗಿ ತೆಂಗು ಬೆಳೆಗಾರರಲ್ಲಿ ತೀರ್ವ ಆತಂಕ ಉಂಟು ಮಾಡಿತ್ತು. ಇತ್ತೀಚೆಗೆ ಕ್ವಿಂಟಲ್​ ಕೊಬ್ಬರಿ ಬೆಲೆ 18 ಸಾವಿರವರೆಗಿದ್ದು, ಬೆಳೆಗಾರರು ಒಂದು ರೀತಿಯಲ್ಲಿ ನೆಮ್ಮದಿ ಆಗಿದ್ದರು. ಆದರೆ ಕಳೆದ 4-5 ತಿಂಗಳಿಂದ ಕೊಬ್ಬರಿ ಬೆಲೆಯಲ್ಲಿ ಇಳಿಮುಖವಾಗಿ 13 ಸಾವಿರ ರೂ. ಗೆ ಬಂದಿತ್ತು. ಮತ್ತೆ ಕೆಲ ಒಂದೆರಡು ತಿಂಗಳಿಂದ ಕೊಬ್ಬರಿ ಬೆಲೆ ಕುಸಿಯುತ್ತಲೇ ಬಂದಿದ್ದು, ಕನಿಷ್ಠ ದರ 10, 200ಕ್ಕೆ ಬಂದಿತ್ತು. ಇದು ವರ್ತಕರು ಹಾಗೂ ತೆಂಗು ಬೆಳೆಗಾರರಲ್ಲಿ ತೀವ್ರ ಆತಂಕಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Wheat Price: ಗೋಧಿ ದರ ಭಾರೀ ಏರಿಕೆ, ನಿಯಂತ್ರಿಸಲು ಸರ್ಕಾರ ಸಾಹಸ

ಕೇಂದ್ರ ಸರ್ಕಾರ ಕೊಬ್ಬರಿ ಬೆಂಬಲ ಬೆಲೆಯನ್ನು 11 ಸಾವಿರಕ್ಕೆ ಈ ಹಿಂದೆ ನಿಗದಿಪಡಿಸಿತ್ತು. ಕಳೆದ ಕೆಲ ದಿನಗಳಿಂದ ಈ ಬೆಲೆಯನ್ನು 11, 750 ರೂ. ಏರಿಸಿದ್ದರೂ. ಆದರೆ ಇದು ಸರ್ಕಾರ ಆದೇಶವಾಗಿ ಇನ್ನು ಕಾರ್ಯರೂಪಕ್ಕೆ ಬಂದಿರಲಿಲ್ಲ. ಸದ್ಯ ಕೇಂದ್ರ ಸರ್ಕಾರ ಬೆಂಬಲ ಬೆಲೆಯನ್ನು ಘೋಷಿಸಿದ್ದು, ಇದು ತೆಂಗು ಬೆಳೆಗಾರರಿಗೆ ಖುಷಿ ತಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.   

Published On - 10:56 pm, Fri, 27 January 23

Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್